AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಗುವನ್ನು ಬುಟ್ಟಿಯಲ್ಲಿಟ್ಟುಕೊಂಡು ಪ್ರವಾಹ ದಾಟಿದ ತಂದೆ; ವಿಡಿಯೋ ನೋಡಿ ಕಣ್ತುಂಬಿಕೊಂಡ ನೆಟ್ಟಿಗರು

Assam Flood: ಬಟ್ಟೆಯಲ್ಲಿ ಸುತ್ತಿಟ್ಟಿದ್ದ ಹಸುಗೂಸನ್ನು ಪ್ಲಾಸ್ಟಿಕ್ ಬುಟ್ಟಿಯಲ್ಲಿ ಇಟ್ಟುಕೊಂಡು ಆ ಮಗುವಿನ ಅಪ್ಪ ತನ್ನ ಎದೆಯ ಮಟ್ಟಕ್ಕೆ ನಿಂತಿದ್ದ ಮಳೆ ನೀರಿನಲ್ಲಿಯೇ ನಡೆದು, ಮಗುವನ್ನು ಎತ್ತರದ ಸ್ಥಳಕ್ಕೆ ಕೊಂಡೊಯ್ಯುವ ವಿಡಿಯೋ ವೈರಲ್ ಆಗಿದೆ.

Viral Video: ಮಗುವನ್ನು ಬುಟ್ಟಿಯಲ್ಲಿಟ್ಟುಕೊಂಡು ಪ್ರವಾಹ ದಾಟಿದ ತಂದೆ; ವಿಡಿಯೋ ನೋಡಿ ಕಣ್ತುಂಬಿಕೊಂಡ ನೆಟ್ಟಿಗರು
ಅಸ್ಸಾಂನಲ್ಲಿ ಪ್ರವಾಹದ ನೀರಿನಲ್ಲಿ ಮಗುವನ್ನು ಸಾಗಿಸಿದ ತಂದೆImage Credit source: NDTV
TV9 Web
| Edited By: |

Updated on:Jun 21, 2022 | 3:24 PM

Share

ಗುವಾಹಟಿ: ಅಸ್ಸಾಂನಲ್ಲಿ ಭೀಕರ ಪ್ರವಾಹ (Assam Floods) ಉಂಟಾಗಿದ್ದು, ಅಲ್ಲಿನ ಜನರು ಮಳೆಯ ಆರ್ಭಟಕ್ಕೆ ತತ್ತರಿಸಿಹೋಗಿದ್ದಾರೆ. ಈಗಾಗಲೇ ಅಸ್ಸಾಂನಲ್ಲಿ (Assam Rains) ಸಾವಿನ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ಇದರ ನಡುವೆ ಪ್ರವಾಹ ಪೀಡಿತ ಅಸ್ಸಾಂನ ಜನರ ನೋವನ್ನು ಸೆರೆಹಿಡಿಯುವ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದೀಗ ವೈರಲ್ (Viral Video) ಆಗಿರುವ ವಿಡಿಯೋದಲ್ಲಿ ತಂದೆಯೊಬ್ಬರು ತನ್ನ ನವಜಾತ ಶಿಶುವನ್ನು ಬುಟ್ಟಿಯಲ್ಲಿಟ್ಟುಕೊಂಡು, ಆ ಬುಟ್ಟಿಯನ್ನು ಹೊತ್ತುಕೊಂಡು ಪ್ರವಾಹದ ನೀರಿನಿಂದ ಆವೃತವಾದ ರಸ್ತೆಯನ್ನು ದಾಟುತ್ತಿರುವುದನ್ನು ನೋಡಬಹುದು.

ಬಟ್ಟೆ ಸುತ್ತಿಟ್ಟಿದ್ದ ಹಸುಗೂಸನ್ನು ಪ್ಲಾಸ್ಟಿಕ್ ಬುಟ್ಟಿಯಲ್ಲಿ ಇಟ್ಟುಕೊಂಡು ಆ ಮಗುವಿನ ಅಪ್ಪ ತನ್ನ ಎದೆಯ ಮಟ್ಟಕ್ಕೆ ನಿಂತಿದ್ದ ಮಳೆ ನೀರಿನಲ್ಲಿಯೇ ನಡೆದು, ಮಗುವನ್ನು ಎತ್ತರದ ಸ್ಥಳಕ್ಕೆ ಕೊಂಡೊಯ್ಯುವ ವಿಡಿಯೋ ವೈರಲ್ ಆಗಿದೆ. ಆ ಮಗುವಿನ ಜೊತೆ ಬರುತ್ತಿದ್ದವರು ಆ ಮಗುವನ್ನು ನಗಿಸುತ್ತಾ, ಮಳೆನೀರಿನಿಂದ ತುಂಬಿದ್ದ ಮನೆಯಿಂದ ಎತ್ತರದ ಸ್ಥಳಕ್ಕೆ ಮಗುವನ್ನು ತೆಗೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ
Image
Viral Video: ಹೈವೇಯಲ್ಲಿ ಕಾರಿಗೆ ಡಿಕ್ಕಿ ಹೊಡೆದು, ರಸ್ತೆ ಮಧ್ಯೆ ಒದ್ದಾಡಿದ ಚಿರತೆ; ಶಾಕಿಂಗ್ ವಿಡಿಯೋ ಇಲ್ಲಿದೆ
Image
Shocking News: ಹೆರಿಗೆ ವೇಳೆ ಶಿಶುವಿನ ತಲೆ ಕತ್ತರಿಸಿ ಮಹಿಳೆಯ ಗರ್ಭದಲ್ಲೇ ಬಿಟ್ಟ ಆಸ್ಪತ್ರೆ ಸಿಬ್ಬಂದಿ!
Image
Assam Tea: ನೀವು ಚಹಾ ಪ್ರಿಯರಾ?; 1 ಲಕ್ಷ ರೂ.ಗೆ ಮಾರಾಟವಾಯ್ತು ಅಪರೂಪದ ಅಸ್ಸಾಂ ಟೀ!

ಈ ವೀಡಿಯೋವನ್ನು ಶೇರ್ ಮಾಡಿದ ನೆಟ್ಟಿಗರು ಶ್ರೀಕೃಷ್ಣನನ್ನು ಹೊತ್ತುಕೊಂಡು ಯಮುನೆಯನ್ನು ದಾಟಿದ ವಾಸುದೇವನಿಗೆ ಈ ಅಪ್ಪ-ಮಗುವಿನ ವಿಡಿಯೋವನ್ನು ಹೋಲಿಸಿದ್ದಾರೆ.

ಇದನ್ನೂ ಓದಿ: Assam Flood: ಭೀಕರ ಪ್ರವಾಹದಿಂದ ದ್ವೀಪವಾಗಿದೆ ಅಸ್ಸಾಂ; ಮಳೆಯ ಹೊಡೆತಕ್ಕೆ 81 ಜನ ಸಾವು

ಅಸ್ಸಾಂ ರಾಜ್ಯದ ಎಲ್ಲಾ 34 ಜಿಲ್ಲೆಗಳು ಪ್ರವಾಹದ ಬಿಕ್ಕಟ್ಟಿಗೆ ಸಿಲುಕಿವೆ. ಅಸ್ಸಾಂನಲ್ಲಿ ಸಾವಿನ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ಪ್ರವಾಹ ಪೀಡಿತ ಅಸ್ಸಾಂನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇದುವರೆಗೆ 47 ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದಾರೆ. ಸೋಮವಾರ ಏಳು ಮಂದಿ ನಾಪತ್ತೆಯಾಗಿದ್ದು, 2.3 ಲಕ್ಷ ಮಂದಿ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಒಟ್ಟಾರೆಯಾಗಿ, ಎಲ್ಲಾ ಪೀಡಿತ ಪ್ರದೇಶಗಳಲ್ಲಿ 810 ಪರಿಹಾರ ಶಿಬಿರಗಳು ಮತ್ತು 615 ಪರಿಹಾರ ವಿತರಣಾ ಕೇಂದ್ರಗಳನ್ನು ತೆರೆಯಲಾಗಿದೆ.

ಒಟ್ಟು 1,13,485.37 ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದ್ದು, 5,000ಕ್ಕೂ ಹೆಚ್ಚು ಹೆಕ್ಟೇರ್ ಜಮೀನು ಕೊಚ್ಚಿಹೋಗಿದೆ. ಅಸ್ಸಾಂ ರಾಜ್ಯದಲ್ಲಿನ ಕಠೋರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಮಾತನಾಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಅಸ್ಸಾಂನ ಮುಖ್ಯಮಂತ್ರಿ ಹಿಮಾಂತ್ ಬಿಸ್ವ ಶರ್ಮ ಅವರಿಗೆ ಫೋನ್ ಮಾಡಿ ಪ್ರವಾಹದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Tue, 21 June 22

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು