AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಾಕು ನಾಯಿಯೊಂದಿಗೆ ‘777 ಚಾರ್ಲಿ’ ವೀಕ್ಷಿಸಿದ ಮಾಜಿ ಸಚಿವ ಜನಾರ್ದನ ರೆಡ್ಡಿ

ಗಣಿ ಉದ್ಯಮಿ ಮತ್ತು ಬಿಜೆಪಿಯ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಬಳ್ಳಾರಿಯ ಮಲ್ಟಿಪ್ಲೆಕ್ಸ್ ಥಿಯೇಟರ್‌ನಲ್ಲಿ ತಮ್ಮ ಸಾಕು ನಾಯಿಯೊಂದಿಗೆ ‘777 ಚಾರ್ಲಿ’ ವೀಕ್ಷಿಸಿದರು.  ಸಾಕು ನಾಯಿಯೊಂದಿಗೆ ಸಿನಿಮಾ ನೋಡುತ್ತಿರುವ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

Viral Video: ಸಾಕು ನಾಯಿಯೊಂದಿಗೆ ‘777 ಚಾರ್ಲಿ’ ವೀಕ್ಷಿಸಿದ ಮಾಜಿ ಸಚಿವ ಜನಾರ್ದನ ರೆಡ್ಡಿ
Former Minister Janardhan Reddy
TV9 Web
| Edited By: |

Updated on:Jun 27, 2022 | 1:04 PM

Share

‘777 ಚಾರ್ಲಿ’  ಸಿನಿಮಾಗೆ ಎಲ್ಲೆಡೆಯಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ನಾಯಿ ಮತ್ತು ಮನುಷ್ಯನ ನಡುವಿನ ಸಂಬಂಧದ ಕಥೆಯನ್ನು ಹೊಂದಿರುವ ಈ ಚಿತ್ರ ಎಲ್ಲ ಚಿತ್ರಮಂದಿರಗಳಲ್ಲೂ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ನಟನಾಗಿ, ನಿರ್ಮಾಪಕನಾಗಿ ರಕ್ಷಿತ್ ಶೆಟ್ಟಿ  ಅವರಿಗೆ ಈ ಸಿನಿಮಾ ಮೂಲಕ ದೊಡ್ಡ ಗೆಲುವು ಸಿಕ್ಕಿದೆ. ನಿರ್ದೇಶಕ ಕಿರಣ್​ ರಾಜ್​ ಅವರ ಪ್ರಯತ್ನವನ್ನು ಎಲ್ಲರೂ ಕೊಂಡಾಡುತ್ತಿದ್ದಾರೆ. ಪ್ರಾಣಿಗಳ ಬಗ್ಗೆ, ಅದರಲ್ಲೂ ವಿಶೇಷವಾಗಿ ನಾಯಿಗಳ ಬಗ್ಗೆ ಜನರಿಗೆ ಕಾಳಜಿ ಮೂಡಿಸುವಲ್ಲಿ ಈ ಸಿನಿಮಾ ಯಶಸ್ವಿ ಆಗಿದೆ. ಇದರ ಜೊತೆಗೆ ಅನೇಕ ನಟ- ನಟಿಯರು, ಹೆಚ್ಚಾಗಿ ಸಿಎಂ ಬೊಮ್ಮಾಯಿ ನೋಡಿ ಕಣ್ಣೀರು ಹಾಕಿದ್ದಾರೆ. ಸಚಿವರು, ಶಾಸಕರು ನೋಡಿ ಮೆಚ್ಚು ವ್ಯಕ್ತಪಡಿಸಿದ್ದಾರೆ. ಇದೀಗ ಗಣಿ ಉದ್ಯಮಿ ಮತ್ತು ಬಿಜೆಪಿಯ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಬಳ್ಳಾರಿಯ ಮಲ್ಟಿಪ್ಲೆಕ್ಸ್ ಥಿಯೇಟರ್‌ನಲ್ಲಿ ತಮ್ಮ ಸಾಕು ನಾಯಿಯೊಂದಿಗೆ ‘777 ಚಾರ್ಲಿ’ ವೀಕ್ಷಿಸಿದರು.  ಸಾಕು ನಾಯಿಯೊಂದಿಗೆ ಸಿನಿಮಾ ನೋಡುತ್ತಿರುವ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಜನಾರ್ದನ ರೆಡ್ಡಿ ಶ್ವಾನ ಪ್ರಿಯರಾಗಿದ್ದು, ಅವರಿಗೆ ರಾಕಿ ಎಂಬ ಲ್ಯಾಬ್ರಡಾರ್ ಶ್ವಾನ ಇದೆ. ಅವರು ತಮ್ಮ ಕುಟುಂಬ ಸದಸ್ಯರು ಮತ್ತು ಸಾಕುಪ್ರಾಣಿಗಳೊಂದಿಗೆ ‘777 ಚಾರ್ಲಿ’ ಚಲನಚಿತ್ರವನ್ನು ವೀಕ್ಷಿಸಿದರು. ತಮ್ಮ ಸಾಮಾಜಿಕ ಜಾಣಲದಲ್ಲಿ ಈ ವಿಡಿಯೋ ಫೋಟೋವನ್ನು ಫೋಸ್ಟ್ ಮಾಡಿದ್ದಾರೆ.  ನಾನು ಬಾಲ್ಯದಿಂದಲೂ ಪ್ರಾಣಿಗಳ ಬಗ್ಗೆ ಒಲವು ಮತ್ತು ಪ್ರೀತಿಯನ್ನು ಬೆಳೆಸಿಕೊಂಡಿದ್ದೇನೆ. ನಾನು ಹಸುಗಳನ್ನು ಪ್ರೀತಿಸುತ್ತೇನೆ, ನಾನು ಬೆಕ್ಕುಗಳೊಂದಿಗೆ ಆಟವಾಡುತ್ತೇನೆ.  ನಾನು ಪಕ್ಷಿಗಳು ಮತ್ತು ಪ್ರಾಣಿಗಳನ್ನು ತುಂಬಾ ಇಷ್ಟಪಡುತ್ತೇನೆ ಎಂದು ಫೋಸ್ಟ್ ನಲ್ಲಿ ಬರೆದುಕೊಂದಿದ್ದಾರೆ.

ಇದನ್ನೂ ಓದಿ
Image
ಬೆಂಗಳೂರು ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ! ಟೆಂಪೋ, ಬಿಎಂಟಿಸಿ ಬಸ್ ನಡುವೆ ಸಿಲುಕಿ ಆಟೋ ಜಖಂ
Image
36 ವರ್ಷದ ಬಳಿಕ ಮರುಕಳಿಸಿತು ಇತಿಹಾಸ; ಕಮಲ್​ ಹಾಸನ್​-ಚಿರಂಜೀವಿ ಸ್ನೇಹದ ರೆಟ್ರೋ ಫೋಟೋ ವೈರಲ್
Image
ಶಿಕ್ಷಕರ ಮತ್ತು ಪದವಿಧರ ಕ್ಷೇತ್ರಗಳ ಚುನಾವಣೆ: ಇಂದು ಮೂರು ಪಕ್ಷಗಳ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
Image
Chicago Shootings: ಅಮೆರಿಕದಲ್ಲಿ ಮತ್ತೆ ಗುಂಡಿನ ಸದ್ದು, ಚಿಕಾಗೊದಲ್ಲಿ ಐವರು ಸಾವು, 16 ಮಂದಿಗೆ ಗಾಯ

ಈ ಸುದ್ದಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ : ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅಮಿತಾಭ್​ ಬಚ್ಚನ್​ ಸಾಥ್​; ಕಿಚ್ಚ ಸುದೀಪ್​ ಸಿನಿಮಾಗೆ ‘ಬಿಗ್​ ಬಿ’ ಬೆಂಬಲ

“ನನ್ನ ಕಷ್ಟದ ದಿನಗಳ ನಂತರ ಸಂತೋಷ ದಿನಗಳನ್ನು ರಾಕಿ ಜೊತೆಗೆ ಕಳೆದಿದ್ದೇನೆ. ಹಾಗೂ ಇಷ್ಟು ಪ್ರಾಮಾಣಿಕ, ನಂಬಿಕೆಗೆ ಅರ್ಹವಾದ ಮತ್ತು ಪ್ರೀತಿಪಾತ್ರವಾಗಿರುವ ನಾಯಿಗಳನ್ನು ದೇವರು ಏಕೆ ಮೂಕ ಮಾಡಿದ್ದಾನೆ ಎಂದು ಆಶ್ಚರ್ಯವಾಗುತ್ತಿದೆ. ರಕ್ಷಿತ್ ಶೆಟ್ಟಿ ಅವರ ‘777 ಚಾರ್ಲಿ’ ಸಿನಿಮಾ  ಮನುಷ್ಯನ ಆತ್ಮೀಯ ಸ್ನೇಹಿತನ ನೈಜ ಸ್ವರೂಪವನ್ನು ಪ್ರದರ್ಶಿಸಿದೆ ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ.

Published On - 1:04 pm, Mon, 27 June 22

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ