AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಉದ್ಯೋಗಿಗಳಿಗೆ ಮಲಗಲು ವಿಶೇಷ ಕೊಠಡಿ,ಜೊತೆಗೆ ಹಲವು ಸೌಲಭ್ಯಗಳನ್ನು ನೀಡುತ್ತಿದೆ ಈ ಕಂಪೆನಿ

ಇತ್ತೀಚೆಗೆ ಮೈಕ್ರೋಸಾಫ್ಟ್ ಉದ್ಯೋಗಿಗಳ ಗುಂಪು ಹೈದರಾಬಾದ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಫುಡ್ ಕೋರ್ಟ್ನಿಂದ ಹಿಡಿದು ಉದ್ಯೋಗಿಗಳಿಗೆ ವಿಶ್ರಾಂತಿ ಪಡೆಯಲು ವಿಶೇಷ ಮಲಗುವ ಕೋಣೆಯ ವರೆಗೆ ಎಲ್ಲಾ ಸೌಲಭ್ಯಗಳಿವೆ

Viral Video: ಉದ್ಯೋಗಿಗಳಿಗೆ ಮಲಗಲು ವಿಶೇಷ ಕೊಠಡಿ,ಜೊತೆಗೆ ಹಲವು ಸೌಲಭ್ಯಗಳನ್ನು ನೀಡುತ್ತಿದೆ ಈ ಕಂಪೆನಿ
Viral VideoImage Credit source: instagram
ಅಕ್ಷತಾ ವರ್ಕಾಡಿ
|

Updated on: Feb 17, 2024 | 1:04 PM

Share

ರಜಾದಿನಗಳಲ್ಲಿಯೂ ಕೆಲಸ ಮಾಡಬೇಕು, ಕಡಿಮೆ ಸಂಬಳ. ಒಮ್ಮೆ ಈ ಕಂಪೆನಿ ಬಿಟ್ಟು ಎಲ್ಲಾದರೊಂದು ಒಳ್ಳೆಯ ಕಂಪೆನಿ ಸೇರಿ, ಹೆಚ್ಚು ಸಂಬಳ ಪಡೆಯಬೇಕು ಎಂಬುದು ಸಾಕಷ್ಟು ಜನರ ಕನಸು. ನಿಮ್ಮ ಕನಸ್ಸಿಗೆ ತಕ್ಕಂತೆ ಸಕಲ ಸೌಲಭ್ಯಗಳನ್ನು ಒದಗಿಸುವ ಕಂಪೆನಿಯೊಂದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ತಮ್ಮ ಕಚೇರಿಯಲ್ಲಿ ಯಾವ ರೀತಿಯ ಸೌಲಭ್ಯಗಳು ಇರುತ್ತವೆ ಎಂಬುದನ್ನು ವಿಡಿಯೋದ ಮೂಲಕ ಅಲ್ಲಿನ ಉದ್ಯೋಗಿಗಳು ಹಂಚಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದ್ದು, ಸಾಕಷ್ಟು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉದ್ಯೋಗಿಗಳಿಗೆ ಇಷ್ಟೆಲ್ಲಾ ಸೌಲಭ್ಯಗಳನ್ನು ನೀಡುತ್ತಿರುವ ಈ ಕಂಪೆನಿಯೇ ಮೈಕ್ರೋಸಾಫ್ಟ್. ಮೈಕ್ರೋಸಾಫ್ಟ್ ಪ್ರಪಂಚದಾದ್ಯಂತ ಅನೇಕ ಶಾಖೆಗಳನ್ನು ಹೊಂದಿದೆ. ಇದಲ್ಲದೇ ಭಾರತದಲ್ಲಿಯೂ ಹಲವಾರು ಕಂಪನಿಗಳನ್ನು ಹೊಂದಿದೆ. ಇತ್ತೀಚೆಗೆ ಮೈಕ್ರೋಸಾಫ್ಟ್ ಉದ್ಯೋಗಿಗಳ ಗುಂಪು ಹೈದರಾಬಾದ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಫುಡ್ ಕೋರ್ಟ್ನಿಂದ ಹಿಡಿದು ಉದ್ಯೋಗಿಗಳಿಗೆ ವಿಶ್ರಾಂತಿಯನ್ನು ಪಡೆಯಲು ವಿಶೇಷ ಮಲಗುವ ಕೋಣೆಯ ವರೆಗೆ ಎಷ್ಟೆಲ್ಲಾ ಸೌಲಭ್ಯಗಳಿವೆ ಎಂಬುದನ್ನು ವಿಡಿಯೋದಲ್ಲಿ ಚಿತ್ರೀಕರಿಸಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಅನಂತ್ ಅಂಬಾನಿ-ರಾಧಿಕಾ ಮದುವೆ; ದೃಷ್ಟಿಹೀನ ಕುಶಲಕರ್ಮಿಗಳಿಂದ ತಯಾರಾಗುತ್ತಿದೆ ವಿಶೇಷ ಉಡುಗೊರೆ

@twosisterslivingtheirlife ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಇಲ್ಲಿಯವರೆಗೆ 3.8 ಮಿಲಿಯನ್​​ ಅಂದರೆ 38 ಲಕ್ಷ ವೀಕ್ಷಣೆಯನ್ನು ಪಡೆದುಕೊಂಡಿದೆ. ಎರಡು ಲಕ್ಷಕ್ಕೂ ಹೆಚ್ಚು ಜನರು ವಿಡಿಯೋ ಲೈಕ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್