AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಅಪ್ಪ-ಅಮ್ಮನಿಗೆ ಒಂದು ಮಗು ಸಾಕು, ಆದರೆ ನನಗೆ ಒಬ್ಬ ತಮ್ಮ ಬೇಕಲ್ಲ, ನನ್ನ ಕಷ್ಟ ಯಾರಿಗೆ ಹೇಳೋದು?

ಮಕ್ಕಳಿರಲವ್ವ ಮನೆ ತುಂಬಾ ಎನ್ನುವ ಮಾತಿನಂತೆ ಹಿಂದಿನ ಕಾಲದಲ್ಲಿ ದಂಪತಿಗಳಿಗೆ ಹತ್ತಕ್ಕೂ ಹೆಚ್ಚು ಮಕ್ಕಳಿರುತ್ತಿದ್ದರು. ಆದಾದ ಬಳಿಕ ಆರತಿಗೊಬ್ಬಳು ಮಗಳು, ಕೀರ್ತಿಗೊಬ್ಬ ಮಗ ಎನ್ನುವ ಕಾಲವು ಬಂದಿತು. ಇದೀಗ ದಂಪತಿಗಳು ಒಂದೇ ಮಗು ಸಾಕು ಎನ್ನುವಲ್ಲಿಗೆ ಬಂದು ತಲುಪಿದ್ದಾರೆ. ಸದ್ಯಕ್ಕೆ ವೈರಲ್ ಆಗಿರುವ ವಿಡಿಯೋದಲ್ಲಿ ಪುಟಾಣಿ ಬಾಲಕಿಯೊಬ್ಬಳು, 'ನನಗೆ ಆಟ ಆಡಲು ಯಾರು ಇಲ್ಲ, ನಾನು ಒಂಟಿ' ಎಂದು ತಂದೆ ತಾಯಿಯ ಮುಂದೆ ಕಣ್ಣೀರು ಸುರಿಸುತ್ತಿದ್ದಾಳೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಬಾಲಕಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Viral Video : ಅಪ್ಪ-ಅಮ್ಮನಿಗೆ ಒಂದು ಮಗು ಸಾಕು, ಆದರೆ ನನಗೆ ಒಬ್ಬ ತಮ್ಮ ಬೇಕಲ್ಲ, ನನ್ನ ಕಷ್ಟ ಯಾರಿಗೆ ಹೇಳೋದು?
ಸಾಯಿನಂದಾ
| Edited By: |

Updated on: May 08, 2024 | 3:00 PM

Share

ಇಂದಿನ ಜೀವನ ಶೈಲಿ ಹಾಗೂ ಕುಟುಂಬ ವ್ಯವಸ್ಥೆಯೂ ಸಂಪೂರ್ಣವಾಗಿ ಬದಲಾಗಿದೆ. ನಗರ ಸೇರಿದಂತೆ ಹಳ್ಳಿ ಪ್ರದೇಶಗಳಲ್ಲಿಯೂ ಕೂಡು ಕುಟುಂಬದ ಬದಲಾಗಿ ವಿಭಕ್ತ ಕುಟುಂಬಗಳ ಸಂಖ್ಯೆಯೂ ಹೆಚ್ಚಾಗುತ್ತಿವೆ. ಅದಲ್ಲದೇ ಉದ್ಯೋಗದಲ್ಲಿರುವ ದಂಪತಿಗಳು ಒಂದೇ ಒಂದು ಮಗು ಸಾಕು ಎನ್ನುವಲ್ಲಿಗೆ ಬಂದು ತಲುಪಿದ್ದಾರೆ. ಉದ್ಯೋಗದಲ್ಲಿರುವ ದಂಪತಿಗಳಿಗೆ ಮಕ್ಕಳನ್ನು ನೋಡಿಕೊಳ್ಳಲು ಸಮಯವಿಲ್ಲ.ಅದಲ್ಲದೇ, ಒಂದು ಮಗುವನ್ನು ಸಾಕುವುದೇ ಕಷ್ಟವೆನ್ನುವಂತಾಗಿದೆ. ವೆಚ್ಚಗಳು ಹೆಚ್ಚಾಗುತ್ತಿದ್ದಂತೆ ಮಕ್ಕಳಿಗೆ ಯಾವುದೇ ಕೊರತೆಯೂ ಬಾರದಂತೆ ನೋಡಿಕೊಳ್ಳಬೇಕೆನ್ನುವ ಇಚ್ಛೆ ತಂದೆತಾಯಿಯರದ್ದು. ಹೀಗಾಗಿ ಒಂದೇ ಮಗು ಸಾಕು, ಆ ಮಗುವಿಗೆ ಒಳ್ಳೆಯ ವಿದ್ಯಾಭ್ಯಾಸವನ್ನು ಕೊಡಿಸಿ ಉತ್ತಮ ಜೀವನಕಟ್ಟಿಕೊಡಬೇಕೆಂದು ಕೊಂಡು ಫ್ಯಾಮಿಲಿ ಪ್ಲಾನಿಂಗ್ ನತ್ತ ಗಮನ ಹರಿಸುತ್ತಿದ್ದಾರೆ.

ಇದರ ನಡುವೆ ಒಂಟಿಯಾಗಿ ಬೆಳೆಯುವ ಮಗುವಿಗೆ ತನ್ನವರು ಯಾರು ಇಲ್ಲ ಎನ್ನುವ ಭಾವವೊಂದು ಮೂಡುತ್ತದೆ. ಕೆಲವು ಮಕ್ಕಳು ತಮ್ಮ ನಡವಳಿಕೆಯಲ್ಲಿ ವ್ಯಕ್ತಪಡಿಸುತ್ತಾರೆ. ಇಂತಹದೊಂದು ವಿಡಿಯೋವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ‘ಸ್ಕೂಲ್ ನಲ್ಲಿರುವ ಎಲ್ಲರಿಗೂ ಅಕ್ಕ ತಮ್ಮ, ಅಣ್ಣ ತಂಗಿಯಿದ್ದಾರೆ ನನಗೆ ಯಾರು ಇಲ್ಲ ಎಂದು ತನ್ನ ತಂದೆ ತಾಯಿಯ ಮುಂದೆ ಅಳುತ್ತಿರುವ ಪುಟ್ಟ ಬಾಲಕಿಯೂ ವಿಡಿಯೋ ಇದಾಗಿದೆ.

ಈ ವಿಡಿಯೋವನ್ನು ಅಶೋಕ್ ಕುಮಾರ್ ಕೆಬಿ ಎನ್ನುವವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದು, ‘ಒಂದು ಮಗು ಸಾಕು ಹೇಳುವವರ ಕಣ್ಣು ತೆರೆಸಿದ ಮಗು’ ಎಂದು ಬರೆದುಕೊಂಡಿದ್ದಾರೆ. ಈ ವಿಡಿಯೋದಲ್ಲಿ ಶಾಲೆಯಿಂದ ಬಂದ ಪುಟ್ಟ ಹುಡುಗಿಯೂ ತನ್ನ ತಂದೆ ತಾಯಿಯ ಮುಂದೆ, ತನಗೆ ಯಾರು ಇಲ್ಲ, ತನ್ನ ಸ್ನೇಹಿತರಿಗೆ ಅಕ್ಕ ತಂಗಿ, ಅಣ್ಣ ತಮ್ಮ ಇದ್ದಾರೆ. ನನಗೆ ಮಾತ್ರ ಅಣ್ಣ ಅಕ್ಕ ತಮ್ಮ ಯಾರು ಇಲ್ಲ, ನಾನು ಒಂಟಿಯಾಗಿ ಇರುವುದಾ ಎಂದು ಪ್ರಶ್ನಿಸಿದ್ದಾಳೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದಕ್ಕೆ ಬಾಲಕಿಯ ತಾಯಿ ಸಮಾಧಾನ ಪಡಿಸುತ್ತ, ಯಾರು ಹೇಳಿದ್ದು ನೀನು ಒಂಟಿ ಹೇಳಿ, ನಾನು ಮತ್ತೆ ಪಪ್ಪಾ ಇಲ್ವಾ ನಿಂಗೆ ಎನ್ನುತ್ತಿದ್ದಂತೆ ಜೋರಾಗಿಅತ್ತಿದ್ದಾಳೆ. ಬಾಲಕಿಯೂ ಬಿಕ್ಕುತ್ತ ನೀವಿದ್ರಿ. ಆದರೆ ಅಪ್ಪ ಅಮ್ಮ ದೊಡ್ಡವರು, ದೊಡ್ಡವರೊಟ್ಟಿಗೆ ಆಟ ಆಡುವುದಕ್ಕೆ ಆಗುವುದಿಲ್ಲ ಎಂದಿದ್ದಾಳೆ. ಅಪ್ಪ ನಿನ್ನ ಜೊತೆಗೆ ಆಟ ಆಡುವುದಿಲ್ವ, ಮಕ್ಕಳು ಆಟ ಆಡುವುದಿಲ್ಲ ಬರೆದ್ಕೊಳ್ತಾರೆ ಎಂದು ತಾಯಿಯು ಸಮಾಧಾನ ಪಡಿಸಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು.

ನಿಂಗೆ ನಮಿಷಣ್ಣ ಇದ್ದಾನೆ ಅಲ್ವಾ ಎನ್ನುತ್ತಿದ್ದಂತೆ, ಸ್ವಂತ ಅಣ್ಣ ಅಲ್ಲ ಅಲ್ವಾ ಎಂದಿದ್ದಾಳೆ. ಸ್ವಂತ ಅಣ್ಣ ಅಂತ ಅಂದ್ಕೋ ಎಂದು ತಾಯಿ ಹೇಳುತ್ತಿದ್ದಂತೆ, ಸ್ವಂತ ಅಣ್ಣ ಅಂದ್ರೆ ನಮ್ಮ ಮನೆಯಲ್ಲಿರಬೇಕು, ಬೇರೆಯವರ ಮನೆಯಲ್ಲಿದ್ರೆ ಎಂತ ಅದು ಎಂದು ಪುಟಾಣಿಯೂ ಅಳುತ್ತಾ ಕೇಳಿದ್ದಾಳೆ. ಹಾಗಾದ್ರೆ ನಮ್ಮ ಮನೆಯಲ್ಲಿ ಕರ್ಕೊಂಡು ಬಂದು ಇಟ್ಟುಕೊಳ್ಳುವ ಎಂದು ತಾಯಿ ಹೇಳುತ್ತಿದ್ದಂತೆ ಈ ಪುಟಾಣಿಯೂ ಅವರ ಅಮ್ಮ ಎಂತ ಮಾಡೋದು ಎಂದು ಮುಗ್ದವಾಗಿ ಪ್ರಶ್ನಿಸಿದ್ದಾಳೆ.

ಇದನ್ನೂ ಓದಿ: ನಾಲ್ಕು ಇಂಚಿನ ಬಾಲದೊಂದಿಗೆ ಜನಿಸಿದ ಮಗು; ಬೆರಗಾದ ವೈದ್ಯ ಲೋಕ 

ಇತ್ತ ಮಗಳನ್ನು ಸಮಾಧಾನ ಪಡಿಸುವ ನಿಟ್ಟಿನಲ್ಲಿ ತಾಯಿಯು, ಅವರ ಅಮ್ಮ ಅಪ್ಪ ಬೇರೆ ಮಗು ಮಾಡಿಕೊಳ್ತಾರೆ ನಿಂಗೆ ಇದಾದ್ರು ಅಡ್ಡಿಲ್ವಾ ಹಂಗೆ ಮಾಡುವನಾ ಎಂದು ಹೇಳುತ್ತಿರುವುದನ್ನು ಈ ವಿಡಿಯೋದ ಕೊನೆಯಲ್ಲಿ ನೋಡಬಹುದು. ಸೋಶಿಯಲ್ ಮೀಡಿಯಾದಲ್ಲಿ ಈ ತುಣುಕೊಂದು ವೈರಲ್ ಆಗುತ್ತಿದ್ದು, 2.3 ಕೆ ಯಷ್ಟು ಶೇರ್ ಮಾಡಿಕೊಳ್ಳಲಾಗಿದ್ದು ನಾನಾ ರೀತಿಯ ಕಾಮೆಂಟ್ ಗಳು ವ್ಯಕ್ತವಾಗಿವೆ.

ಈ ವಿಡಿಯೋ ನೋಡಿದ ಬಳಕೆದಾರರೊಬ್ಬರು ಕಾಮೆಂಟ್ ಮಾಡಿದ್ದು, ‘ಇದು ಎಲ್ಲಾ ತಂದೆ ತಾಯಿಯರು ಕನಿಷ್ಠ ಎರಡು ಮಕ್ಕಳನ್ನು ಪಡೆಯಲೇ ಬೇಕು ಎನ್ನುವ ಪಾಠವಾಗಿದೆ’ ಎಂದಿದ್ದಾರೆ. ಮತ್ತೊಬ್ಬ ಬಳಕೆದಾರರು, ‘ಸೂಪರ್ ನಮ್ಮ ಮಗಳು ಇದೇ ರೀತಿ ಹೇಳುತ್ತಾಳೆ’ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ‘ಒಳ್ಳೆಯ ಪ್ರಶ್ನೆ ಮಗಳೇ’ ಎಂದು ಪುಟ್ಟ ಬಾಲಕಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ