AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮಂದಿರದಲ್ಲಿ ಮೊಣಕಾಲೂರಿ ಪ್ರಾರ್ಥಿಸುತ್ತಿರುವ ಮೇಕೆಯ ವಿಡಿಯೋ ವೈರಲ್

Goat Seen Praying : ಹಿಂದೆ ಭಕ್ತಗಣ, ಮುಂದೆ ಶಿವ, ಆರತಿಯ ಸಮಯ, ಅಲ್ಲಿಗೆ ಬಂದ ಈ ಮೇಕೆ ಮೆಟ್ಟಿಲ ಮೇಲೆ ಮೊಣಕಾಲುಗಳನ್ನೂರಿ ಶಾಂತವಾಗಿ ಪ್ರಾರ್ಥಿಸುತ್ತ ನಿಂತಿತು.

ಶಿವಮಂದಿರದಲ್ಲಿ ಮೊಣಕಾಲೂರಿ ಪ್ರಾರ್ಥಿಸುತ್ತಿರುವ ಮೇಕೆಯ ವಿಡಿಯೋ ವೈರಲ್
ಮೊಣಕಾಲೂರಿ ಪ್ರಾರ್ಥಿಸುವ ಮೇಕೆ
TV9 Web
| Edited By: |

Updated on:Oct 10, 2022 | 6:01 PM

Share

Viral Video : ಇತ್ತೀಚೆಗೆ ಪ್ರಾಣಿಗಳು ಮನುಷ್ಯನನ್ನು ಬಹಳೇ ಅನುಕರಿಸುತ್ತಿವೆ. ಇದಕ್ಕೆ ಸಾಕ್ಷಿ ಎಂಬಂತೆ ವಾರಕ್ಕೊಂದಾದರೂ ವಿಡಿಯೋ ವೈರಲ್ ಆಗುತ್ತಿರುವುದು. ಕಳೆದ ವಾರ ಫ್ರ್ಯಾಕ್ಚರ್ ಆದ ತನ್ನ ಪೋಷಕನ ಕಾಲಿನ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ ನಾಯಿಯೊಂದು ಕುಂಟುತ್ತ ನಡೆಯುತ್ತಿರುವ ವಿಡಿಯೋ ನೋಡಿದ್ದೀರಿ. ಇದೀಗ ಕಾನ್ಫುರದ ಶಿವಮಂದಿರದಲ್ಲಿ ಆರತಿ ನಡೆಯುತ್ತಿದ್ದ ವೇಳೆ ಮೇಕೆಯೊಂದು ಮೊಣಕಾಲೂರಿ ಪ್ರಾರ್ಥಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ನೆಟ್ಟಿಗರು ಭಾವ, ಭಕ್ತಿಪರವಶರಾಗಿ ಈ ವಿಡಿಯೋ ಹಂಚಿಕೊಳ್ಳುತ್ತಿದ್ದಾರೆ.

ಕಾನ್ಫುರದ ಬಾಬಾ ಆನಂದೇಶ್ವರ ದೇವಸ್ಥಾನದಲ್ಲಿ ಭಕ್ತರೊಬ್ಬರು ಈ ದೃಶ್ಯವನ್ನು ವಿಡಿಯೋ ಮಾಡಿದ್ದಾರೆ. ದೇವಸ್ಥಾನದ ತುಂಬಾ ಭಕ್ತರು ಆರತಿ ಸಮಯದಲ್ಲಿ ಕೈಮುಗಿದು ಭಕ್ತಿಯಿಂದ ಪ್ರಾರ್ಥಿಸುತ್ತಿದ್ದಾರೆ. ಅಲ್ಲಿಗೆ ಬಂದ ಈ ಮೇಕೆ ಯಾವುದೇ ರೀತಿಯ ಗದ್ದಲ ಮಾಡದೆ ಶಾಂತವಾಗಿ ತಾನೂ ಅವರಂತೆ ಪ್ರಾರ್ಥಿಸುತ್ತ ನಿಂತುಕೊಂಡಿದೆ. ಡೇವಿಡ್ ಜಾನ್ಸನ್​ ಎನ್ನುವವರು ಈ ವಿಡಿಯೋ ಹಂಚಿಕೊಂಡಿದ್ದಾರೆ.

ಅನೇಕರು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ದೇವಸ್ಥಾನಕ್ಕೆ ಬಂದಿದ್ದ ಲಕ್ಷ್ಮೀ ಎಂಬುವವರು, ‘ಈ ಮೇಕೆ ಬೆಳಗ್ಗೆಯಿಂದಲೇ ದೇವಸ್ಥಾನದ ಆವರಣದಲ್ಲಿ ಓಡಾಡಿಕೊಂಡಿತ್ತು’ ಎಂದಿದ್ದಾರೆ.

ಅನೇಕ ನೆಟ್ಟಿಗರು ಈ ವಿಡಿಯೋ ನೋಡಿ ಮೂಕವಿಸ್ಮಿತರಾಗಿದ್ದಾರೆ. ನಿಜಕ್ಕೂ ಈ ಮೇಕೆ ಹೀಗೆ ಪ್ರಾರ್ಥಿಸಿರುವುದನ್ನು ನಂಬಲಾಗುತ್ತಿಲ್ಲ! ಎಂಥ ಅದ್ಭುತ ಇದು ಎನ್ನುತ್ತಿದ್ದಾರೆ.

ಟ್ರೆಂಡಿಂಗ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 5:36 pm, Mon, 10 October 22

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು