Viral Video: ನಾಯಿಮರಿಯನ್ನು ಕೊಂಡಾಟ ಮಾಡಿದ ಯುವತಿ; ಆರೋಗ್ಯಕರ ಸಂಭಾಷಣೆ ನೋಡಿ ಮನಸೋತ ನೆಟ್ಟಿಗರು

ಮುದ್ದಾದ ನಾಯಿಮರಿಯೊಂದಿಗೆ ಯುವತಿಯೊಬ್ಬಳು ನಡೆಸಿದ ಆರೋಗ್ಯಕರ ಸಂಭಾಷಣೆಯ ವಿಡಿಯೋ ನೆಟ್ಟಿಗರ ಮನಗೆದ್ದಿದ್ದು, 2 ಲಕ್ಷಕ್ಕೂ ಹೆಚ್ಚು ಲೈಕ್​ಗಳನ್ನು ಪಡೆದುಕೊಂಡಿದೆ.

Viral Video: ನಾಯಿಮರಿಯನ್ನು ಕೊಂಡಾಟ ಮಾಡಿದ ಯುವತಿ; ಆರೋಗ್ಯಕರ ಸಂಭಾಷಣೆ ನೋಡಿ ಮನಸೋತ ನೆಟ್ಟಿಗರು
ನಾಯಿ ಮರಿ ಮತ್ತು ಯುವತಿಯ ಮುದ್ದಾದ ಸಂಭಾಷಣೆ
Follow us
| Updated By: Rakesh Nayak Manchi

Updated on:Oct 17, 2022 | 11:03 AM

ಪುಟ್ಟ ಪ್ರಾಣಿಗಳು ಮತ್ತು ಮನುಷ್ಯರ ನಡುವಿನ ಸಂವಹನವು ಯಾವಾಗಲೂ ನೋಡಲು ಆರೋಗ್ಯಕರವಾಗಿರುತ್ತದೆ. ಒಂದೊಮ್ಮೆ ಪ್ರಾಣಿಗಳಿಗೆ ಪ್ರೀತಿ ನೀಡಿದರೆ ಅವುಗಳು ಮನುಷ್ಯರನ್ನು ತುಂಬಾ ಹಚ್ಚಿಕೊಂಡು ಬಿಡುತ್ತವೆ. ಇಂತಹ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರನ್ನು ಹೆಚ್ಚು ಆಕರ್ಷಿಸುತ್ತದೆ. ಇದೇ ಕಾರಣಕ್ಕೆ ಸಣ್ಣ ನಾಯಿಮರಿಯೊಂದು ಇಂಟರ್ನೆಟ್​ನಲ್ಲಿ ವೈರಲ್ ಆಗುತ್ತಿದೆ. ಮುದ್ದಾದ ನಾಯಿಮರಿ ಜೊತೆ ಯುವತಿಯೊಬ್ಬಳು ಆರೋಗ್ಯಯುತವಾದ ಸಂಭಾಷಣೆ ನಡೆಸುವುದನ್ನು ತೋರಿಸುವ ವಿಡಿಯೋ ಇದಾಗಿದೆ.

ಸಾಮಾನ್ಯವಾಗಿ ಹೆಚ್ಚಿನ ಯುವತಿಯರಿಗೆ ನಾಯಿಗಳೆಂದರೆ ಇಷ್ಟ. ಈ ಸಮೂಹಕ್ಕೆ ಸೇರಿದವರು ನಾಯಿಮರಿ ಎಲ್ಲಿ ಕಂಡರೂ ಮುದ್ದಾಡುತ್ತಾರೆ. ವಿಡಿಯೋದಲ್ಲಿ ಕಾಣುವಂತೆ, ಸ್ಥಳೀಯ ಉಪಾಹಾರ ಗೃಹದ ಹೊರಗೆ ಯುವತಿ ಕುಳಿತಿದ್ದಾಗ ನಾಯಿಮರಿ ಆಕೆಯ ಬಳಿ ಬರುತ್ತದೆ. ಈ ವೇಳೆ ಯುವತಿ ನಾಯಿಮರಿಯೊಂದಿಗೆ ಮಾತನಾಡಲು ಆರಂಭಿಸುತ್ತಾಳೆ. ಸ್ವಲ್ಪದರಲ್ಲೇ ನಾಯಿಮರಿಯು ಆಕೆಗೆ ಶೇಕ್ ಹ್ಯಾಂಡ್ ಮಾಡಲು ಮುಂದಾಗುತ್ತದೆ. ಈ ವೇಳೆ ಯುವತಿಯೂ ಆ ಮರಿಯ ಕೈಯನ್ನು ಹಿಡಿಯುತ್ತಾಳೆ. ನಂತರ ಮರಿಯ ತಲೆ ಸವರುತ್ತಾಳೆ.

ಅನುರಾಗ್ ಪಾಟೀಲ್ ಎಂಬವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, “ಈ ರೀತಿಯ ಸಂಭಾಷಣೆಗಳು ತುಂಬಾ ಆರೋಗ್ಯಕರವಾಗಿವೆ” ಎಂದು ಶೀರ್ಷಿಕೆ ಬರೆದಿದ್ದಾರೆ. ಸೆಪ್ಟೆಂಬರ್ 28 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಈಗಾಗಲೇ 2.7 ಲಕ್ಷಕ್ಕೂ ಹೆಚ್ಚು ಲೈಕ್‌ಗಳನ್ನು ಪಡೆದುಕೊಂಡಿದೆ. ಮರಿ ಮತ್ತು ಯುವತಿಯ ನಡುವಿನ ಸಂಭಾಷಣೆ ನೋಡಿದ ನೆಟ್ಟಿಗರೊಬ್ಬರು ಕಾಮೆಂಟ್ ಮಾಡಿ ಅದನ್ನು ಮನೆಗೆ ಕೊಂಡೊಯ್ಯುವಂತೆ ಹೇಳಿದ್ದಾರೆ.

View this post on Instagram

A post shared by Anurag (@anurag_patil27)

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 11:03 am, Mon, 17 October 22

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು