AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆ ಬಂತೊಂದಾನೆ, ಅಸ್ಸಾಮಿಂದ ಬಂತೊ, ಪಾನೀಪುರಿ ತಿಂತೋ

Elephant Spotted Enjoying Panipuris : ‘ರುಚಿಯಾಗಿದ್ದನ್ನು ಯಾವಾಗಲೂ ಸ್ವಲ್ಪೇ ತಿನ್ನಬೇಕು, ಹೊಟ್ಟೇತುಂಬಾ ತಿಂದು ತೇಗೋದಲ್ಲ. ಈಗ ನೋಡಿ ನನ್ನ ದೊಡ್ಡಹೊಟ್ಟೆಗೆ ಈ ಪುಟ್ಟಪುಟ್ಟ ಪಾನೀಪುರಿ ಉರುಳಿಸಿಕೊಳ್ತಿದೀನಲ್ಲ ಹೀಗೆ...’

ಆನೆ ಬಂತೊಂದಾನೆ, ಅಸ್ಸಾಮಿಂದ ಬಂತೊ, ಪಾನೀಪುರಿ ತಿಂತೋ
Elephant Spotted Enjoying Panipuris At Roadside Stall in Assam
TV9 Web
| Edited By: ಶ್ರೀದೇವಿ ಕಳಸದ|

Updated on:Oct 12, 2022 | 12:44 PM

Share

Viral Video : ಒಂದು ಕೊಟ್ಟಾ, ಎರಡು ಕೊಟ್ಟಾ, ಮೂರು ಕೊಟ್ಟಾ, ನಾಲ್ಕು ಕೊಟ್ಟಾ ಕೊಟ್ಟಾ ಕೊಟ್ಟಾ… ನಾಲ್ಕು ಸಾವಿರ ಪಾನೀಪುರಿ ಕೊಟ್ಟರೂ ತುಂಬದು ಈ ಗಜರಾಯನ ಹೊಟ್ಟೆ. ಅಂತೂ ಮನುಷ್ಯನ ಸಹವಾಸಕ್ಕೆ ಬಿದ್ದು ಕಾಡುಪ್ರಾಣಿಗಳು ಹೀಗೆಲ್ಲಾ ‘ರುಚಿಭ್ರಮಣೆ’ಗೊಳಗಾಗಿ ಹಾಳಾಗ್ತಿವೆ ಅಂದಹಾಗಾಯ್ತು! ಪಾನೀಪುರಿ, ಗೋಲ್ಗಪ್ಪ, ಪುಚ್ಕಾ ಎಷ್ಟೊಂದು ಹೆಸರುಗಳು ಈ ಬೀದಿಬದಿಯ ತಿಂಡಿಗೆ. ಇಡೀ ದೇಶದ ಜನತೆಯ ನಾಲಗೆಯನ್ನು ತನ್ನ ಸ್ವಾಧೀನದಲ್ಲಿರಿಸಿಕೊಂಡ ಕೀರ್ತಿ ಈ ಪಾನೀಪುರಿಯದು. ಮನುಷ್ಯರು ಸಾಲದು ಅಂತ ಈಗ ಕಾಡಿನ ಪ್ರಾಣಿಗಳ ನಾಲಗೆಗೂ ಲಗ್ಗೆ ಇಡಲು ಆರಂಭಿಸಿದೆ! ಈಗ ವೈರಲ್ ಆಗುತ್ತಿರುವ ಈ ವಿಡಿಯೋ ಆಸ್ಸಾಮಿನಲ್ಲಿ ಸೆರೆಹಿಡಿದಿದ್ದು.

ಹೀಗಿವನು ಆನೆಗೆ ಪಾನೀಪುರಿ ತಿನ್ನಿಸುತ್ತಿರುವುದನ್ನು ನೋಡಲು ಸುತ್ತಲೂ ಜನ ಜಮಾಯಿಸಿದ್ದಾರೆ, ತಮ್ಮ ತಮ್ಮ ಮೊಬೈಲುಗಳಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದಾರೆ. ನೆಟ್ಟಿಗರಿಗಂತೂ ಈ ವಿಡಿಯೋ ಬಹಳ ಮಜಾ ಕೊಡುತ್ತಿದೆ.  ‘ಸುಕ್ಕಾ ಪುರಿ ಭೀ ದೇನಾ ಉಸ್ಕೋ’ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ‘ಮನುಷ್ಯರೇ ಯಾಕೆ ಎಲ್ಲವನ್ನೂ ಅನುಭವಿಸಿ ಖುಷಿಪಡಬೇಕು, ನಾನೂ ತಿಂದು ಖುಷಿಪಡುತ್ತೇನೆ’ ಎಂದು ಆನೆಯ ಪರವಾಗಿ ಒಬ್ಬರು ಪ್ರತಿಕ್ರಿಯಿಸಿದ್ದಾರೆ.

‘ಭಾರತವು ಇಲಿಯಿಂದ ಆನೆಯವರೆಗೂ ಎಲ್ಲ ಪ್ರಾಣಿಗಳನ್ನು ಆರಾಧಿಸುವ ದೇಶವಾಗಿದೆ. ಇಲ್ಲಿ ಹುಲಿಯೂ ದೋಣಿಯಲ್ಲಿ ಮನುಷ್ಯನೊಂದಿಗೆ ಪ್ರಯಾಣಿಸಬಹುದು. ಆನೆಯೂ ರಸ್ತೆಬದಿ ಗೋಲ್ಗಪ್ಪ ತಿನ್ನಬಹುದು, ಇಲಿಗಳು ದೇವಸ್ಥಾನದಲ್ಲಿ ಹಾಲು ಕುಡಿಯಬಹುದು. ನಮ್ಮ ಪ್ರಕೃತಿ ಮತ್ತು ಪ್ರಾಣಿಗಳ ಮೇಲಿನ ಪ್ರೀತಿಯು ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗ’ ಎಂದು ಶ್ಲಾಘಿಸಿದ್ದಾರೆ ಮಗದೊಬ್ಬ ನೆಟ್ಟಿಗರು.

ಈಗ ನಿಮ್ಮನೆಗೆ ಈ ಆನೆ ಬಂದರೆ ಏನು ಕೊಡುತ್ತೀರಿ ತಿನ್ನಲು?

ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:36 pm, Wed, 12 October 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ