AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾಯಿಮರಿಯನ್ನು ಕೊಂಡಾಟ ಮಾಡಿದ ಯುವತಿ; ಆರೋಗ್ಯಕರ ಸಂಭಾಷಣೆ ನೋಡಿ ಮನಸೋತ ನೆಟ್ಟಿಗರು

ಮುದ್ದಾದ ನಾಯಿಮರಿಯೊಂದಿಗೆ ಯುವತಿಯೊಬ್ಬಳು ನಡೆಸಿದ ಆರೋಗ್ಯಕರ ಸಂಭಾಷಣೆಯ ವಿಡಿಯೋ ನೆಟ್ಟಿಗರ ಮನಗೆದ್ದಿದ್ದು, 2 ಲಕ್ಷಕ್ಕೂ ಹೆಚ್ಚು ಲೈಕ್​ಗಳನ್ನು ಪಡೆದುಕೊಂಡಿದೆ.

Viral Video: ನಾಯಿಮರಿಯನ್ನು ಕೊಂಡಾಟ ಮಾಡಿದ ಯುವತಿ; ಆರೋಗ್ಯಕರ ಸಂಭಾಷಣೆ ನೋಡಿ ಮನಸೋತ ನೆಟ್ಟಿಗರು
ನಾಯಿ ಮರಿ ಮತ್ತು ಯುವತಿಯ ಮುದ್ದಾದ ಸಂಭಾಷಣೆ
TV9 Web
| Edited By: |

Updated on:Oct 17, 2022 | 11:03 AM

Share

ಪುಟ್ಟ ಪ್ರಾಣಿಗಳು ಮತ್ತು ಮನುಷ್ಯರ ನಡುವಿನ ಸಂವಹನವು ಯಾವಾಗಲೂ ನೋಡಲು ಆರೋಗ್ಯಕರವಾಗಿರುತ್ತದೆ. ಒಂದೊಮ್ಮೆ ಪ್ರಾಣಿಗಳಿಗೆ ಪ್ರೀತಿ ನೀಡಿದರೆ ಅವುಗಳು ಮನುಷ್ಯರನ್ನು ತುಂಬಾ ಹಚ್ಚಿಕೊಂಡು ಬಿಡುತ್ತವೆ. ಇಂತಹ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರನ್ನು ಹೆಚ್ಚು ಆಕರ್ಷಿಸುತ್ತದೆ. ಇದೇ ಕಾರಣಕ್ಕೆ ಸಣ್ಣ ನಾಯಿಮರಿಯೊಂದು ಇಂಟರ್ನೆಟ್​ನಲ್ಲಿ ವೈರಲ್ ಆಗುತ್ತಿದೆ. ಮುದ್ದಾದ ನಾಯಿಮರಿ ಜೊತೆ ಯುವತಿಯೊಬ್ಬಳು ಆರೋಗ್ಯಯುತವಾದ ಸಂಭಾಷಣೆ ನಡೆಸುವುದನ್ನು ತೋರಿಸುವ ವಿಡಿಯೋ ಇದಾಗಿದೆ.

ಸಾಮಾನ್ಯವಾಗಿ ಹೆಚ್ಚಿನ ಯುವತಿಯರಿಗೆ ನಾಯಿಗಳೆಂದರೆ ಇಷ್ಟ. ಈ ಸಮೂಹಕ್ಕೆ ಸೇರಿದವರು ನಾಯಿಮರಿ ಎಲ್ಲಿ ಕಂಡರೂ ಮುದ್ದಾಡುತ್ತಾರೆ. ವಿಡಿಯೋದಲ್ಲಿ ಕಾಣುವಂತೆ, ಸ್ಥಳೀಯ ಉಪಾಹಾರ ಗೃಹದ ಹೊರಗೆ ಯುವತಿ ಕುಳಿತಿದ್ದಾಗ ನಾಯಿಮರಿ ಆಕೆಯ ಬಳಿ ಬರುತ್ತದೆ. ಈ ವೇಳೆ ಯುವತಿ ನಾಯಿಮರಿಯೊಂದಿಗೆ ಮಾತನಾಡಲು ಆರಂಭಿಸುತ್ತಾಳೆ. ಸ್ವಲ್ಪದರಲ್ಲೇ ನಾಯಿಮರಿಯು ಆಕೆಗೆ ಶೇಕ್ ಹ್ಯಾಂಡ್ ಮಾಡಲು ಮುಂದಾಗುತ್ತದೆ. ಈ ವೇಳೆ ಯುವತಿಯೂ ಆ ಮರಿಯ ಕೈಯನ್ನು ಹಿಡಿಯುತ್ತಾಳೆ. ನಂತರ ಮರಿಯ ತಲೆ ಸವರುತ್ತಾಳೆ.

ಅನುರಾಗ್ ಪಾಟೀಲ್ ಎಂಬವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, “ಈ ರೀತಿಯ ಸಂಭಾಷಣೆಗಳು ತುಂಬಾ ಆರೋಗ್ಯಕರವಾಗಿವೆ” ಎಂದು ಶೀರ್ಷಿಕೆ ಬರೆದಿದ್ದಾರೆ. ಸೆಪ್ಟೆಂಬರ್ 28 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಈಗಾಗಲೇ 2.7 ಲಕ್ಷಕ್ಕೂ ಹೆಚ್ಚು ಲೈಕ್‌ಗಳನ್ನು ಪಡೆದುಕೊಂಡಿದೆ. ಮರಿ ಮತ್ತು ಯುವತಿಯ ನಡುವಿನ ಸಂಭಾಷಣೆ ನೋಡಿದ ನೆಟ್ಟಿಗರೊಬ್ಬರು ಕಾಮೆಂಟ್ ಮಾಡಿ ಅದನ್ನು ಮನೆಗೆ ಕೊಂಡೊಯ್ಯುವಂತೆ ಹೇಳಿದ್ದಾರೆ.

View this post on Instagram

A post shared by Anurag (@anurag_patil27)

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 11:03 am, Mon, 17 October 22

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ