Viral Video: ಮ್ಯಾಂಗ್ರೋವ್ ಕಾಡುಗಳ ಮರುಸ್ಥಾಪಿಸುವ ಫಿಶ್​ಬೋನ್ ಚಾನೆಲ್ ಪ್ಲಾಂಟೇಶನ್ ವಿಧಾನದ ವಿಡಿಯೋ ವೈರಲ್

ಕ್ಷೀಣಿಸುತ್ತಿರುವ ಮ್ಯಾಂಗ್ರೋವ್​ ಕಾಡುಗಳನ್ನು ಮರುಸ್ಥಾಪಿಸುವ ಫಿಶ್‌ಬೋನ್ ಚಾನೆಲ್ ಪ್ಲಾಂಟೇಶನ್ ವಿಧಾನವನ್ನು ಅಳವಡಿಸಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇದರ ವಿಡಿಯೋ ವೈರಲ್ ಆಗುತ್ತಿದೆ.

Viral Video: ಮ್ಯಾಂಗ್ರೋವ್ ಕಾಡುಗಳ ಮರುಸ್ಥಾಪಿಸುವ ಫಿಶ್​ಬೋನ್ ಚಾನೆಲ್ ಪ್ಲಾಂಟೇಶನ್ ವಿಧಾನದ ವಿಡಿಯೋ ವೈರಲ್
ಫಿಶ್​ಬೋನ್ ಚಾನೆಲ್ ಪ್ಲಾಂಟೇಶನ್ ವಿಧಾನ
Follow us
| Updated By: Rakesh Nayak Manchi

Updated on:Jul 07, 2022 | 10:20 AM

ಬೆಳೆಯುತ್ತಿರುವ ಕೈಗಾರಿಕೀಕರಣ ಮತ್ತು ಹವಾಮಾನ ಬದಲಾವಣೆಯ ನಡುವೆ ಹಾನಿಗೊಳಗಾಗುತ್ತಿರುವ ಭಾರತದಲ್ಲಿನ ಮ್ಯಾಂಗ್ರೋವ್ ಕಾಡುಗಳ ಸೂಕ್ಷ್ಮ ಪರಿಸರವನ್ನು ಕೆಲವೊಂದು ವಿಧಾನಗಳ ಮೂಲಕಜ ಮರುಸ್ಥಾಪಿಸಲಾಗುತ್ತಿದೆ. ಕ್ಷೀಣಿಸುತ್ತಿರುವ ಮ್ಯಾಂಗ್ರೋವ್​ಗಳನ್ನು ಮರುಸ್ಥಾಪಿಸುವ ಫಿಶ್‌ಬೋನ್ ಚಾನೆಲ್ ಪ್ಲಾಂಟೇಶನ್ ವಿಧಾನವನ್ನು ಅಳವಡಿಸಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇದರ ವಿಡಿಯೋ ವೈರಲ್ ಆಗುತ್ತಿದೆ. ಭಾರತೀಯ ಅರಣ್ಯ ಸೇವೆಗಳ ಅಧಿಕಾರಿ ಸುಸಂತ ನಂದಾ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋ, 10ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. 

ಇದನ್ನೂ ಓದಿ: Viral Video: ಈ ರೀತಿಯಾಗಿ ಹಣ್ಣು ಮಾರಾಟ ಮಾಡುವುದನ್ನು ನೀವು ಎಲ್ಲಾದರೂ ನೋಡಿದ್ದೀರಾ..?

ವೀಡಿಯೊವನ್ನು ಹಂಚಿಕೊಳ್ಳುವಾಗ, ಸುಸಂತ ನಂದಾ ಅವರು, “ಭಿತರ್ಕಾನಿಕಾದಲ್ಲಿನ ತೊರೆಗಳ ನೀರನ್ನು ಮೀನಿನ ಮೂಳೆಯ ಆಕಾರದ ಕಾಲುವೆಗಳ ಮೂಲಕ ಮ್ಯಾಂಗ್ರೋವ್‌ಗಳ ಅಂತರಕ್ಕೆ ತಿರುಗಿಸಲಾಗುತ್ತಿದೆ. ಇದರಿಂದಾಗಿ ಲವಣಯುಕ್ತ ಬಂಜರು ಭೂಮಿಯನ್ನು ನೆಟ್ಟ ಮ್ಯಾಂಗ್ರೋವ್ ಜಾತಿಗಳನ್ನು ಬೆಂಬಲಿಸಲು ಫಲವತ್ತಾಗುತ್ತದೆ. ಆಕಾರವು ಪ್ರದೇಶದ ಪ್ರತಿಯೊಂದು ಮೂಲೆಯನ್ನು ತಲುಪಲು ಅನುವು ಮಾಡಿಕೊಡುತ್ತದೆ” ಎಂದು ಬರೆದುಕೊಂಡಿದ್ದಾರೆ.

ಗುಜರಾತ್ ಅರಣ್ಯ ಇಲಾಖೆಯ ಪ್ರಕಾರ, ನಿಯಮಿತವಾಗಿ ಉಬ್ಬರವಿಳಿತದ ಪ್ರವಾಹವನ್ನು ಪಡೆಯದ ಪ್ರದೇಶಗಳನ್ನು ಕೃತಕವಾಗಿ ಮುಳುಗಿಸಲು ಫಿಶ್‌ಬೋನ್ ಚಾನಲ್ ಪ್ಲಾಂಟೇಶನ್ ತಂತ್ರವನ್ನು ಬಳಸಲಾಗುತ್ತದೆ. ಉಬ್ಬರವಿಳಿತದ ವಲಯಗಳ ಬಳಿ ಒಣಗಿದ ಜೌಗು ಪ್ರದೇಶಗಳನ್ನು ಪ್ರವಾಹ ಮಾಡುವ ಮೂಲಕ ಹೊಸ ಮ್ಯಾಂಗ್ರೋವ್​ಗಳನ್ನು ಮರು ಅರಣ್ಯಗೊಳಿಸಬಹುದು.

ಇದನ್ನೂ ಓದಿ: Viral Video: ನೀರು ತುಂಬಿದ ರಸ್ತೆ ಗುಂಡಿಯಲ್ಲಿ ಕುರ್ಚಿ ಹಾಕಿ ಕುಳಿತು ಹರಟೆ ಹೊಡೆದ ಜನ; ವಿಡಿಯೋ ವೈರಲ್

ಇಂಟರ್ನ್ಯಾಷನಲ್ ಜರ್ನಲ್ ಆಫ್ ಎನ್ವಿರಾನ್ಮೆಂಟಲ್ ಸ್ಟಡೀಸ್‌ನಲ್ಲಿ ಪ್ರಕಟವಾದ ವರದಿ ಹೇಳುವಂತೆ, ಆಂಧ್ರಪ್ರದೇಶದ ಕೃಷ್ಣಾ ವನ್ಯಜೀವಿ ಅಭಯಾರಣ್ಯದಲ್ಲಿನ ಮ್ಯಾಂಗ್ರೋವ್ ಹೊದಿಕೆಯನ್ನು ಪುನರುಜ್ಜೀವನಗೊಳಿಸಲು ಫಿಶ್‌ಬೋನ್ ಚಾನೆಲ್ ಪ್ಲಾಂಟೇಶನ್ ತಂತ್ರವು ಸಹಾಯ ಮಾಡಿದೆ.

ನವೀನ ಸಂರಕ್ಷಣಾ ತಂತ್ರದ ಕುರಿತು ನಂದಾ ಅವರು ಹಂಚಿಕೊಂಡಿರುವ ವಿಡಿಯೋಗೆ ಪ್ರತಿಕ್ರಿಯಿಸಿದ ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಬೆಳಕೆದಾರರೊಬ್ಬರು ಪ್ರತಿಕ್ರಿಯಿಸಿ, ”ವರದಿಗಳ ಪ್ರಕಾರ, ಮ್ಯಾಂಗ್ರೋವ್‌ಗಳು ಅಪಾಯಕಾರಿ ದರದಲ್ಲಿ ಕಡಿಮೆಯಾಗುತ್ತಿವೆ. ಆದ್ದರಿಂದ ಮ್ಯಾಂಗ್ರೋವ್ ತೋಟವನ್ನು ಹೆಚ್ಚಿಸಲು ತೆಗೆದುಕೊಂಡ ಕ್ರಮವು ಮೆಚ್ಚುಗೆಗೆ ಅರ್ಹವಾಗಿದೆ” ಎಂದಿದ್ದಾರೆ. ಮತ್ತೊಬ್ಬರು ಪ್ರತಿಕ್ರಿಯಿಸಿ, “ಉತ್ತಮ ಪರಿಕಲ್ಪನೆ. ಮ್ಯಾಂಗ್ರೋವ್‌ಗಳನ್ನು ಸಂರಕ್ಷಿಸಲು ಸಂಪೂರ್ಣವಾಗಿ ಅವಶ್ಯಕ” ಎಂದಿದ್ದಾರೆ.

ಇದನ್ನೂ ಓದಿ: Viral Video: ಬ್ಯಾಡ್ಮಿಂಟನ್ ಆಡಿ ಖುಷಿಪಟ್ಟ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್

Published On - 10:20 am, Thu, 7 July 22

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ