AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸುರಿದ ಧಾರಾಕಾರ ಮಳೆಗೆ ರಸ್ತೆಗೆ ಬಂದ ಮೀನುಗಳು! ಎಲ್ಲಿ ಇದು ಗೊತ್ತಾ?

ಅಸ್ಸಾಂನಲ್ಲಿ ಸುರಿದ ಭಾರಿ ಮಳೆಗೆ ಗುವಾಹಟಿಯ ರಸ್ತೆಯಲ್ಲಿ ತುಂಬಿದ ನೀರಿನಲ್ಲಿ ಮೀನುಗಳು ಈಜುತ್ತಿರುವುದು ಕಂಡುಬಂದಿದೆ ಎಂದು ಹೇಳಲಾಗುವ ವಿಡಿಯೋ ವೈರಲ್ ಆಗುತ್ತಿದೆ. ಅಷ್ಟಕ್ಕೂ ಈ ದೃಶ್ಯಾವಳಿ ಎಲ್ಲಿದ್ದು? ವಿಡಿಯೋದ ಅಸಲಿಯತ್ತೇನು ಎಂಬುದು ಈ ಸುದ್ದಿಯಲ್ಲಿದೆ ನೋಡಿ.

Viral Video: ಸುರಿದ ಧಾರಾಕಾರ ಮಳೆಗೆ ರಸ್ತೆಗೆ ಬಂದ ಮೀನುಗಳು! ಎಲ್ಲಿ ಇದು ಗೊತ್ತಾ?
ರಸ್ತೆಯಲ್ಲಿ ಈಜಾಡುತ್ತಿರುವ ಮೀನುಗಳು
TV9 Web
| Updated By: Rakesh Nayak Manchi|

Updated on: Jun 19, 2022 | 12:31 PM

Share

ಗುವಾಹಟಿ: ಅಸ್ಸಾಂನಲ್ಲಿ ಭಾರಿ ಮಳೆ ಸುರಿಯುತ್ತಿದೆ. ಈ ನಡುವೆ ಗುವಾಹಟಿಯ ರಸ್ತೆಯಲ್ಲಿ ತುಂಬಿದ ಮಳೆ ನೀರಿನಲ್ಲಿ ಮೀನುಗಳು ಈಜುತ್ತಿರುವುದು ಕಂಡುಬಂದಿದೆ ಎಂದು ಹೇಳುವ ವಿಡಿಯೋ ವೈರಲ್ ಆಗುತ್ತಿದೆ. ಇತ್ತೀಚಿನ ಅಸ್ಸಾಂ ಪ್ರವಾಹದಲ್ಲಿ ‘ಗುವಾಹಟಿಯಲ್ಲಿ ಮೀನುಗಳು ರಸ್ತೆಯಲ್ಲಿ ಈಜುತ್ತಿವೆ’ ಎಂದು ಟ್ವಿಟರ್ ವಿಡಿಯೋದಲ್ಲಿ ಶೀರ್ಷಿಕೆ ನೀಡಲಾಗಿದೆ. ಅಷ್ಟಕ್ಕೂ ಅಸ್ಸಾಂನ ಗುವಾಹಟಿಯದ್ದು ಎನ್ನಲಾಗಿರುವ ಈ ವಿಡಿಯೋ ಸುಳ್ಳು. ಹಲವಾರು ಟ್ವಿಟ್ಟರ್ ಬಳಕೆದಾರರು ನಕಲಿ ವೀಡಿಯೊವನ್ನು ಗುವಾಹಟಿಯದ್ದಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Viral: ಸಾಕಿದ ನಾಯಿ ಕಳೆದುಕೊಂಡಾಕೆಯ ಸಂಕಟಕ್ಕೆ ಪೆಟ್ ಫುಡ್ ಕಂಪನಿಯ ಸ್ಪಂದನೆ; ಸಹೃದಯರ ಸಾಂತ್ವನ

ಅಸಲಿಗೆ ರಸ್ತೆಯಲ್ಲಿ ತುಂಬಿದ ನೀರಿನಲ್ಲಿ ಮೀನುಗಳು ಈಜಾಡುತ್ತಿರುವ ದೃಶ್ಯ ಚೀನಾದ್ದಾಗಿದೆ. ಈ ಹಿಂದೆ ಚೀನೀ ಟ್ವೀಟ್‌ನಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, “ಗುವಾಂಗ್‌ಡಾಂಗ್‌ನಲ್ಲಿ ನಿರಂತರ ಬಿರುಗಾಳಿ ಸಹಿತ ಮಳೆಯಿಂದಾಗಿ ಮೀನುಗಳು ರಸ್ತೆಗೆ ಬಂದಿವೆ” ಎಂದು ಶೀರ್ಷಿಕೆ ನೀಡಲಾಗಿದೆ.

ಇದನ್ನೂ ಓದಿ: Viral Video: ರಸ್ತೆಯಲ್ಲಿ ಓಡಾಡುತ್ತಿದ್ದ ಹುಲಿಯನ್ನು ಹಗ್ಗದಿಂದ ಕಟ್ಟಿ ಕರೆದುಕೊಂಡು ಹೋದ ಯುವಕ! ಮುಂದೆ ಆಗಿದ್ದೇ ಬೇರೆ

ಆದಾಗ್ಯೂ, ದೊಡ್ಡ ಗಾತ್ರದ ಮೀನುಗಳು ರಸ್ತೆಗಳಲ್ಲಿ ಈಜುತ್ತಿವೆ ಎಂಬ ಸುದ್ದಿ ಹರಡುತ್ತಿದ್ದಂತೆ ಅಸ್ಸಾಂನ ಬೀದಿಗಳಲ್ಲಿ ಜನರು ಮೀನು ಹಿಡಿಯಲು ಮುಂದಾಗಿದ್ದಾರೆ. ಕಾಮ್ರೂಪ್‌ನ ರಂಗಿಯಾದ ಮೊರಾಂಜನಾ ಪ್ರದೇಶದಲ್ಲಿ ನೀರಿನಿಂದ ಮುಳುಗಡೆಯಾದ ರಾಷ್ಟ್ರೀಯ ಹೆದ್ದಾರಿ 31 ರಲ್ಲಿ ಮೀನು ಹಿಡಿಯಲು ಸ್ಥಳೀಯರು ಬಲೆಗಳನ್ನು ಹಾಕುತ್ತಿರುವ ವೀಡಿಯೊವನ್ನು ಟೈಮ್ಸ್ ಆಫ್ ಇಂಡಿಯಾ ಟ್ವೀಟ್ ಮಾಡಿದೆ. ಆ ಪ್ರದೇಶದಲ್ಲಿಯೂ ರಸ್ತೆಯಲ್ಲಿ ಮೀನುಗಳು ಪತ್ತೆಯಾಗಿಲ್ಲ.

ನಿರಂತರ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಅಸ್ಸಾಂ ತತ್ತರಿಸಿ ಹೋಗಿದ್ದು, 32 ಜಿಲ್ಲೆಗಳಲ್ಲಿ ಸುಮಾರು 31 ಲಕ್ಷ ಜನರ ಮೇಲೆ ಪರಿಣಾಮ ಬೀರಿದೆ. ಅಧಿಕಾರಿಗಳ ಪ್ರಕಾರ, ಶನಿವಾರದಂದು ಇನ್ನೂ ಎಂಟು ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದು, ಸಾವಿನ ಸಂಖ್ಯೆ 63ಕ್ಕೆ ತಲುಪಿದೆ. ಹಾನಿಗೊಳಗಾದ ಜಿಲ್ಲೆಗಳಲ್ಲಿ ರಕ್ಷಣಾ ಕಾರ್ಯಗಳು ನಡೆಯುತ್ತಿವೆ. ಇದುವರೆಗೆ 3000 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ. 514 ಪರಿಹಾರ ಶಿಬಿರಗಳಲ್ಲಿ 1.56 ಲಕ್ಷಕ್ಕೂ ಹೆಚ್ಚು ಜನರು ಆಶ್ರಯ ಪಡೆದಿದ್ದಾರೆ.

ಟ್ರೆಂಡಿಂಗ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ