ದೇವಿ ಪ್ರತ್ಯಂಗಿರಾಳನ್ನು ಚೆನ್ನೈಗೆ ಕರೆತಂದ ಮೇಕಪ್​ ಕಲಾವಿದ ದೀಪನ್; ವಿಡಿಯೋ ವೈರಲ್

Makeup Artist : ಈ ಮೇಕಪ್​ ಗ್ರಾಫಿಕ್​ ಅನ್ನೂ ಇದು ಮೀರಿಸಿದೆ. ಈತನಕ ಸಾಕಷ್ಟು ದೇವಿ ಪಾತ್ರಧಾರಿಗಳನ್ನು ನೋಡಿದ್ದೇವೆ. ಆದರೆ ಈ ಬಾಲೆ ಅದೃಷ್ಟವಂತಳು. ನಿಜವಾಗಲೂ ದೇವಿಯೇ ಪ್ರತ್ಯಕ್ಷವಾದ ಹಾಗಿದೆ ಎನ್ನುತ್ತಿದ್ದಾರೆ ನೆಟ್ಟಿಗರು.

ದೇವಿ ಪ್ರತ್ಯಂಗಿರಾಳನ್ನು ಚೆನ್ನೈಗೆ ಕರೆತಂದ ಮೇಕಪ್​ ಕಲಾವಿದ ದೀಪನ್; ವಿಡಿಯೋ ವೈರಲ್
ಚೆನ್ನೈನ ಗಾಡೆಸ್ ಮೇಕಪ್​ ಸೆಮಿನಾರ್​ನಲ್ಲಿ ಅವತರಿಸಿದ ಪ್ರ್ಯತ್ಯಾಂಗೀರಾ ದೇವಿ ಮತ್ತು ಮೇಕಪ್ ಕಲಾವಿದ ದೀಪನ್​ ಡಿ. ಕ್ರೂಝ್
Follow us
| Updated By: ಶ್ರೀದೇವಿ ಕಳಸದ

Updated on:Feb 10, 2023 | 6:23 PM

Viral Video : ಸಾಮಾಜಿಕ ಜಾಲತಾಣವು ಅನೇಕ ಕಲಾವಿದರ ಪ್ರತಿಭೆಗೆ ಒಳ್ಳೆಯ ವೇದಿಕೆಯನ್ನು ಕಲ್ಪಿಸಿಕೊಟ್ಟಿದೆ. ಜೊತೆಗೆ ಅನ್ನಮಾರ್ಗವಾಗಿಯೂ ಸಾರ್ವಜನಿಕ ಜಗತ್ತಿಗೆ ಕೊಂಡಿಯಂತಾಗಿ ಪರಿಣಮಿಸಿದೆ. ಇತ್ತೀಚೆಗೆ ಚೆನ್ನೈನ ಮೇಕಪ್​ ಕಲಾವಿದರೊಬ್ಬರು ತಮ್ಮ ಕಲಾನೈಪುಣ್ಯದಿಂದ ಪ್ರತ್ಯಂಗಿರಾ ದೇವಿಯನ್ನು ಸೃಷ್ಟಿಸಿದ್ದಾರೆ. ಆ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ನೆಟ್ಟಿಗರು ಇದು ಗ್ರಾಫಿಕ್​ ಅನ್ನೂ ಮೀರಿಸುವ ಹಾಗಿದೆ ಎಂದು ಕೊಂಡಾಡುತ್ತಿದ್ದಾರೆ.

View this post on Instagram
ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

A post shared by Deepan D’cruze (@deepan_makeover)

ದೀಪನ್​ ಡಿ’ಕ್ರೂಝ್ ಎನ್ನುವ ಕಲಾವಿದರೇ ಈ ದೇವಿಯ ಸೃಷ್ಟಿಕರ್ತರು. ಗಾಡೆಸ್ ಮೇಕಪ್​ ಸೆಮಿನಾರ್​ನಲ್ಲಿ ಈ ದೇವಿ ಪವಡಿಸಿದ್ದಾಳೆ. ಈತನಕ ಈ ವಿಡಿಯೋ ಅನ್ನು ಸುಮಾರು 3 ಲಕ್ಷ ಜನರು ನೋಡಿದ್ದಾರೆ. ನೂರಾರು ಜನರು ಅದ್ಭುತವಾದ ಈ ಕಲೆಯನ್ನ ನೋಡಿ ಶ್ಲಾಘಿಸಿದ್ದಾರೆ.

ಇದನ್ನೂ ಓದಿ : ಹಾಡಹಗಲೇ ಹುಲಿಯೊಂದು ರಸ್ತೆ ದಾಟುತ್ತಿರುವ ವಿಡಿಯೋ ವೈರಲ್

ದೇವರೇ, ನಿಜವಾಗಲೂ ನಾನು ಭಾವುಕಳಾಗುತ್ತಿದ್ದೀನಿ ಎಂದಿದ್ದಾರೆ ಒಬ್ಬರು. ಈತನಕ ಸಾಕಷ್ಟು ದೇವಿ ಪಾತ್ರಧಾರಿಗಳನ್ನು ನೋಡಿದ್ದೀರಿ. ಆದರೆ ಈ ಬಾಲೆ ನಿಜಕ್ಕೂ ಅದೃಷ್ಟವಂತಳು. ನಿಜವಾಗಲೂ ದೇವಿಯೇ ಪ್ರತ್ಯಕ್ಷವಾದ ಹಾಗಿದೆ ಎಂದಿದ್ದಾರೆ ಮತ್ತೊಬ್ಬರು. ಇದು ಮೇಕಪ್ ಅಲ್ಲ. ನಿಜವಾಗಲೂ ಪ್ರತ್ಯಂಗಿರಾ ದೇವಿಯೇ ಎಂದಿದ್ದಾರೆ ಅನೇಕರು.

ಇದನ್ನೂ ಓದಿ : ಧ್ವನಿಮಾಯಾ ಕಲಾವಿದೆ ಇಂದುಶ್ರೀಯ ತಾತ ಹೆಂಡತಿಗೆ ಸೀರೆ ತರಲು ಮಧ್ಯಪ್ರದೇಶಕ್ಕೆ ಹೋದಾಗ

ಇದು ಹೆಣ್ಣುರೂಪಿ ಹನುಮಂತನೇ? ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ. ಇಲ್ಲಿ ಏನು ನಡೀತಿದೆ ಎನ್ನುವುದೇ ಅರ್ಥವಾಗುತ್ತಿಲ್ಲ. ಇಷ್ಟೊಂದು ಮೇಕಪ್​ ಹಾಕಿಕೊಂಡು ಇವರೆಲ್ಲ ಯಾಕೆ ವೇದಿಕೆಯ ಮೇಲೆ ಕುಣಿಯುತ್ತಿದ್ದಾರೆ ಎಂದು ಮಗದೊಬ್ಬರು ಕೇಳಿದ್ದಾರೆ. ಬರೀ ಹಿಂದೂ ದೇವತೆಗಳು ಮಾತ್ರವಾ? ಎಂದು ಇನ್ನೊಬ್ಬರು ಕೇಳಿದ್ದಾರೆ. ಕಲೆಯನ್ನು ಕಲೆಯ ದೃಷ್ಟಿಯಿಂದ ನೋಡಿದರೆ ಬೇರೆ ರೀತಿಯ ಪ್ರಶ್ನೆಗಳು ಹುಟ್ಟುತ್ತವೆ ಎಂದು ಅದಕ್ಕೆ ಪ್ರತ್ಯುತ್ತರ ನೀಡಿದ್ದಾರೆ ಯಾರೋ ಒಬ್ಬರು.

ಇದನ್ನು ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:22 pm, Fri, 10 February 23

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ