Viral Video: ಸರ್ಕಾರಿ ಕಚೇರಿಗೆ ನುಗ್ಗಿದ ಮೇಕೆ ಫೈಲ್ ಕಚ್ಚಿಕೊಂಡು ಪರಾರಿ; ಬೆನ್ನತ್ತಿ ಓಡಿದ ಸಿಬ್ಬಂದಿಯ ವಿಡಿಯೋ ವೈರಲ್

Shocking Video: ಮೇಕೆಯೊಂದು ಆಫೀಸಿನ ಕೋಣೆಗೆ ಹೋಗಿ ಕಡತವನ್ನು ಬಾಯಿಯಲ್ಲಿ ಹಿಡಿದುಕೊಂಡು ಹೊರಗೆ ಬಂದಿತು. ಮೇಕೆಯ ಬಾಯಿಯಲ್ಲಿ ಫೈಲ್ ಅನ್ನು ಗುರುತಿಸಿದ ಉದ್ಯೋಗಿ ತಕ್ಷಣವೇ ಅದರ ಹಿಂದೆ ಓಡಲು ಪ್ರಾರಂಭಿಸಿದರು.

Viral Video: ಸರ್ಕಾರಿ ಕಚೇರಿಗೆ ನುಗ್ಗಿದ ಮೇಕೆ ಫೈಲ್ ಕಚ್ಚಿಕೊಂಡು ಪರಾರಿ; ಬೆನ್ನತ್ತಿ ಓಡಿದ ಸಿಬ್ಬಂದಿಯ ವಿಡಿಯೋ ವೈರಲ್
ಫೈಲ್ ಎತ್ತಿಕೊಂಡು ಹೋದ ಮೇಕೆಯ ವಿಡಿಯೋ
Follow us
| Updated By: ಸುಷ್ಮಾ ಚಕ್ರೆ

Updated on: Dec 03, 2021 | 5:42 PM

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಮೇಕೆಯೊಂದು ಚೌಬೆಪುರ ಡೆವಲಪ್‌ಮೆಂಟ್ ಬ್ಲಾಕ್ ಕಚೇರಿಯ ಕೊಠಡಿಯೊಂದಕ್ಕೆ ನುಗ್ಗಿ ಕಡತವನ್ನು ಬಾಯಿಯಲ್ಲಿ ಕಚ್ಚಿಕೊಂಡು ಪರಾರಿಯಾದ ವಿಚಿತ್ರವಾದ ಘಟನೆ ನಡೆದಿದೆ. ಮೇಕೆಯ ಬಾಯಿಯಲ್ಲಿ ಆಫೀಸ್ ಫೈಲ್ ಇರುವುದನ್ನು ಗಮನಿಸಿದ ಆ ಕಚೇರಿಯ ನೌಕರರು ಆ ಕಡತವನ್ನು ವಾಪಾಸ್ ಪಡೆಯಲು ಮೇಕೆಯ ಹಿಂದೆ ಓಡಿದ್ದಾರೆ. ಚೌಬೆಪುರ ಬ್ಲಾಕ್‌ನಲ್ಲಿರುವ ಪಂಚಾಯತ್ ಕಾರ್ಯದರ್ಶಿ ಕಚೇರಿಯಲ್ಲಿ ಬುಧವಾರ ಈ ಘಟನೆ ನಡೆದಿದೆ.

ಕಪ್ಪು ಮೇಕೆಯೊಂದು ಆಫೀಸಿನ ಕೋಣೆಗೆ ಹೋಗಿ ಕಡತವನ್ನು ಬಾಯಿಯಲ್ಲಿ ಹಿಡಿದುಕೊಂಡು ಹೊರಗೆ ಬಂದಿತು. ಮೇಕೆಯ ಬಾಯಿಯಲ್ಲಿ ಫೈಲ್ ಅನ್ನು ಗುರುತಿಸಿದ ಉದ್ಯೋಗಿ ತಕ್ಷಣವೇ ಅದರ ಹಿಂದೆ ಓಡಲು ಪ್ರಾರಂಭಿಸಿದರು. ಈ ತಮಾಷೆಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

22 ಸೆಕೆಂಡ್‌ಗಳ ಈ ವಿಡಿಯೋದಲ್ಲಿ ಪಂಚಾಯತ್ ಕಾರ್ಯದರ್ಶಿ ಕಚೇರಿಯ ಹೊರಗೆ ಕೆಲವು ನೌಕರರು ಬಿಸಿಲಲ್ಲಿ ನಿಂತಿರುವುದನ್ನು ಕಾಣಬಹುದು. ಅವರಲ್ಲಿ ಒಬ್ಬರು ಮೇಕೆಯನ್ನು ಹಿಂಬಾಲಿಸಿದ್ದಾರೆ.

ಈ ವೈರಲ್ ವಿಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಮೇಕೆ ಕೂಡ ಫೈಲ್​ನಲ್ಲಿರುವ ದಾಖಲೆಗಳನ್ನು ಓದಲು ಅದನ್ನು ತೆಗೆದುಕೊಂಡು ಹೋಗಿರಬಹುದು ಎಂದು ಒಬ್ಬರು ತಮಾಷೆಯಾಗಿ ಕಮೆಂಟ್ ಮಾಡಿದ್ದಾರೆ. ಒಂದು ಫೈಲ್ ಅನ್ನು ಮೇಕೆಗೆ ಸಿಗುವಷ್ಟು ಬೇಜವಾಬ್ದಾರಿಯಿಂದ ಇಟ್ಟಿದ್ದಾರೆ ಎಂದರೆ ಇಂಥವರಿಂದ ಜನಸಾಮಾನ್ಯರಿಗೆ ಏನು ಸಹಾಯ? ಎಂದು ಇನ್ನು ಕೆಲವರು ಕಮೆಂಟ್ ಮಾಡಿದ್ದಾರೆ.

ನೌಕರರು ಕಡತವನ್ನು ವಾಪಾಸ್ ಪಡೆಯುವಲ್ಲಿ ಯಶಸ್ವಿಯಾದರೂ ಅದರ ಹಾಳೆಗಳು ಕಿತ್ತುಹೋಗಿದ್ದವು. ಮೇಕೆ ಆ ಫೈಲ್​ನ ಒಂದು ಭಾಗವನ್ನು ಜಗಿಯುತ್ತಿತ್ತು. ಉದ್ಯೋಗಿಗಳು ಹರಿದ ಕಡತದ ಪುಟಗಳನ್ನು ಗಮ್ ಟೇಪ್​ನಿಂದ ಅಂಟಿಸಿದರು.

ಇದನ್ನೂ ಓದಿ: Viral Video: ಕುಕ್ಕರ್​ನಲ್ಲಿ ಕಾಫಿ ಮಾಡೋದನ್ನು ನೋಡಿದ್ದೀರಾ?; ಬೀದಿ ವ್ಯಾಪಾರಿಯ ವಿಡಿಯೋ ವೈರಲ್

Viral News: ಮದುವೆಯಾದ ಮರುದಿನವೇ ಗರ್ಲ್​ಫ್ರೆಂಡ್ ಜೊತೆ ವಧು ಪರಾರಿ; ಶಾಕ್ ಆದ ಗಂಡನಿಗೆ ಹೃದಯಾಘಾತ!

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ