AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಾಕಿದ ಮಾಲಿಕನಿಗೆ ಯಮನಾದ ಗಜ; ಮಾವುತನನ್ನು ತುಳಿದು ಸಾಯಿಸಿದ ಆನೆ

ಮಾವುತನನ್ನು ಆನೆಯೊಂದು ಭೀಕರವಾಗಿ ತುಳಿದು ಸಾಯಿಸಿರುವ ಘಟನೆ ಕೇರಳದಲ್ಲಿ ಸಂಭವಿಸಿದೆ. ಬಲಿಯಾದ ಮಾವುತ ನೀಲೇಶ್ವರಂನ ಬಾಲಕೃಷ್ಣನ್ (62) ಎಂದು ಗುರುತಿಸಲಾಗಿದ್ದು, ಬಾಲಕೃಷ್ಣನ್ ಅಡಿಮಲಿ ಸಮೀಪದ ಕಲ್ಲರ್‌ನಲ್ಲಿರುವ ಖಾಸಗಿ ಸಫಾರಿ ಕೇಂದ್ರದಲ್ಲಿ ಕಳೆದ ಹಲವು ವರ್ಷಗಳಿಂದ ಮಾವುತನಾಗಿ ಕೆಲಸನಿರ್ವಹಿಸುತ್ತಿದ್ದರು.

Viral Video: ಸಾಕಿದ ಮಾಲಿಕನಿಗೆ ಯಮನಾದ ಗಜ; ಮಾವುತನನ್ನು ತುಳಿದು ಸಾಯಿಸಿದ ಆನೆ
ಅಕ್ಷತಾ ವರ್ಕಾಡಿ
|

Updated on:Jun 22, 2024 | 5:37 PM

Share

ಕೇರಳ: ಮಾವುತನನ್ನು ಆನೆಯೊಂದು ಭೀಕರವಾಗಿ ತುಳಿದು ಸಾಯಿಸಿರುವ ಘಟನೆ ಕೇರಳದ ಇಡುಕ್ಕಿಯಲ್ಲಿ ಸಂಭವಿಸಿದೆ. ಜೂನ್ 20 ರಂದು ಈ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಮಾವುತನನ್ನೇ ಭೀಕರವಾಗಿ ಕೊಂದಿರುವುದು ಈ ವಿಡಿಯೋ ನಿಮ್ಮ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ. ದೇಹದ ಪ್ರತಿಯೊಂದು ಮೂಳೆಯು ಪುಡಿಯಾಗುವಂತೆ ಆನೆ ಮಾವುತನನ್ನು ತುಳಿದು ಬಿಸಾಕಿದೆ.

ಬಲಿಯಾದ ಮಾವುತ ನೀಲೇಶ್ವರಂನ 62 ವರ್ಷದ ಬಾಲಕೃಷ್ಣನ್ ಎಂದು ಗುರುತಿಸಲಾಗಿದ್ದು, ಅಡಿಮಲಿ ಸಮೀಪದ ಕಲ್ಲರ್‌ನಲ್ಲಿರುವ ಖಾಸಗಿ ಸಫಾರಿ ಕೇಂದ್ರವಾದ ಕೇರಳ ಫಾರ್ಮ್‌ನಲ್ಲಿ ಸಂಜೆ 6:30 ರ ಸುಮಾರಿಗೆ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಆನೆ ದಾಳಿ ಮಾಡಿದಾಗ ಬಾಲಕೃಷ್ಣನ್ ಪ್ರವಾಸಿಗರನ್ನು ಸಫಾರಿಗೆ ಕರೆದೊಯ್ಯಲು ಕಾಯುತ್ತಿದ್ದ ಎಂದು ತಿಳಿದುಬಂದಿದೆ. ಪ್ರವಾಸಿಗರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮಾವುತನ ಶವವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಲೋನ್‌ಗೆಂದು ಹೋಗಿ ಬ್ಯಾಂಕ್ ಸಿಇಒನನ್ನೇ ತನ್ನ ಬಲೆಗೆ ಬೀಳಿಸಿ 4 ಕೋಟಿ ರೂ. ದೋಚಿದ ಮಹಿಳೆ

@ManyFaces_Death ಎಂಬ ಟ್ವಿಟರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಇಂದು (ಜೂ.22)ರಂದು ವಿಡಿಯೋ ಹಂಚಿಕೊಳ್ಳಲಾಗಿದ್ದು, ಕೆಲವೇ ಗಂಟೆಗಳಲ್ಲಿ 3.3 ಮಿಲಿಯನ್​​ ಅಂದರೆ 30 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಈ ವಿಡಿಯೋ ಒಂದು ಲಕ್ಷ ನಿಮ್ಮನ್ನು ಬೆಚ್ಚಿ ಬೀಳಿಸುವುದಂತೂ ಖಂಡಿತಾ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:32 pm, Sat, 22 June 24

Follow Us
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ