AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸುರಿದ ಧಾರಾಕಾರ ಮಳೆಗೆ ರಸ್ತೆಗೆ ಬಂದ ಮೀನುಗಳು! ಎಲ್ಲಿ ಇದು ಗೊತ್ತಾ?

ಅಸ್ಸಾಂನಲ್ಲಿ ಸುರಿದ ಭಾರಿ ಮಳೆಗೆ ಗುವಾಹಟಿಯ ರಸ್ತೆಯಲ್ಲಿ ತುಂಬಿದ ನೀರಿನಲ್ಲಿ ಮೀನುಗಳು ಈಜುತ್ತಿರುವುದು ಕಂಡುಬಂದಿದೆ ಎಂದು ಹೇಳಲಾಗುವ ವಿಡಿಯೋ ವೈರಲ್ ಆಗುತ್ತಿದೆ. ಅಷ್ಟಕ್ಕೂ ಈ ದೃಶ್ಯಾವಳಿ ಎಲ್ಲಿದ್ದು? ವಿಡಿಯೋದ ಅಸಲಿಯತ್ತೇನು ಎಂಬುದು ಈ ಸುದ್ದಿಯಲ್ಲಿದೆ ನೋಡಿ.

Viral Video: ಸುರಿದ ಧಾರಾಕಾರ ಮಳೆಗೆ ರಸ್ತೆಗೆ ಬಂದ ಮೀನುಗಳು! ಎಲ್ಲಿ ಇದು ಗೊತ್ತಾ?
ರಸ್ತೆಯಲ್ಲಿ ಈಜಾಡುತ್ತಿರುವ ಮೀನುಗಳು
TV9 Web
| Edited By: Rakesh Nayak Manchi|

Updated on: Jun 19, 2022 | 12:31 PM

Share

ಗುವಾಹಟಿ: ಅಸ್ಸಾಂನಲ್ಲಿ ಭಾರಿ ಮಳೆ ಸುರಿಯುತ್ತಿದೆ. ಈ ನಡುವೆ ಗುವಾಹಟಿಯ ರಸ್ತೆಯಲ್ಲಿ ತುಂಬಿದ ಮಳೆ ನೀರಿನಲ್ಲಿ ಮೀನುಗಳು ಈಜುತ್ತಿರುವುದು ಕಂಡುಬಂದಿದೆ ಎಂದು ಹೇಳುವ ವಿಡಿಯೋ ವೈರಲ್ ಆಗುತ್ತಿದೆ. ಇತ್ತೀಚಿನ ಅಸ್ಸಾಂ ಪ್ರವಾಹದಲ್ಲಿ ‘ಗುವಾಹಟಿಯಲ್ಲಿ ಮೀನುಗಳು ರಸ್ತೆಯಲ್ಲಿ ಈಜುತ್ತಿವೆ’ ಎಂದು ಟ್ವಿಟರ್ ವಿಡಿಯೋದಲ್ಲಿ ಶೀರ್ಷಿಕೆ ನೀಡಲಾಗಿದೆ. ಅಷ್ಟಕ್ಕೂ ಅಸ್ಸಾಂನ ಗುವಾಹಟಿಯದ್ದು ಎನ್ನಲಾಗಿರುವ ಈ ವಿಡಿಯೋ ಸುಳ್ಳು. ಹಲವಾರು ಟ್ವಿಟ್ಟರ್ ಬಳಕೆದಾರರು ನಕಲಿ ವೀಡಿಯೊವನ್ನು ಗುವಾಹಟಿಯದ್ದಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Viral: ಸಾಕಿದ ನಾಯಿ ಕಳೆದುಕೊಂಡಾಕೆಯ ಸಂಕಟಕ್ಕೆ ಪೆಟ್ ಫುಡ್ ಕಂಪನಿಯ ಸ್ಪಂದನೆ; ಸಹೃದಯರ ಸಾಂತ್ವನ

ಅಸಲಿಗೆ ರಸ್ತೆಯಲ್ಲಿ ತುಂಬಿದ ನೀರಿನಲ್ಲಿ ಮೀನುಗಳು ಈಜಾಡುತ್ತಿರುವ ದೃಶ್ಯ ಚೀನಾದ್ದಾಗಿದೆ. ಈ ಹಿಂದೆ ಚೀನೀ ಟ್ವೀಟ್‌ನಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, “ಗುವಾಂಗ್‌ಡಾಂಗ್‌ನಲ್ಲಿ ನಿರಂತರ ಬಿರುಗಾಳಿ ಸಹಿತ ಮಳೆಯಿಂದಾಗಿ ಮೀನುಗಳು ರಸ್ತೆಗೆ ಬಂದಿವೆ” ಎಂದು ಶೀರ್ಷಿಕೆ ನೀಡಲಾಗಿದೆ.

ಇದನ್ನೂ ಓದಿ: Viral Video: ರಸ್ತೆಯಲ್ಲಿ ಓಡಾಡುತ್ತಿದ್ದ ಹುಲಿಯನ್ನು ಹಗ್ಗದಿಂದ ಕಟ್ಟಿ ಕರೆದುಕೊಂಡು ಹೋದ ಯುವಕ! ಮುಂದೆ ಆಗಿದ್ದೇ ಬೇರೆ

ಆದಾಗ್ಯೂ, ದೊಡ್ಡ ಗಾತ್ರದ ಮೀನುಗಳು ರಸ್ತೆಗಳಲ್ಲಿ ಈಜುತ್ತಿವೆ ಎಂಬ ಸುದ್ದಿ ಹರಡುತ್ತಿದ್ದಂತೆ ಅಸ್ಸಾಂನ ಬೀದಿಗಳಲ್ಲಿ ಜನರು ಮೀನು ಹಿಡಿಯಲು ಮುಂದಾಗಿದ್ದಾರೆ. ಕಾಮ್ರೂಪ್‌ನ ರಂಗಿಯಾದ ಮೊರಾಂಜನಾ ಪ್ರದೇಶದಲ್ಲಿ ನೀರಿನಿಂದ ಮುಳುಗಡೆಯಾದ ರಾಷ್ಟ್ರೀಯ ಹೆದ್ದಾರಿ 31 ರಲ್ಲಿ ಮೀನು ಹಿಡಿಯಲು ಸ್ಥಳೀಯರು ಬಲೆಗಳನ್ನು ಹಾಕುತ್ತಿರುವ ವೀಡಿಯೊವನ್ನು ಟೈಮ್ಸ್ ಆಫ್ ಇಂಡಿಯಾ ಟ್ವೀಟ್ ಮಾಡಿದೆ. ಆ ಪ್ರದೇಶದಲ್ಲಿಯೂ ರಸ್ತೆಯಲ್ಲಿ ಮೀನುಗಳು ಪತ್ತೆಯಾಗಿಲ್ಲ.

ನಿರಂತರ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಅಸ್ಸಾಂ ತತ್ತರಿಸಿ ಹೋಗಿದ್ದು, 32 ಜಿಲ್ಲೆಗಳಲ್ಲಿ ಸುಮಾರು 31 ಲಕ್ಷ ಜನರ ಮೇಲೆ ಪರಿಣಾಮ ಬೀರಿದೆ. ಅಧಿಕಾರಿಗಳ ಪ್ರಕಾರ, ಶನಿವಾರದಂದು ಇನ್ನೂ ಎಂಟು ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದು, ಸಾವಿನ ಸಂಖ್ಯೆ 63ಕ್ಕೆ ತಲುಪಿದೆ. ಹಾನಿಗೊಳಗಾದ ಜಿಲ್ಲೆಗಳಲ್ಲಿ ರಕ್ಷಣಾ ಕಾರ್ಯಗಳು ನಡೆಯುತ್ತಿವೆ. ಇದುವರೆಗೆ 3000 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ. 514 ಪರಿಹಾರ ಶಿಬಿರಗಳಲ್ಲಿ 1.56 ಲಕ್ಷಕ್ಕೂ ಹೆಚ್ಚು ಜನರು ಆಶ್ರಯ ಪಡೆದಿದ್ದಾರೆ.

ಟ್ರೆಂಡಿಂಗ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ