AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕರ್ವಾ ಚೌತ್​ಗೆ ಪ್ರೇಯಸಿಯೊಂದಿಗೆ ಶಾಪಿಂಗ್ ಮಾಡುವಾಗ ಸಿಕ್ಕಿಬಿದ್ದ ಗಂಡನಿಗೆ ಹೆಂಡತಿಯಿಂದ ಚಪ್ಪಲಿಯೇಟು!

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಕರ್ವಾ ಚೌತ್‌ನಲ್ಲಿ ತನ್ನ ಪ್ರೇಯಸಿಯೊಂದಿಗೆ ಶಾಪಿಂಗ್ ಮಾಡುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ವ್ಯಕ್ತಿಯೊಬ್ಬನನ್ನು ಆತನ ಹೆಂಡತಿ ಥಳಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

Viral Video: ಕರ್ವಾ ಚೌತ್​ಗೆ ಪ್ರೇಯಸಿಯೊಂದಿಗೆ ಶಾಪಿಂಗ್ ಮಾಡುವಾಗ ಸಿಕ್ಕಿಬಿದ್ದ ಗಂಡನಿಗೆ ಹೆಂಡತಿಯಿಂದ ಚಪ್ಪಲಿಯೇಟು!
ಪ್ರೇಯಸಿಯೊಂದಿಗೆ ಸಿಕ್ಕಿಬಿದ್ದ ಗಂಡನಿಗೆ ಥಳಿಸಿದ ಹೆಂಡತಿ
TV9 Web
| Edited By: |

Updated on: Oct 14, 2022 | 9:20 AM

Share

‘ಮಾಡಿದ್ದುಣ್ಣೋ ಮಹರಾಯ’ ಎಂಬ ಗಾದೆ ಮಾತೊಂದಿದೆ. ನಾವು ಮಾಡಿದ ತಪ್ಪನ್ನು ಮುಚ್ಚಿಡಲು ಎಷ್ಟೇ ಪ್ರಯತ್ನಿಸಿದರೂ ಒಂದಲ್ಲ ಒಂದು ದಿನ ಸಿಕ್ಕಿಹಾಕಿಕೊಳ್ಳುವುದು ಖಚಿತ. ಉತ್ತರ ಭಾರತದಲ್ಲಿ ಕರ್ವಾ ಚೌತ್ (Karwa Chauth) ಹಬ್ಬವನ್ನು ಬಹಳ ವಿಶೇಷವಾಗಿ ಆಚರಿಸಲಾಗುತ್ತದೆ. ಇದು ವಿವಾಹಿತ ಮಹಿಳೆಯರ ಪಾಲಿನ ವಿಶೇಷ ಹಬ್ಬ. ಆದರೆ, ತನ್ನ ಪ್ರೇಯಸಿಯೊಂದಿಗೆ ಕರ್ವಾಚೌತ್ ಹಬ್ಬದ ಶಾಪಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಕೈಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡಿದ್ದಾನೆ. ಇದರಿಂದ ಕರ್ವಾ ಚೌತ್ ದಿನ ಹೆಂಡತಿಯಿಂದ ಪೂಜೆ ಮಾಡಿಸಿಕೊಳ್ಳುವ ಬದಲು ಅದೇ ಹೆಂಡತಿಯಿಂದ ಚಪ್ಪಲಿಯೇಟು ತಿಂದಿದ್ದಾನೆ.

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಕರ್ವಾ ಚೌತ್‌ನಲ್ಲಿ ತನ್ನ ಪ್ರೇಯಸಿಯೊಂದಿಗೆ ಶಾಪಿಂಗ್ ಮಾಡುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ವ್ಯಕ್ತಿಯೊಬ್ಬನನ್ನು ಆತನ ಹೆಂಡತಿ ಥಳಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆತನ ಹೆಂಡತಿ ತನ್ನ ಕೆಲವು ಸ್ನೇಹಿತರ ಜೊತೆ ಸೇರಿ ಗಂಡನ ಕಾಲರ್ ಹಿಡಿದು ಥಳಿಸಿದ್ದಾರೆ. ಮಾರುಕಟ್ಟೆಯಲ್ಲಿ ಪತ್ನಿ ತನ್ನ ಚಪ್ಪಲಿ ತೆಗೆದು ಪತಿ ಮತ್ತು ಆತನ ಪ್ರೇಯಸಿಗೆ ತೀವ್ರವಾಗಿ ಥಳಿಸಿದ್ದಾಳೆ. ಇದರಿಂದ ಆ ಸ್ಥಳದಲ್ಲಿ ಅಪಾರ ಜನಸ್ತೋಮ ಜಮಾಯಿಸಿತ್ತು.

ಇದನ್ನೂ ಓದಿ: Shocking Video: ನದಿಯಲ್ಲಿ ಸ್ನಾನ ಮಾಡುವಾಗ ಹೆಂಡತಿಗೆ ಮುತ್ತು ಕೊಟ್ಟ ಗಂಡನಿಗೆ ಹಿಗ್ಗಾಮುಗ್ಗ ಥಳಿಸಿದ ಜನ!

ಅಂಗಡಿಯೊಂದಕ್ಕೆ ನುಗ್ಗಿದ ಮಹಿಳೆ ಅಲ್ಲಿದ್ದ ತನ್ನ ಗಂಡ ಮತ್ತು ಆತನ ಪ್ರಿಯತಮೆಯನ್ನು ಹೊರಗೆ ರಸ್ತೆಗೆ ಎಳೆದುಕೊಂಡು ಬಂದು ಚಪ್ಪಲಿಯಲ್ಲಿ ಹೊಡೆದಿದ್ದಾಳೆ. ಇದನ್ನು ಅಲ್ಲಿದ್ದವರು ವಿಡಿಯೋ ಮಾಡಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಅಪ್​ಲೋಡ್ ಮಾಡಿದ್ದಾರೆ.

ಪ್ರೀತಿ ಎಂಬ ಮಹಿಳೆ 2017ರಲ್ಲಿ ರಾಹುಲ್ ಜೊತೆ ವಿವಾಹವಾಗಿದ್ದರು. ಮದುವೆಯ ನಂತರ ಇಬ್ಬರ ನಡುವೆ ಜಗಳ ನಡೆದಿದ್ದು, ಕಳೆದ ಮೂರು ವರ್ಷಗಳಿಂದ ಪ್ರೀತಿ ತನ್ನ ತಾಯಿಯ ಮನೆಯಲ್ಲಿ ವಾಸವಾಗಿದ್ದಾಳೆ. ಇಬ್ಬರ ನಡುವಿನ ವಿವಾದಕ್ಕೆ ಸಂಬಂಧಿಸಿದ ಅರ್ಜಿ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಆದರೆ, ತನ್ನ ಪತಿ ಬೇರೆ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದು, ತನಗೆ ಮೋಸ ಮಾಡುತ್ತಿದ್ದಾರೆ ಎಂದು ಪ್ರೀತಿ ಆರೋಪಿಸಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ