AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರ ಒಳಉಡುಪು ಧರಿಸಿ ನಡುರಸ್ತೆಯಲ್ಲೇ ರೀಲ್ಸ್​ ಮಾಡಲು ಹೊರಟ ಯುವಕನಿಗೆ ಬಿತ್ತು ಸ್ಥಳೀಯರಿಂದ ಧರ್ಮದೇಟು

ಹರಿಯಾಣದ ಪಾಣಿಪತ್‌ನಲ್ಲಿ ಕಿಕ್ಕಿರಿದ ಮಾರುಕಟ್ಟೆಯಲ್ಲಿ ಮಹಿಳೆಯರ ಒಳಉಡುಪು ಧರಿಸಿ ರೀಲ್ಸ್ ಮಾಡಲು ಯತ್ನಿಸಿದ ಯುವಕನನ್ನು ಸ್ಥಳೀಯರು ಥಳಿಸಿದ್ದಾರೆ. ಈ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಯುವಕನ ಅಶ್ಲೀಲ ಕೃತ್ಯದಿಂದ ಮಾರುಕಟ್ಟೆಯಲ್ಲಿದ್ದ ಮಹಿಳೆಯರಿಗೆ ಮುಜುಗರ ಉಂಟಾಗಿದ್ದು, ಸ್ಥಳೀಯ ಪುರುಷರೆಲ್ಲ ಸೇರಿ ಯುವಕನಿಗೆ ಧರ್ಮದೇಟು ನೀಡಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:Nov 27, 2024 | 11:46 AM

Share

ಹರಿಯಾಣ: ಕಿಕ್ಕಿರಿದ ಮಾರುಕಟ್ಟೆಯಲ್ಲಿ ಮಹಿಳೆಯರ ಒಳಉಡುಪು ಧರಿಸಿ ರೀಲ್ಸ್​​​ ಮಾಡಲು ಮುಂದಾಗಿದ್ದ ಯುವಕನಿಗೆ ಸ್ಥಳೀಯರು ಸೇರಿ ಮನಬಂದಂತೆ ಥಳಿಸಿರುವ ಘಟನೆ ಹರಿಯಾಣದ ಪಾಣಿಪತ್‌ನಲ್ಲಿ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ಯುವಕ ಮಹಿಳೆಯರ ಬ್ರಾ ಹಾಗೂ ಲಂಗ ಧರಿಸಿ ಆಶ್ಲೀಲವಾಗಿ ನೃತ್ಯ ಮಾಡಲು ಪ್ರಾರಂಭಿಸುತ್ತಿದ್ದಂತೆ ಕೋಪಗೊಂಡ ಸ್ಥಳೀಯ ಮಾರಾಟಗಾರರು ಯುವಕನನ್ನು ಹಿಡಿದು ಥಳಿಸಿದ್ದಾರೆ.

ಈ ಘಟನೆಯು ಪಾಣಿಪತ್‌ನ ಇನ್ಸಾರ್ ಮಾರ್ಕೆಟ್‌ನಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ಕಿಕ್ಕಿರಿದು ತುಂಬಿದ್ದ ಮಾರುಕಟ್ಟೆಯ ಮಧ್ಯದಲ್ಲಿ ಈತನ ಅಶ್ಲೀಲ ಕೃತ್ಯದಿಂದ ಮಾರುಕಟ್ಟೆಯಲ್ಲಿದ್ದ ಮಹಿಳೆಯರಿಗೆ ಮುಜುಗರ ಉಂಟಾಗಿದ್ದು, ಸ್ಥಳೀಯ ಪುರುಷರೆಲ್ಲ ಸೇರಿ ಧರ್ಮದೇಟು ನೀಡಿದ್ದಾರೆ.

ಇದನ್ನೂ ಓದಿ: 13 ಅಡಿಯ ಬೃಹತ್ ಮೊಸಳೆಯನ್ನು ತನ್ನ ಭುಜದ ಮೇಲೆ ಹೊತ್ತು ಸಾಗಿದ ವ್ಯಕ್ತಿ

ಮಾರುಕಟ್ಟೆಯಲ್ಲಿ ಇರುವ ಜನಸಮೂಹದ ಮುಂದೆ ಯುವಕ ಸ್ತ್ರೀಯರ ಒಳ ಉಡುಪನ್ನು ಮಾತ್ರ ಧರಿಸಿ ಅರೆಬೆತ್ತಲೆಯಾಗಿದ್ದು, ಸ್ಥಳೀಯ ಮಾರಾಟಗಾರರು ಯುವಕನಿಗೆ ಚಪ್ಪಲಿಯಿಂದ ಥಳಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಯುವಕ ಅಂಗಡಿಯವರಲ್ಲಿ ಕ್ಷಮೆಯಾಚಿಸಿ ತನ್ನನ್ನು ಬಿಟ್ಟುಬಿಡುವಂತೆ ಮನವಿ ಮಾಡುವುದನ್ನು ಸಹ ಕಾಣಬಹುದು. ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಪೊಲೀಸ್ ದೂರು ವರದಿಯಾಗಿಲ್ಲ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:45 am, Wed, 27 November 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ