AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆ ಬಂತೊಂದಾನೆ, ಅಸ್ಸಾಮಿಂದ ಬಂತೊ, ಪಾನೀಪುರಿ ತಿಂತೋ

Elephant Spotted Enjoying Panipuris : ‘ರುಚಿಯಾಗಿದ್ದನ್ನು ಯಾವಾಗಲೂ ಸ್ವಲ್ಪೇ ತಿನ್ನಬೇಕು, ಹೊಟ್ಟೇತುಂಬಾ ತಿಂದು ತೇಗೋದಲ್ಲ. ಈಗ ನೋಡಿ ನನ್ನ ದೊಡ್ಡಹೊಟ್ಟೆಗೆ ಈ ಪುಟ್ಟಪುಟ್ಟ ಪಾನೀಪುರಿ ಉರುಳಿಸಿಕೊಳ್ತಿದೀನಲ್ಲ ಹೀಗೆ...’

ಆನೆ ಬಂತೊಂದಾನೆ, ಅಸ್ಸಾಮಿಂದ ಬಂತೊ, ಪಾನೀಪುರಿ ತಿಂತೋ
Elephant Spotted Enjoying Panipuris At Roadside Stall in Assam
TV9 Web
| Edited By: |

Updated on:Oct 12, 2022 | 12:44 PM

Share

Viral Video : ಒಂದು ಕೊಟ್ಟಾ, ಎರಡು ಕೊಟ್ಟಾ, ಮೂರು ಕೊಟ್ಟಾ, ನಾಲ್ಕು ಕೊಟ್ಟಾ ಕೊಟ್ಟಾ ಕೊಟ್ಟಾ… ನಾಲ್ಕು ಸಾವಿರ ಪಾನೀಪುರಿ ಕೊಟ್ಟರೂ ತುಂಬದು ಈ ಗಜರಾಯನ ಹೊಟ್ಟೆ. ಅಂತೂ ಮನುಷ್ಯನ ಸಹವಾಸಕ್ಕೆ ಬಿದ್ದು ಕಾಡುಪ್ರಾಣಿಗಳು ಹೀಗೆಲ್ಲಾ ‘ರುಚಿಭ್ರಮಣೆ’ಗೊಳಗಾಗಿ ಹಾಳಾಗ್ತಿವೆ ಅಂದಹಾಗಾಯ್ತು! ಪಾನೀಪುರಿ, ಗೋಲ್ಗಪ್ಪ, ಪುಚ್ಕಾ ಎಷ್ಟೊಂದು ಹೆಸರುಗಳು ಈ ಬೀದಿಬದಿಯ ತಿಂಡಿಗೆ. ಇಡೀ ದೇಶದ ಜನತೆಯ ನಾಲಗೆಯನ್ನು ತನ್ನ ಸ್ವಾಧೀನದಲ್ಲಿರಿಸಿಕೊಂಡ ಕೀರ್ತಿ ಈ ಪಾನೀಪುರಿಯದು. ಮನುಷ್ಯರು ಸಾಲದು ಅಂತ ಈಗ ಕಾಡಿನ ಪ್ರಾಣಿಗಳ ನಾಲಗೆಗೂ ಲಗ್ಗೆ ಇಡಲು ಆರಂಭಿಸಿದೆ! ಈಗ ವೈರಲ್ ಆಗುತ್ತಿರುವ ಈ ವಿಡಿಯೋ ಆಸ್ಸಾಮಿನಲ್ಲಿ ಸೆರೆಹಿಡಿದಿದ್ದು.

ಹೀಗಿವನು ಆನೆಗೆ ಪಾನೀಪುರಿ ತಿನ್ನಿಸುತ್ತಿರುವುದನ್ನು ನೋಡಲು ಸುತ್ತಲೂ ಜನ ಜಮಾಯಿಸಿದ್ದಾರೆ, ತಮ್ಮ ತಮ್ಮ ಮೊಬೈಲುಗಳಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದಾರೆ. ನೆಟ್ಟಿಗರಿಗಂತೂ ಈ ವಿಡಿಯೋ ಬಹಳ ಮಜಾ ಕೊಡುತ್ತಿದೆ.  ‘ಸುಕ್ಕಾ ಪುರಿ ಭೀ ದೇನಾ ಉಸ್ಕೋ’ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ‘ಮನುಷ್ಯರೇ ಯಾಕೆ ಎಲ್ಲವನ್ನೂ ಅನುಭವಿಸಿ ಖುಷಿಪಡಬೇಕು, ನಾನೂ ತಿಂದು ಖುಷಿಪಡುತ್ತೇನೆ’ ಎಂದು ಆನೆಯ ಪರವಾಗಿ ಒಬ್ಬರು ಪ್ರತಿಕ್ರಿಯಿಸಿದ್ದಾರೆ.

‘ಭಾರತವು ಇಲಿಯಿಂದ ಆನೆಯವರೆಗೂ ಎಲ್ಲ ಪ್ರಾಣಿಗಳನ್ನು ಆರಾಧಿಸುವ ದೇಶವಾಗಿದೆ. ಇಲ್ಲಿ ಹುಲಿಯೂ ದೋಣಿಯಲ್ಲಿ ಮನುಷ್ಯನೊಂದಿಗೆ ಪ್ರಯಾಣಿಸಬಹುದು. ಆನೆಯೂ ರಸ್ತೆಬದಿ ಗೋಲ್ಗಪ್ಪ ತಿನ್ನಬಹುದು, ಇಲಿಗಳು ದೇವಸ್ಥಾನದಲ್ಲಿ ಹಾಲು ಕುಡಿಯಬಹುದು. ನಮ್ಮ ಪ್ರಕೃತಿ ಮತ್ತು ಪ್ರಾಣಿಗಳ ಮೇಲಿನ ಪ್ರೀತಿಯು ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗ’ ಎಂದು ಶ್ಲಾಘಿಸಿದ್ದಾರೆ ಮಗದೊಬ್ಬ ನೆಟ್ಟಿಗರು.

ಈಗ ನಿಮ್ಮನೆಗೆ ಈ ಆನೆ ಬಂದರೆ ಏನು ಕೊಡುತ್ತೀರಿ ತಿನ್ನಲು?

ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:36 pm, Wed, 12 October 22

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ