AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತಾಯಿ ಕಳೆದುಕೊಂಡ ವಿದ್ಯಾರ್ಥಿಗೆ ಅಪ್ಪುಗೆಯ ಸಾಂತ್ವಾನ ಹೇಳಿದ ತರಗತಿ! ಕಣ್ಣೀರು ಬರಿಸುತ್ತದೆ ಈ ವಿಡಿಯೋ

ತನ್ನ ತಾಯಿಯನ್ನು ಕಳೆದುಕೊಂಡು ಶಾಲೆಗೆ ಹಿಂದಿರುಗಿದ ವಿದ್ಯಾರ್ಥಿಯನ್ನು ಇಡೀ ತರಗತಿಯೇ ಅಪ್ಪುಗೆಯ ಸಾಂತ್ವಾನ ಹೇಳಿದ ವಿಡಿಯೋ ವೈರಲ್ ಆಗುತ್ತಿದೆ. ವೀಕ್ಷಕರ ಕಣ್ಣು ಒದ್ದೆ ಮಾಡುವ ವಿಡಿಯೋ ಇಲ್ಲಿದೆ ನೋಡಿ.

Viral Video: ತಾಯಿ ಕಳೆದುಕೊಂಡ ವಿದ್ಯಾರ್ಥಿಗೆ ಅಪ್ಪುಗೆಯ ಸಾಂತ್ವಾನ ಹೇಳಿದ ತರಗತಿ! ಕಣ್ಣೀರು ಬರಿಸುತ್ತದೆ ಈ ವಿಡಿಯೋ
ತಾಯಿ ಕಳೆದುಕೊಂಡ ವಿದ್ಯಾರ್ಥಿಗೆ ಅಪ್ಪುಗೆಯ ಸಾಂತ್ವಾನ
TV9 Web
| Updated By: Rakesh Nayak Manchi|

Updated on:Jun 26, 2022 | 4:30 PM

Share

ಪೋಷಕರನ್ನು ಕಳೆದುಕೊಂಡವರ ದುಃಖ ಅವರಿಗೆ ಮಾತ್ರ ಗೊತ್ತು. ವಿದ್ಯಾರ್ಥಿಯೊಬ್ಬ ತನ್ನ ತಾಯಿಯನ್ನು ಕಳೆದುಕೊಂಡು ಹಲವು ದಿನಗಳ ನಂತರ ದುಃಖತಪ್ತನಾಗಿ ಶಾಲೆಗೆ ಬಂದಾಗ ಸಹಪಾಠಿಯನ್ನು ನೋಡಿ ಇಡೀ ತರಗತಿಯೇ ಅಪ್ಪಿಕೊಂಡ ದೃಶ್ಯಾವಳಿ ಕಣ್ಣೀರು ಬರಿಸುವಂತಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ (Viral Video) ಆಗುತ್ತಿದೆ.

ಇದನ್ನೂ ಓದಿ: Viral Video: ಇದು ಇದು ಆಕ್ಚುಲಿ ಚೆನ್ನಾಗಿರೋದು! ಪ್ರೋತ್ಸಾಹ ಅಂದ್ರೆ ಹೀಗಿರಬೇಕು

goodnews movemen ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕಣ್ಣೀರಿನ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ”ತಾಯಿ ಹಠಾತ್ತನೆ ನಿಧನರಾದ ನಂತರ ಕೆಲವು ದಿನಗಳವರೆಗೆ ಶಾಲೆಯಿಂದ ಹೊರಗುಳಿದಿದ್ದರು. ಅವನು ಹಿಂದಿರುಗಿದ ನಂತರ, ಅವನ ಇಡೀ ವರ್ಗವು ಬೆಂಬಲ ಮತ್ತು ಒಗ್ಗಟ್ಟಿನ ಪ್ರೀತಿಯ ಪ್ರದರ್ಶನದಲ್ಲಿ ಅವನನ್ನು ಅಪ್ಪಿಕೊಂಡಿತು” ಎಂದು ಶೀರ್ಷಿಕೆ ಬರೆಯಲಾಗಿದೆ.

ಇದನ್ನೂ ಓದಿ: Viral Video: ವಿಮಾನದಲ್ಲಿ ಎಸಿ ಸ್ಥಗಿತಗೊಂಡು ಪ್ರಯಾಕರು ಸುಸ್ತೋ ಸುಸ್ತು! ವಿಮಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ಪ್ರಯಾಣಿಕರು

ವಿಡಿಯೋದಲ್ಲಿ ಕಾಣುವಂತೆ, ವ್ಯಕ್ತಿಯೊಬ್ಬರು ವಿದ್ಯಾರ್ಥಿಗಳ ಮುಂದೆ ತಾಯಿ ಕಳೆದುಕೊಂಡ ವಿದ್ಯಾರ್ಥಿಯನ್ನು ನಿಲ್ಲಿಸಿ ಮಾತನಾಡಿಸುತ್ತಿದ್ದಾಗ ತರಗತಿಯಲ್ಲಿದ್ದ ಅಷ್ಟೂ ವಿದ್ಯಾರ್ಥಿಗಳು ಬಂದು ಆತನನ್ನು ಅಪ್ಪಿಕೊಳ್ಳುತ್ತಾರೆ. ಈ ವೇಳೆ ವಿದ್ಯಾರ್ಥಿಯ ಹೆಗಲ ಮೇಲೆ ಕೈಯಿಟ್ಟು ಮಾತನಾಡುತ್ತಿದ್ದ ವ್ಯಕ್ತಿ ಹೊರಗೆ ಹೋಗಿ ಅಳುತ್ತಾನೆ ಮತ್ತು ವಿದ್ಯಾರ್ಥಿಗಳು ಕೂಡ ಅಳುವುದನ್ನು ಕಾಣಬಹುದು.

ಕರುಳು ಚುರ್ ಎನ್ನುವಂತೆ ಮಾಡುವ ಈ ವಿಡಿಯೋ ವೈರಲ್ ಪಡೆದು 20 ಗಂಟೆಗಳಲ್ಲಿ 1.2 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದ್ದು, 96 ಸಾವಿರಕ್ಕೂ ಹೆಚ್ಚು ಲೈಕ್ಸ್​ಗಳನ್ನು ಪಡೆದುಕೊಂಡಿದೆ. ವಿಡಿಯೋ ವೀಕ್ಷಣೆ ಮಾಡಿದ ನೆಟ್ಟಿಗರು ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದು, “ಜಗತ್ತಿಗೆ ಹೆಚ್ಚಿನ ದಯೆ ಬೇಕು” ಎಂದು ಬಳಕೆದಾರರೊಬ್ಬರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Viral Video: ಮಳೆಗಾಳದಲ್ಲಿ ಹೇಗೆ ನಡೆದುಕೊಂಡು ಹೋಗಬೇಕು ಗೊತ್ತಾ? ಈ ವಿಡಿಯೋ ನೋಡಿ

Published On - 4:30 pm, Sun, 26 June 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ