AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಣೇಶನ ಮಂಟಪದ ಎದುರು ಕುಸಿದುಬಿದ್ದು ಸಾವನ್ನಪ್ಪಿದ ಆಂಜನೇಯನ ವೇಷಧಾರಿ

ಗಣೇಶನ ಮಂಟದ ಎದುರು ಆಂಜನೇಯನ ವೇಷ ಧರಿಸಿದ್ದ ವ್ಯಕ್ತಿಯೊಬ್ಬರು ಹಠಾತ್ ಕುಸಿದುಬಿದ್ದು ಸಾವನ್ನಪ್ಪಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral Video: ಗಣೇಶನ ಮಂಟಪದ ಎದುರು ಕುಸಿದುಬಿದ್ದು ಸಾವನ್ನಪ್ಪಿದ ಆಂಜನೇಯನ ವೇಷಧಾರಿ
ಗಣೇಶನ ಮಂಟಪದ ಎದುರು ಕುಸಿದುಬಿದ್ದು ಸಾವನ್ನಪ್ಪಿದ ಆಂಜನೇಯನ ವೇಷಧಾರಿ
TV9 Web
| Updated By: Rakesh Nayak Manchi|

Updated on:Sep 04, 2022 | 4:11 PM

Share

ಮುಂದಿನ ಸೆಕೆಂಡಿನಲ್ಲಿ ನಮ್ಮ ಜೀವ ಇದೆಯೋ ಇಲ್ಲವೋ ಎಂಬೂದು ಹಣೆಬರಹ ಬರೆದ ದೇವನಿಗೆ ಹೊರತಾಗಿ ಬೇರೆ ಯಾರಿಗೂ ಗೊತ್ತಿಲ್ಲ. ಸಾವು ಯಾವಾಗ, ಎಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಈಗಿದ್ದ ವ್ಯಕ್ತಿ ಮುಂದೆ ಇರುತ್ತಾರೆಯೇ? ಎಂಬ ಗ್ಯಾರಂಟಿಯೇ ಇಲ್ಲ. ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನಶೈಲಿಯಿಂದಾಗಿ ಹಠಾತ್ ಹೃದಯಾಘಾತ ಸಂಭವಿಸಿ ಸಾವುಗಳು ಹೆಚ್ಚುತ್ತಿವೆ. ಈ ಹಿಂದೆ ಗಣೇಶ ಹಬ್ಬದಂದು ಗಣೇಶ ಮೂರ್ತಿಯ ಎದುರು ಡಾನ್ಸ್ ಮಾಡುತ್ತಿದ್ದಾಗ ಯುವಕನೊಬ್ಬ ಸ್ಥಳದಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ ಘಟನೆಯೊಂದು ನಡೆದಿತ್ತು. ಇದೀಗ ಅಂತಹದ್ದೇ ಒಂದು ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಗಣೇಶನ ಮಂಟದ ಎದುರು ಆಂಜನೇಯನ ವೇಷ ಧರಿಸಿದ್ದ ವ್ಯಕ್ತಿಯೊಬ್ಬರು ಹಠಾತ್ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗುತ್ತಿದೆ.

ಗಣೇಶ ಮಂಟಪದಲ್ಲಿ ಆಂಜನೇಯನ ವೇಷ ಧರಿಸಿ ನೃತ್ಯ ಮಾಡುತ್ತಿದ್ದ 35 ವರ್ಷದ ರವಿವರ್ಮ ಎಂಬ ವ್ಯಕ್ತಿ, ಗಣೇಶನ ದರ್ಶನ ಪಡೆಯಲು ಬಂದ ಭಕ್ತರನ್ನು ರಂಜಿಸುತ್ತಿದ್ದರು. ಹೀಗೆ ರಂಜಿಸುತ್ತಿದ್ದ ರವಿವರ್ಮ ಜನರೆದುರೇ ಕುಸಿದುಬಿದ್ದಿದ್ದಾರೆ. ಒಂದಷ್ಟು ಸಮಯದವರೆಗೆ ರವಿವರ್ಮ ಏಳದ್ದನ್ನು ಗಮನಿಸಿದ ಇಬ್ಬರು ಯುವಕರು ಹತ್ತಿರ ಬಂದು ಎಬ್ಬಿಸಿದಾಗ ಹೃದಯಾಘಾತವಾಗಿ ಸಾವನ್ನಪ್ಪಿರುವುದು ತಿಳಿದುಬಂದಿದೆ. ಕ್ರಿಯಾಶೀಲರಾಗಿದ್ದ ವ್ಯಕ್ತಿ ಏಕಾಏಕಿ ಕುಸಿದುಬಿದ್ದು ಸಾವನ್ನಪ್ಪಿರುವುದನ್ನು ನೋಡಿದ ಜನರಿಗೆ ಘಟನೆಯನ್ನು ಅರಗಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 4:11 pm, Sun, 4 September 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ