AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾಯಿಮರಿಯನ್ನು ಕೊಂಡಾಟ ಮಾಡಿದ ಯುವತಿ; ಆರೋಗ್ಯಕರ ಸಂಭಾಷಣೆ ನೋಡಿ ಮನಸೋತ ನೆಟ್ಟಿಗರು

ಮುದ್ದಾದ ನಾಯಿಮರಿಯೊಂದಿಗೆ ಯುವತಿಯೊಬ್ಬಳು ನಡೆಸಿದ ಆರೋಗ್ಯಕರ ಸಂಭಾಷಣೆಯ ವಿಡಿಯೋ ನೆಟ್ಟಿಗರ ಮನಗೆದ್ದಿದ್ದು, 2 ಲಕ್ಷಕ್ಕೂ ಹೆಚ್ಚು ಲೈಕ್​ಗಳನ್ನು ಪಡೆದುಕೊಂಡಿದೆ.

Viral Video: ನಾಯಿಮರಿಯನ್ನು ಕೊಂಡಾಟ ಮಾಡಿದ ಯುವತಿ; ಆರೋಗ್ಯಕರ ಸಂಭಾಷಣೆ ನೋಡಿ ಮನಸೋತ ನೆಟ್ಟಿಗರು
ನಾಯಿ ಮರಿ ಮತ್ತು ಯುವತಿಯ ಮುದ್ದಾದ ಸಂಭಾಷಣೆ
TV9 Web
| Edited By: |

Updated on:Oct 17, 2022 | 11:03 AM

Share

ಪುಟ್ಟ ಪ್ರಾಣಿಗಳು ಮತ್ತು ಮನುಷ್ಯರ ನಡುವಿನ ಸಂವಹನವು ಯಾವಾಗಲೂ ನೋಡಲು ಆರೋಗ್ಯಕರವಾಗಿರುತ್ತದೆ. ಒಂದೊಮ್ಮೆ ಪ್ರಾಣಿಗಳಿಗೆ ಪ್ರೀತಿ ನೀಡಿದರೆ ಅವುಗಳು ಮನುಷ್ಯರನ್ನು ತುಂಬಾ ಹಚ್ಚಿಕೊಂಡು ಬಿಡುತ್ತವೆ. ಇಂತಹ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರನ್ನು ಹೆಚ್ಚು ಆಕರ್ಷಿಸುತ್ತದೆ. ಇದೇ ಕಾರಣಕ್ಕೆ ಸಣ್ಣ ನಾಯಿಮರಿಯೊಂದು ಇಂಟರ್ನೆಟ್​ನಲ್ಲಿ ವೈರಲ್ ಆಗುತ್ತಿದೆ. ಮುದ್ದಾದ ನಾಯಿಮರಿ ಜೊತೆ ಯುವತಿಯೊಬ್ಬಳು ಆರೋಗ್ಯಯುತವಾದ ಸಂಭಾಷಣೆ ನಡೆಸುವುದನ್ನು ತೋರಿಸುವ ವಿಡಿಯೋ ಇದಾಗಿದೆ.

ಸಾಮಾನ್ಯವಾಗಿ ಹೆಚ್ಚಿನ ಯುವತಿಯರಿಗೆ ನಾಯಿಗಳೆಂದರೆ ಇಷ್ಟ. ಈ ಸಮೂಹಕ್ಕೆ ಸೇರಿದವರು ನಾಯಿಮರಿ ಎಲ್ಲಿ ಕಂಡರೂ ಮುದ್ದಾಡುತ್ತಾರೆ. ವಿಡಿಯೋದಲ್ಲಿ ಕಾಣುವಂತೆ, ಸ್ಥಳೀಯ ಉಪಾಹಾರ ಗೃಹದ ಹೊರಗೆ ಯುವತಿ ಕುಳಿತಿದ್ದಾಗ ನಾಯಿಮರಿ ಆಕೆಯ ಬಳಿ ಬರುತ್ತದೆ. ಈ ವೇಳೆ ಯುವತಿ ನಾಯಿಮರಿಯೊಂದಿಗೆ ಮಾತನಾಡಲು ಆರಂಭಿಸುತ್ತಾಳೆ. ಸ್ವಲ್ಪದರಲ್ಲೇ ನಾಯಿಮರಿಯು ಆಕೆಗೆ ಶೇಕ್ ಹ್ಯಾಂಡ್ ಮಾಡಲು ಮುಂದಾಗುತ್ತದೆ. ಈ ವೇಳೆ ಯುವತಿಯೂ ಆ ಮರಿಯ ಕೈಯನ್ನು ಹಿಡಿಯುತ್ತಾಳೆ. ನಂತರ ಮರಿಯ ತಲೆ ಸವರುತ್ತಾಳೆ.

ಅನುರಾಗ್ ಪಾಟೀಲ್ ಎಂಬವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, “ಈ ರೀತಿಯ ಸಂಭಾಷಣೆಗಳು ತುಂಬಾ ಆರೋಗ್ಯಕರವಾಗಿವೆ” ಎಂದು ಶೀರ್ಷಿಕೆ ಬರೆದಿದ್ದಾರೆ. ಸೆಪ್ಟೆಂಬರ್ 28 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಈಗಾಗಲೇ 2.7 ಲಕ್ಷಕ್ಕೂ ಹೆಚ್ಚು ಲೈಕ್‌ಗಳನ್ನು ಪಡೆದುಕೊಂಡಿದೆ. ಮರಿ ಮತ್ತು ಯುವತಿಯ ನಡುವಿನ ಸಂಭಾಷಣೆ ನೋಡಿದ ನೆಟ್ಟಿಗರೊಬ್ಬರು ಕಾಮೆಂಟ್ ಮಾಡಿ ಅದನ್ನು ಮನೆಗೆ ಕೊಂಡೊಯ್ಯುವಂತೆ ಹೇಳಿದ್ದಾರೆ.

View this post on Instagram

A post shared by Anurag (@anurag_patil27)

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 11:03 am, Mon, 17 October 22

Follow Us
‘ಕತ್ತರಿಗುಪ್ಪೆಯಲ್ಲಿ ನಾನು ಚುನಾವಣೆಗೆ ನಿಲ್ಲಬಹುದು’: ಉಪೇಂದ್ರ
‘ಕತ್ತರಿಗುಪ್ಪೆಯಲ್ಲಿ ನಾನು ಚುನಾವಣೆಗೆ ನಿಲ್ಲಬಹುದು’: ಉಪೇಂದ್ರ
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?