AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರ ಒಳಉಡುಪು ಧರಿಸಿ ನಡುರಸ್ತೆಯಲ್ಲೇ ರೀಲ್ಸ್​ ಮಾಡಲು ಹೊರಟ ಯುವಕನಿಗೆ ಬಿತ್ತು ಸ್ಥಳೀಯರಿಂದ ಧರ್ಮದೇಟು

ಹರಿಯಾಣದ ಪಾಣಿಪತ್‌ನಲ್ಲಿ ಕಿಕ್ಕಿರಿದ ಮಾರುಕಟ್ಟೆಯಲ್ಲಿ ಮಹಿಳೆಯರ ಒಳಉಡುಪು ಧರಿಸಿ ರೀಲ್ಸ್ ಮಾಡಲು ಯತ್ನಿಸಿದ ಯುವಕನನ್ನು ಸ್ಥಳೀಯರು ಥಳಿಸಿದ್ದಾರೆ. ಈ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಯುವಕನ ಅಶ್ಲೀಲ ಕೃತ್ಯದಿಂದ ಮಾರುಕಟ್ಟೆಯಲ್ಲಿದ್ದ ಮಹಿಳೆಯರಿಗೆ ಮುಜುಗರ ಉಂಟಾಗಿದ್ದು, ಸ್ಥಳೀಯ ಪುರುಷರೆಲ್ಲ ಸೇರಿ ಯುವಕನಿಗೆ ಧರ್ಮದೇಟು ನೀಡಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:Nov 27, 2024 | 11:46 AM

Share

ಹರಿಯಾಣ: ಕಿಕ್ಕಿರಿದ ಮಾರುಕಟ್ಟೆಯಲ್ಲಿ ಮಹಿಳೆಯರ ಒಳಉಡುಪು ಧರಿಸಿ ರೀಲ್ಸ್​​​ ಮಾಡಲು ಮುಂದಾಗಿದ್ದ ಯುವಕನಿಗೆ ಸ್ಥಳೀಯರು ಸೇರಿ ಮನಬಂದಂತೆ ಥಳಿಸಿರುವ ಘಟನೆ ಹರಿಯಾಣದ ಪಾಣಿಪತ್‌ನಲ್ಲಿ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ಯುವಕ ಮಹಿಳೆಯರ ಬ್ರಾ ಹಾಗೂ ಲಂಗ ಧರಿಸಿ ಆಶ್ಲೀಲವಾಗಿ ನೃತ್ಯ ಮಾಡಲು ಪ್ರಾರಂಭಿಸುತ್ತಿದ್ದಂತೆ ಕೋಪಗೊಂಡ ಸ್ಥಳೀಯ ಮಾರಾಟಗಾರರು ಯುವಕನನ್ನು ಹಿಡಿದು ಥಳಿಸಿದ್ದಾರೆ.

ಈ ಘಟನೆಯು ಪಾಣಿಪತ್‌ನ ಇನ್ಸಾರ್ ಮಾರ್ಕೆಟ್‌ನಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ಕಿಕ್ಕಿರಿದು ತುಂಬಿದ್ದ ಮಾರುಕಟ್ಟೆಯ ಮಧ್ಯದಲ್ಲಿ ಈತನ ಅಶ್ಲೀಲ ಕೃತ್ಯದಿಂದ ಮಾರುಕಟ್ಟೆಯಲ್ಲಿದ್ದ ಮಹಿಳೆಯರಿಗೆ ಮುಜುಗರ ಉಂಟಾಗಿದ್ದು, ಸ್ಥಳೀಯ ಪುರುಷರೆಲ್ಲ ಸೇರಿ ಧರ್ಮದೇಟು ನೀಡಿದ್ದಾರೆ.

ಇದನ್ನೂ ಓದಿ: 13 ಅಡಿಯ ಬೃಹತ್ ಮೊಸಳೆಯನ್ನು ತನ್ನ ಭುಜದ ಮೇಲೆ ಹೊತ್ತು ಸಾಗಿದ ವ್ಯಕ್ತಿ

ಮಾರುಕಟ್ಟೆಯಲ್ಲಿ ಇರುವ ಜನಸಮೂಹದ ಮುಂದೆ ಯುವಕ ಸ್ತ್ರೀಯರ ಒಳ ಉಡುಪನ್ನು ಮಾತ್ರ ಧರಿಸಿ ಅರೆಬೆತ್ತಲೆಯಾಗಿದ್ದು, ಸ್ಥಳೀಯ ಮಾರಾಟಗಾರರು ಯುವಕನಿಗೆ ಚಪ್ಪಲಿಯಿಂದ ಥಳಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಯುವಕ ಅಂಗಡಿಯವರಲ್ಲಿ ಕ್ಷಮೆಯಾಚಿಸಿ ತನ್ನನ್ನು ಬಿಟ್ಟುಬಿಡುವಂತೆ ಮನವಿ ಮಾಡುವುದನ್ನು ಸಹ ಕಾಣಬಹುದು. ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಪೊಲೀಸ್ ದೂರು ವರದಿಯಾಗಿಲ್ಲ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:45 am, Wed, 27 November 24

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ