AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮುನ್ನಾರ್​ ರಸ್ತೆಯಲ್ಲಿ ಬಸ್​ ಎದುರು ಬಂದು ಗಾಜು ಒಡೆದ ಕಾಡಾನೆ; ಚಾಲಕ ಮಾಡಿದ್ದೇನು?

1 ನಿಮಿಷ 34 ಸೆಕೆಂಡುಗಳ ಈ ವಿಡಿಯೋದಲ್ಲಿ ಆನೆ ಬಸ್​ನ ಹತ್ತಿರವೇ ಬಂದು ನಿಲ್ಲುತ್ತದೆ. ಇದನ್ನು ಕಂಡು ಚಾಲಕ ಶಾಕ್ ಆಗುತ್ತಾನೆ.

Viral Video: ಮುನ್ನಾರ್​ ರಸ್ತೆಯಲ್ಲಿ ಬಸ್​ ಎದುರು ಬಂದು ಗಾಜು ಒಡೆದ ಕಾಡಾನೆ; ಚಾಲಕ ಮಾಡಿದ್ದೇನು?
ಆನೆಯ ವಿಡಿಯೋ ವೈರಲ್
TV9 Web
| Updated By: ಸುಷ್ಮಾ ಚಕ್ರೆ|

Updated on: Apr 06, 2022 | 7:56 PM

Share

ಕಾಡಿನ ಮಧ್ಯೆ ಹೋಗುವಾಗ ಇದ್ದಕ್ಕಿದ್ದಂತೆ ಆನೆ (Elephant) ಸಿಕ್ಕಿದರೆ ಏನಾಗುತ್ತದೆ? ಹೀಗೆ ವನ್ಯಜೀವಿಗಳು ಕಂಡಾಗ ನಾವು ಶಾಂತವಾಗಿ ಇರುವುದು ಬಹಳ ಮುಖ್ಯ. ಕಾಡು ಪ್ರಾಣಿಗಳಿಂದ ನಾವು ದೂರ ಇದ್ದಷ್ಟೂ ಪ್ರಾಣಿಗಳು ಹೆಚ್ಚು ನೆಮ್ಮದಿಯಾಗಿರುತ್ತವೆ. ಕೇರಳದಲ್ಲಿ ಆನೆಯೊಂದು ಬಸ್‌ ಎದುರು ಬಂದು ನಿಂತ ಭಯಾನಕ ದೃಶ್ಯದ ವಿಡಿಯೋ ವೈರಲ್ (Video Viral) ಆಗಿದೆ. ತನ್ನೆದುರು ಬಂದು ನಿಂತ ಆನೆಯನ್ನು ನೋಡಿ ಬಸ್ ಚಾಲಕ ಆಘಾತಕ್ಕೊಳಗಾಗಿದ್ದಾರೆ. ಆದರೆ, ಆತ ಆ ಕ್ಷಣದಲ್ಲಿ ತೋರಿದ ತಾಳ್ಮೆ, ಬುದ್ಧಿವಂತಿಕೆಗೆ ಅನೇಕ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಬಸ್‌ ಸಾಗುತ್ತಿರುವಾಗ ಕಾಡಾನೆಯೊಂದು ದೂರದಲ್ಲಿ ನಿಂತಿರುವ ದೃಶ್ಯದಿಂದ ವಿಡಿಯೋ ಶುರುವಾಗುತ್ತದೆ. 1 ನಿಮಿಷ 34 ಸೆಕೆಂಡುಗಳ ಈ ವಿಡಿಯೋದಲ್ಲಿ ಆನೆ ಬಸ್​ನ ಹತ್ತಿರವೇ ಬಂದು ನಿಲ್ಲುತ್ತದೆ. ಇದನ್ನು ಕಂಡು ಚಾಲಕ ಶಾಕ್ ಆಗುತ್ತಾನೆ. ಆದರೂ ತನ್ನ ಹೆದರಿಕೆಯನ್ನು ತೋರಿಸಿಕೊಳ್ಳದ ಆತ ಶಾಂತವಾಗಿಯೇ ಇದ್ದು, ಆನೆ ಹೋಗುವವರೆಗೂ ಕಾದಿದ್ದಾನೆ. ಬಹಳ ಹೊತ್ತು ಅಲ್ಲೇ ನಿಂತಿದ್ದ ಆನೆ ಆ ಬಸ್​ನ ಎದುರಿನ ಗಾಜನ್ನು ಒಡೆದಿದೆ. ನಂತರ ಅಲ್ಲಿಂದ ಪಕ್ಕಕ್ಕೆ ಸರಿದುಹೋಗಿದೆ.

ಆ ಚಾಲಕ ಯಾರೆಂದು ಗೊತ್ತಾಗಿಲ್ಲ. ಆದರೆ, ಆ ವಿಡಿಯೋವನ್ನು ನೋಡಿದರೆ ಅಲ್ಲಿ ಆಗಾಗ ಈ ರೀತಿ ಆನೆಗಳು ಎದುರಾಗುವುದು ಸಾಮಾನ್ಯವಾಗಿದ್ದು, ಚಾಲಕರಿಗೆ ಅದು ಅಭ್ಯಾಸವಾಗಿಬಿಟ್ಟಿದೆ ಎನಿಸುತ್ತದೆ. ಮುನ್ನಾರ್​ನಿಂದ ಉಡುಮಲ್‌ಪೇಟೆ ಮಾರ್ಗವಾಗಿ ತೆರಳುತ್ತಿದ್ದ ಕೇರಳ ರಸ್ತೆ ಸಾರಿಗೆ ಬಸ್‌ಗೆ ಮುನ್ನಾರ್‌ ಡಿವೈಎಸ್‌ಪಿ ಕಚೇರಿ ಬಳಿ ಕಾಡಾನೆಯೊಂದು ಎದುರಾಗಿದೆ. ಕೂಡಲೇ ಸಮಯ ಪ್ರಜ್ಞೆ ಮೆರೆದ ಚಾಲಕ, ಯಾವುದೇ ರೀತಿ ಹಾರ್ನ್ ಮಾಡದೆ​ ಆನೆ ಸ್ಥಳದಿಂದ ತೆರಳುವವರೆಗೆ ಕಾದು ಒಂಟಿ ಸಲಗ ಪಕ್ಕಕ್ಕೆ ಹೋದ ಬಳಿಕ ವಾಹನ ಚಲಾಯಿಸಿದ್ದಾರೆ.

ಆನ್‌ಲೈನ್‌ನಲ್ಲಿ ವೈರಲ್ ಆಗಿರುವ ಈ ವಿಡಿಯೋ 15 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಬಸ್ ಚಾಲಕ ತೋರಿದ ಧೈರ್ಯವನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: Viral Video: ದೇವಸ್ಥಾನದ ಒಡವೆ ಕದಿಯಲು ತಾನೇ ಕೊರೆದು ರಂಧ್ರದಲ್ಲಿ ಸಿಕ್ಕಿಹಾಕಿಕೊಂಡ ಕಳ್ಳ; ಆಮೇಲೇನಾಯ್ತು?

Viral Video: ಬಾಯಾರಿದ ಕೋತಿಗೆ ನೀರು ಕುಡಿಸಿದ ಟ್ರಾಫಿಕ್ ಪೊಲೀಸ್; ಹೃದಯಸ್ಪರ್ಶಿ ವಿಡಿಯೋಗೆ ನೆಟ್ಟಿಗರ ಮೆಚ್ಚುಗೆ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್