AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜಲಪಾತದಲ್ಲಿ ಗೋಲ್ಡನ್ ರಿಟ್ರೈವರ್ ನಾಯಿಗಳ ಜಾರುಬಂಡಿ ಆಟ; ವೈರಲ್ ವಿಡಿಯೋ ಇಲ್ಲಿದೆ

ಎರಡು ಗೋಲ್ಡನ್ ರಿಟ್ರೈವರ್ ನಾಯಿಗಳು ಜಲಪಾತದಲ್ಲಿ ಆಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನೀವು ಶ್ವಾನ ಪ್ರೇಮಿಯಾಗಿದ್ದರೆ ಈ ವಿಡಿಯೋ ನಿಮ್ಮ ಮನಸ್ಸಿಗೆ ಮುದ ನೀಡುವುದು ಖಚಿತ.

Viral Video: ಜಲಪಾತದಲ್ಲಿ ಗೋಲ್ಡನ್ ರಿಟ್ರೈವರ್ ನಾಯಿಗಳ ಜಾರುಬಂಡಿ ಆಟ; ವೈರಲ್ ವಿಡಿಯೋ ಇಲ್ಲಿದೆ
ಜಲಪಾತದಲ್ಲಿ ಆಡುತ್ತಿರುವ ಗೋಲ್ಡನ್ ರಿಟ್ರೈವರ್ ನಾಯಿಗಳು
TV9 Web
| Edited By: Rakesh Nayak Manchi|

Updated on: Aug 01, 2022 | 3:09 PM

Share

ಮೈತುಂಬಾ ರೋಮಗಳುಳ್ಳ ನಾಯಿಗಳು ಸಾಮಾನ್ಯವಾಗಿ ತಂಪಾಗಿರುವ ಜಾಗವನ್ನು ನೋಡಿಕೊಂಡು ಮಲಗಿಬಿಡುತ್ತದೆ. ಇನ್ನು ಅಂತಹ ನಾಯಿಗಳು ನೀರು ಸಿಕ್ಕಿದರೆ ಬಿಡುತ್ತವೆಯೇ? ಬಂಡೆ ಕಲ್ಲಿನ ಮೇಲಿನಿಂದ ಜಲಪಾತದಂತೆ ಹರಿದು ಬರುತ್ತಿರುವ ನೀರಿನಲ್ಲಿ ಎರಡು ನಾಯಿಗಳು ಜಾರುಬಂಡಿಯಂತೆ ಆಡುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ನೀವು ಪೆಟ್ ಲವರ್ಸ್ ಆಗಿದ್ದರೆ ಖಂಡಿತವಾಗಿಯೂ ಈ ವಿಡಿಯೋವನ್ನು ನೋಡಲೇಬೇಕು. ಏಕೆಂದರೆ, ಈ ವಿಡಿಯೋ ನಿಮ್ಮ ಮನಸ್ಸಿಗೆ ಮುದ ನೀಡುವಂತಿದೆ.

ಗೋಲ್ಡನ್ ರಿಟ್ರೈವರ್​ ನಾಯಿಗಳ ವಿಡಿಯೋಗಳಿಗೆ ಸೀಮಿತವಾಗಿರುವ agoldennamedkevin ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದ್ದು, ಎರಡು ಗೋಲ್ಡನ್ ರಿಟ್ರೈವರ್ ನಾಯಿಗಳು ಬೃಹದಾಕಾರದ ಬಂಡೆಗಲ್ಲಿನ ಮೇಲಿನಿಂದ ಹರಿದು ಬರುತ್ತಿರುವ ನೀರಿನ ನಡುವೆ ಮೇಲಕ್ಕೆ ಹತ್ತಲು ಹರಸಾಹಸ ಪಡುವುದನ್ನು ಕಾಣಬಹುದು. ಐದು ದಿನಗಳ ಹಿಂದೆ ಹಂಚಿಕೊಂಡಿರುವ ಈ ವಿಡಿಯೋ ಈವರೆಗೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಸಂಗ್ರಹಿಸಿದ್ದು, 90ಸಾವಿರಕ್ಕೂ ಹೆಚ್ಚು ಲೈಕ್​ಗಳು ಬಂದಿವೆ.

ವೈರಲ್ ವಿಡಿಯೋದಲ್ಲಿ ಇರುವಂತೆ, ಎರಡು ಗೋಲ್ಡನ್ ರಿಟ್ರೈವರ್ ನಾಯಿಗಳು ದೊಡ್ಡ ಬಂಡೆ ಕಲ್ಲಿನ ಮೇಲಿನಿಂದ ಹರಿದು ಬರುತ್ತಿರುವ ನೀರಿನಲ್ಲಿ ಆಡುತ್ತಿರುತ್ತವೆ. ಮಾತ್ರವಲ್ಲದೆ ನೀರಿನ ನಡುವೆ ಮೇಲಕ್ಕೆ ಹತ್ತಲು ಯತ್ನಿಸುತ್ತವೆ. ಈ ವೇಳೆ ಎರಡೂ ನಾಯಿಗಳು ಜಾರಿ ಬೀಳುತ್ತವೆ. ಇದರಲ್ಲೊಂದು ನಾಯಿ ಮಾತ್ರ ಮಕ್ಕಳು ಜಾರು ಬಂಡಿಯಲ್ಲಿ ಜಾರಿದಂತೆ ಜಾರಿಕೊಂಡು ಕೆಳಗೆ ಹೋಗುತ್ತದೆ.

ವಿಡಿಯೋವನ್ನು ನೋಡಿದ ಒಂದಷ್ಟು ಮಂದಿ ಪ್ರೀತಿಯ ಕಾಮೆಂಟ್​ಗಳನ್ನು ಮಾಡಿದ್ದಾರೆ. ಕಾಮೆಂಟ್ ಮಾಡಿದ ನೆಟ್ಟಿಗರೊಬ್ಬರು, ಕಷ್ಟಪಡುವುದು ನಿಜ” ಎಂದಿದ್ದಾರೆ. ಮತ್ತೊಬ್ಬರು ಕಾಮೆಂಟ್ ಮಾಡಿ, “ನನಗೆ ತುಂಬಾ ಮೋಜು ತೋರುತ್ತಿದೆ” ಎಂದಿದ್ದಾರೆ.

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ