AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಹೆಡ್ ಕಾನ್ ಸ್ಟೇಬಲ್ ಸಾವು

ಬೀಳ್ಕೊಡುಗೆ ಸಮಾರಂಭದಲ್ಲಿ ಹೆಡ್‌ಕಾನ್ಸ್‌ಟೇಬಲ್‌ ರವಿಕುಮಾರ್‌ ಎಲ್ಲರೊಂದಿಗೆ ಸಂತೋಷದಿಂದ ಡ್ಯಾನ್ಸ್ ಮಾಡುತ್ತಿದ್ದಾಗಲೇ ಇದ್ದಕ್ಕಿದ್ದಂತೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಸಹ ಸಿಬ್ಬಂದಿಗಳು ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಆದರೆ ಅದಾಗಲೇ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

Viral Video: ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಹೆಡ್ ಕಾನ್ ಸ್ಟೇಬಲ್ ಸಾವು
ಅಕ್ಷತಾ ವರ್ಕಾಡಿ
|

Updated on: Aug 30, 2024 | 3:10 PM

Share

ದೆಹಲಿ: ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಹೆಡ್ ಕಾನ್ ಸ್ಟೇಬಲ್ ಸಾವನ್ನಪ್ಪಿರುವ ಘಟನೆ ಉತ್ತರ ದೆಹಲಿಯ ರೂಪನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಸಾವಿಗೂ ಕೆಲ ನಿಮಿಷಗಳ ಮುನ್ನ ಎಲ್ಲರೊಂದಿಗೆ ಕಾನ್‌ಸ್ಟೆಬಲ್ ಡ್ಯಾನ್ಸ್ ಮಾಡಿದ್ದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ದೆಹಲಿಯ ರೂಪನಗರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿ ಕೆಲಸ ಮಾಡುತ್ತಿರುವ ರವಿಕುಮಾರ್ ಅವರು ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ವರ್ಗಾವಣೆಯಾಗುತ್ತಿದ್ದಂತೆ ಬೀಳ್ಕೊಡುಗೆ ಪಾರ್ಟಿ ಆಯೋಜಿಸಿದ್ದರು. ಪೊಲೀಸ್ ಠಾಣೆಯಲ್ಲಿ ಬುಧವಾರ ರಾತ್ರಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಹೆಡ್‌ಕಾನ್ಸ್‌ಟೇಬಲ್‌ ರವಿಕುಮಾರ್‌ ಎಲ್ಲರೊಂದಿಗೆ ಕುಣಿದು ಕುಪ್ಪಳಿಸಿದ್ದರು. ಆದರೆ ಡ್ಯಾನ್ಸ್ ಮಾಡುತ್ತಿದ್ದಾಗಲೇ ಇದ್ದಕ್ಕಿದ್ದಂತೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಸಹ ಸಿಬ್ಬಂದಿಗಳು ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ತಪಾಸಣೆ ನಡೆಸಿದ ವೈದ್ಯರು ರವಿಕುಮಾರ್ ಅದಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ರೈಲು ಬರುವ ವೇಳೆ ಹಳಿ ದಾಟಿದ ಮಹಿಳೆ; ಪ್ರಾಣ ಪಣಕಿಟ್ಟು ಕಾಪಾಡಿದ ಆರ್‌ಪಿಎಫ್ ಸಿಬ್ಬಂದಿ

ಉತ್ತರ ಪ್ರದೇಶದ ಬಾಗ್‌ಪತ್‌ ಮೂಲದ ರವಿಕುಮಾರ್‌ 2010ರಲ್ಲಿ ಪೊಲೀಸ್​ ಆಗಿ ನೇಮಕಗೊಂಡಿದ್ದರು. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಹೆಡ್ ಕಾನ್‌ಸ್ಟೆಬಲ್ ರವಿಕುಮಾರ್ ಈಗಾಗಲೇ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಅವರು 45 ದಿನಗಳ ಹಿಂದೆ ಆಂಜಿಯೋಗ್ರಫಿಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು