AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೇಬಲ್ ಮೇಲೆ ನೇತಾಡುತ್ತಿದ್ದ ದೈತ್ಯಾಕಾರದ ಹಾವು ಕಂಡು ಕಿರುಚಾಡಿದ ಜನ; ದೃಶ್ಯ ಕ್ಯಾಮರಾದಲ್ಲಿ ಸೆರೆ

ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಗಮನಿಸುವಂತೆ ರಸ್ತೆಯ ಮೇಲಿರುವ ಕೇಬಲ್ ಮೇಲೆ ದೈತ್ಯಾಕಾರದ ಹಾವು ನೇತಾಡುತ್ತಿತ್ತು. ಸ್ಥಳದಲ್ಲಿ ಸೇರಿದ್ದ ಜನರು ದೃಶ್ಯವನ್ನು ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.

Viral Video: ಕೇಬಲ್ ಮೇಲೆ ನೇತಾಡುತ್ತಿದ್ದ ದೈತ್ಯಾಕಾರದ ಹಾವು ಕಂಡು ಕಿರುಚಾಡಿದ ಜನ; ದೃಶ್ಯ ಕ್ಯಾಮರಾದಲ್ಲಿ ಸೆರೆ
ಕೇಬಲ್​ ಮೇಲೆ ನೇತಾಡುತ್ತಿರುವ ದೈತ್ಯ ಹಾವು
TV9 Web
| Edited By: |

Updated on: Oct 19, 2021 | 10:19 AM

Share

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೋಗಳು ಹರಿದಾಡುತ್ತವೆ. ಕೆಲವು ವಿಡಿಯೋಗಳು ಬೆಚ್ಚಿ ಬೀಳಿಸುವಂತಿರುತ್ತವೆ. ಹಾವು ಅಂದಾಕ್ಷಣ ಯಾರಿಗೆ ಭಯವಿಲ್ಲ ಹೇಳಿ? ಹೆಸರು ಕೇಳಿದಾಕ್ಷಣವೇ ಮೈ ನಡುಗುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಗಮನಿಸುವಂತೆ ಕೇಬಲ್ ಮೇಲೆ ನೇತಾಡುತ್ತಿದ್ದ ದೈತ್ಯಾಕಾರದ ಹಾವು ನೋಡಿ ಜನರು ಬೆರಗಾಗಿದ್ದಾರೆ.

ಅಕ್ಟೋಬರ್ 12ರಂದು ಫಿಲಿಫೈನ್ಸ್ ನಗರದಲ್ಲಿ ಘಟನೆ ನಡೆದಿದೆ. ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಗಮನಿಸುವಂತೆ ರಸ್ತೆಯ ಮೇಲಿರುವ ಕೇಬಲ್ ಮೇಲೆ ದೈತ್ಯಾಕಾರದ ಹಾವು ನೇತಾಡುತ್ತಿತ್ತು. ಸ್ಥಳದಲ್ಲಿ ಸೇರಿದ್ದ ಜನರು ದೃಶ್ಯವನ್ನು ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ದೈತ್ಯ ಹಾವನ್ನು ನೋಡಿ ಕಂಗಾಲಾಗಿ ಜನರು ಕಿರುಚಾಡುತ್ತಿದ್ದರು. ತಕ್ಷಣವೇ ಹಾವು ಕೆಳಕ್ಕೆ ಬಿದ್ದಿದೆ. ಗಾಬರಿಗೊಂಡ ಜನರು ದಿಕ್ಕಾಪಾಲಾಗಿ ಓಡಿದ್ದಾರೆ.

ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನದ ಮೇಲೆ ಹಾವು ಬಂದಂತೆ ಅನಿಸುತ್ತದೆ. ಈ ವಿಡಿಯೋವನ್ನು ಯೂಟ್ಯೂಬ್​ನಲ್ಲಿ ಹಂಚಿಕೊಳ್ಳಲಾಗಿದ್ದು, ಫುಲ್ ವೈರಲ್ ಆಗಿದೆ. ಅಕ್ಟೋಬರ್ 15ನೇ ತಾರೀಕಿನಂದು ವಿಡಿಯೋ ಹರಿಬಿಡಲಾಗಿದೆ. ವಿಡಿಯೋ ಇದೀಗ 5,000ಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಅಕ್ಟೋಬರ್ 12ರಂದು ಸಂಜೆಯ ವೇಳೆ ಸರಿಸುಮಾರು 6:30ರ ಸಮಯದಲ್ಲಿ ಘಟನೆ ನಡೆದಿದೆ ಎಂದು ಮಾಹಿತಿ ಹಂಚಿಕೊಳ್ಳುವ ಮೂಲಕ ವಿಡಿಯೋ ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ:

Viral Videos: ಆಹಾ, ಇಷ್ಟೊಂದು ಮುದ್ದುಮುದ್ದಾಗಿ ಕದಿಯಬಹುದಾ?; ಚಾಣಾಕ್ಷ ಶ್ವಾನಗಳ ವಿಡಿಯೋ ನೋಡಿ

Viral Video: ಮಿಸ್ಟರ್ ಬೀನ್ ಥರಾನೇ ಕಾಣ್ತಾರೆ; ನಟನೆ ಕೂಡ ಸೂಪರ್! ವಿಡಿಯೋ ನೋಡಿ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ