AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆ ಬಂತೊಂದಾನೆ, ಅಸ್ಸಾಮಿಂದ ಬಂತೊ, ಪಾನೀಪುರಿ ತಿಂತೋ

Elephant Spotted Enjoying Panipuris : ‘ರುಚಿಯಾಗಿದ್ದನ್ನು ಯಾವಾಗಲೂ ಸ್ವಲ್ಪೇ ತಿನ್ನಬೇಕು, ಹೊಟ್ಟೇತುಂಬಾ ತಿಂದು ತೇಗೋದಲ್ಲ. ಈಗ ನೋಡಿ ನನ್ನ ದೊಡ್ಡಹೊಟ್ಟೆಗೆ ಈ ಪುಟ್ಟಪುಟ್ಟ ಪಾನೀಪುರಿ ಉರುಳಿಸಿಕೊಳ್ತಿದೀನಲ್ಲ ಹೀಗೆ...’

ಆನೆ ಬಂತೊಂದಾನೆ, ಅಸ್ಸಾಮಿಂದ ಬಂತೊ, ಪಾನೀಪುರಿ ತಿಂತೋ
Elephant Spotted Enjoying Panipuris At Roadside Stall in Assam
TV9 Web
| Edited By: |

Updated on:Oct 12, 2022 | 12:44 PM

Share

Viral Video : ಒಂದು ಕೊಟ್ಟಾ, ಎರಡು ಕೊಟ್ಟಾ, ಮೂರು ಕೊಟ್ಟಾ, ನಾಲ್ಕು ಕೊಟ್ಟಾ ಕೊಟ್ಟಾ ಕೊಟ್ಟಾ… ನಾಲ್ಕು ಸಾವಿರ ಪಾನೀಪುರಿ ಕೊಟ್ಟರೂ ತುಂಬದು ಈ ಗಜರಾಯನ ಹೊಟ್ಟೆ. ಅಂತೂ ಮನುಷ್ಯನ ಸಹವಾಸಕ್ಕೆ ಬಿದ್ದು ಕಾಡುಪ್ರಾಣಿಗಳು ಹೀಗೆಲ್ಲಾ ‘ರುಚಿಭ್ರಮಣೆ’ಗೊಳಗಾಗಿ ಹಾಳಾಗ್ತಿವೆ ಅಂದಹಾಗಾಯ್ತು! ಪಾನೀಪುರಿ, ಗೋಲ್ಗಪ್ಪ, ಪುಚ್ಕಾ ಎಷ್ಟೊಂದು ಹೆಸರುಗಳು ಈ ಬೀದಿಬದಿಯ ತಿಂಡಿಗೆ. ಇಡೀ ದೇಶದ ಜನತೆಯ ನಾಲಗೆಯನ್ನು ತನ್ನ ಸ್ವಾಧೀನದಲ್ಲಿರಿಸಿಕೊಂಡ ಕೀರ್ತಿ ಈ ಪಾನೀಪುರಿಯದು. ಮನುಷ್ಯರು ಸಾಲದು ಅಂತ ಈಗ ಕಾಡಿನ ಪ್ರಾಣಿಗಳ ನಾಲಗೆಗೂ ಲಗ್ಗೆ ಇಡಲು ಆರಂಭಿಸಿದೆ! ಈಗ ವೈರಲ್ ಆಗುತ್ತಿರುವ ಈ ವಿಡಿಯೋ ಆಸ್ಸಾಮಿನಲ್ಲಿ ಸೆರೆಹಿಡಿದಿದ್ದು.

ಹೀಗಿವನು ಆನೆಗೆ ಪಾನೀಪುರಿ ತಿನ್ನಿಸುತ್ತಿರುವುದನ್ನು ನೋಡಲು ಸುತ್ತಲೂ ಜನ ಜಮಾಯಿಸಿದ್ದಾರೆ, ತಮ್ಮ ತಮ್ಮ ಮೊಬೈಲುಗಳಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದಾರೆ. ನೆಟ್ಟಿಗರಿಗಂತೂ ಈ ವಿಡಿಯೋ ಬಹಳ ಮಜಾ ಕೊಡುತ್ತಿದೆ.  ‘ಸುಕ್ಕಾ ಪುರಿ ಭೀ ದೇನಾ ಉಸ್ಕೋ’ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ‘ಮನುಷ್ಯರೇ ಯಾಕೆ ಎಲ್ಲವನ್ನೂ ಅನುಭವಿಸಿ ಖುಷಿಪಡಬೇಕು, ನಾನೂ ತಿಂದು ಖುಷಿಪಡುತ್ತೇನೆ’ ಎಂದು ಆನೆಯ ಪರವಾಗಿ ಒಬ್ಬರು ಪ್ರತಿಕ್ರಿಯಿಸಿದ್ದಾರೆ.

‘ಭಾರತವು ಇಲಿಯಿಂದ ಆನೆಯವರೆಗೂ ಎಲ್ಲ ಪ್ರಾಣಿಗಳನ್ನು ಆರಾಧಿಸುವ ದೇಶವಾಗಿದೆ. ಇಲ್ಲಿ ಹುಲಿಯೂ ದೋಣಿಯಲ್ಲಿ ಮನುಷ್ಯನೊಂದಿಗೆ ಪ್ರಯಾಣಿಸಬಹುದು. ಆನೆಯೂ ರಸ್ತೆಬದಿ ಗೋಲ್ಗಪ್ಪ ತಿನ್ನಬಹುದು, ಇಲಿಗಳು ದೇವಸ್ಥಾನದಲ್ಲಿ ಹಾಲು ಕುಡಿಯಬಹುದು. ನಮ್ಮ ಪ್ರಕೃತಿ ಮತ್ತು ಪ್ರಾಣಿಗಳ ಮೇಲಿನ ಪ್ರೀತಿಯು ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗ’ ಎಂದು ಶ್ಲಾಘಿಸಿದ್ದಾರೆ ಮಗದೊಬ್ಬ ನೆಟ್ಟಿಗರು.

ಈಗ ನಿಮ್ಮನೆಗೆ ಈ ಆನೆ ಬಂದರೆ ಏನು ಕೊಡುತ್ತೀರಿ ತಿನ್ನಲು?

ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:36 pm, Wed, 12 October 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್