AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜಲಪಾತದಲ್ಲಿ ಗೋಲ್ಡನ್ ರಿಟ್ರೈವರ್ ನಾಯಿಗಳ ಜಾರುಬಂಡಿ ಆಟ; ವೈರಲ್ ವಿಡಿಯೋ ಇಲ್ಲಿದೆ

ಎರಡು ಗೋಲ್ಡನ್ ರಿಟ್ರೈವರ್ ನಾಯಿಗಳು ಜಲಪಾತದಲ್ಲಿ ಆಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನೀವು ಶ್ವಾನ ಪ್ರೇಮಿಯಾಗಿದ್ದರೆ ಈ ವಿಡಿಯೋ ನಿಮ್ಮ ಮನಸ್ಸಿಗೆ ಮುದ ನೀಡುವುದು ಖಚಿತ.

Viral Video: ಜಲಪಾತದಲ್ಲಿ ಗೋಲ್ಡನ್ ರಿಟ್ರೈವರ್ ನಾಯಿಗಳ ಜಾರುಬಂಡಿ ಆಟ; ವೈರಲ್ ವಿಡಿಯೋ ಇಲ್ಲಿದೆ
ಜಲಪಾತದಲ್ಲಿ ಆಡುತ್ತಿರುವ ಗೋಲ್ಡನ್ ರಿಟ್ರೈವರ್ ನಾಯಿಗಳು
TV9 Web
| Edited By: |

Updated on: Aug 01, 2022 | 3:09 PM

Share

ಮೈತುಂಬಾ ರೋಮಗಳುಳ್ಳ ನಾಯಿಗಳು ಸಾಮಾನ್ಯವಾಗಿ ತಂಪಾಗಿರುವ ಜಾಗವನ್ನು ನೋಡಿಕೊಂಡು ಮಲಗಿಬಿಡುತ್ತದೆ. ಇನ್ನು ಅಂತಹ ನಾಯಿಗಳು ನೀರು ಸಿಕ್ಕಿದರೆ ಬಿಡುತ್ತವೆಯೇ? ಬಂಡೆ ಕಲ್ಲಿನ ಮೇಲಿನಿಂದ ಜಲಪಾತದಂತೆ ಹರಿದು ಬರುತ್ತಿರುವ ನೀರಿನಲ್ಲಿ ಎರಡು ನಾಯಿಗಳು ಜಾರುಬಂಡಿಯಂತೆ ಆಡುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ನೀವು ಪೆಟ್ ಲವರ್ಸ್ ಆಗಿದ್ದರೆ ಖಂಡಿತವಾಗಿಯೂ ಈ ವಿಡಿಯೋವನ್ನು ನೋಡಲೇಬೇಕು. ಏಕೆಂದರೆ, ಈ ವಿಡಿಯೋ ನಿಮ್ಮ ಮನಸ್ಸಿಗೆ ಮುದ ನೀಡುವಂತಿದೆ.

ಗೋಲ್ಡನ್ ರಿಟ್ರೈವರ್​ ನಾಯಿಗಳ ವಿಡಿಯೋಗಳಿಗೆ ಸೀಮಿತವಾಗಿರುವ agoldennamedkevin ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದ್ದು, ಎರಡು ಗೋಲ್ಡನ್ ರಿಟ್ರೈವರ್ ನಾಯಿಗಳು ಬೃಹದಾಕಾರದ ಬಂಡೆಗಲ್ಲಿನ ಮೇಲಿನಿಂದ ಹರಿದು ಬರುತ್ತಿರುವ ನೀರಿನ ನಡುವೆ ಮೇಲಕ್ಕೆ ಹತ್ತಲು ಹರಸಾಹಸ ಪಡುವುದನ್ನು ಕಾಣಬಹುದು. ಐದು ದಿನಗಳ ಹಿಂದೆ ಹಂಚಿಕೊಂಡಿರುವ ಈ ವಿಡಿಯೋ ಈವರೆಗೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಸಂಗ್ರಹಿಸಿದ್ದು, 90ಸಾವಿರಕ್ಕೂ ಹೆಚ್ಚು ಲೈಕ್​ಗಳು ಬಂದಿವೆ.

ವೈರಲ್ ವಿಡಿಯೋದಲ್ಲಿ ಇರುವಂತೆ, ಎರಡು ಗೋಲ್ಡನ್ ರಿಟ್ರೈವರ್ ನಾಯಿಗಳು ದೊಡ್ಡ ಬಂಡೆ ಕಲ್ಲಿನ ಮೇಲಿನಿಂದ ಹರಿದು ಬರುತ್ತಿರುವ ನೀರಿನಲ್ಲಿ ಆಡುತ್ತಿರುತ್ತವೆ. ಮಾತ್ರವಲ್ಲದೆ ನೀರಿನ ನಡುವೆ ಮೇಲಕ್ಕೆ ಹತ್ತಲು ಯತ್ನಿಸುತ್ತವೆ. ಈ ವೇಳೆ ಎರಡೂ ನಾಯಿಗಳು ಜಾರಿ ಬೀಳುತ್ತವೆ. ಇದರಲ್ಲೊಂದು ನಾಯಿ ಮಾತ್ರ ಮಕ್ಕಳು ಜಾರು ಬಂಡಿಯಲ್ಲಿ ಜಾರಿದಂತೆ ಜಾರಿಕೊಂಡು ಕೆಳಗೆ ಹೋಗುತ್ತದೆ.

ವಿಡಿಯೋವನ್ನು ನೋಡಿದ ಒಂದಷ್ಟು ಮಂದಿ ಪ್ರೀತಿಯ ಕಾಮೆಂಟ್​ಗಳನ್ನು ಮಾಡಿದ್ದಾರೆ. ಕಾಮೆಂಟ್ ಮಾಡಿದ ನೆಟ್ಟಿಗರೊಬ್ಬರು, ಕಷ್ಟಪಡುವುದು ನಿಜ” ಎಂದಿದ್ದಾರೆ. ಮತ್ತೊಬ್ಬರು ಕಾಮೆಂಟ್ ಮಾಡಿ, “ನನಗೆ ತುಂಬಾ ಮೋಜು ತೋರುತ್ತಿದೆ” ಎಂದಿದ್ದಾರೆ.

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ