AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಳೆಯಿಂದ ಹೈದರಾಬಾದ್ ಜಲಾವೃತ, ರಸ್ತೆಯಲ್ಲಿ ಕೊಚ್ಚಿ ಹೋದ ಬಿರಿಯಾನಿ ಪಾತ್ರೆ

ಹೈದರಾಬಾದ್​ನಲ್ಲಿ ಶುಕ್ರವಾರದಂದು ಸುರಿದ ಧಾರಾಕಾರ ಮಳೆಗೆ ಪ್ರವಾಹದಂತೆ ರಸ್ತೆಯಲ್ಲಿ ನೀರು ಕೊಚ್ಚಿ ಹೋಗಿದೆ. ವಿಶೇಷವೆಂದರೆ, ರಸ್ತೆಯಲ್ಲಿ ಹರಿದು ಹೋಗುತ್ತಿದ್ದ ನೀರಿನಲ್ಲಿ ಬಿರಿಯಾನಿ ಪಾತ್ರೆಯೇ ಕೊಚ್ಚಿಹೋಗಿದೆ.

Viral Video: ಮಳೆಯಿಂದ ಹೈದರಾಬಾದ್ ಜಲಾವೃತ, ರಸ್ತೆಯಲ್ಲಿ ಕೊಚ್ಚಿ ಹೋದ ಬಿರಿಯಾನಿ ಪಾತ್ರೆ
ಮಳೆ ನೀರಿನಲ್ಲಿ ಕೊಚ್ಚಿ ಹೋದ ಬಿರಿಯಾನಿ ಪಾತ್ರೆ
TV9 Web
| Edited By: |

Updated on:Jul 31, 2022 | 1:58 PM

Share

ವೈರಲ್ ವಿಡಿಯೋ: ತೆಲಂಗಾಣದಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯ ರಾಜಧಾನಿ ಹೈದರಾಬಾದ್​ನಲ್ಲಿ ಶುಕ್ರವಾರದಂದು ಸುರಿದ ಧಾರಾಕಾರ ಮಳೆಗೆ ಪ್ರವಾಹದಂತೆ ರಸ್ತೆಯಲ್ಲಿ ನೀರು ಕೊಚ್ಚಿ ಹೋಗಿದೆ. ವಿಶೇಷವೆಂದರೆ, ರಸ್ತೆಯಲ್ಲಿ ಹರಿದು ಹೋಗುತ್ತಿದ್ದ ನೀರಿನಲ್ಲಿ ಬಿರಿಯಾನಿ ಪಾತ್ರೆಯೇ ಕೊಚ್ಚಿಹೋಗಿದೆ ಮಾರಾಯ್ರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ (Video Viral) ಆಗುತ್ತಿದೆ. ಹೈದರಾಬಾದ್​ನ ಓಲ್ಡ್ ಸಿಟಿಯಲ್ಲಿ ಈ ದೃಶ್ಯಾವಳಿಯನ್ನು ಸೆರೆಹಿಡಿಯಲಾಗಿದೆ.

ವೀಡಿಯೊವನ್ನು Ibn Crowley ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಯಾರೋ ಬಿರಿಯಾನಿ ಆರ್ಡರ್ ಸಿಗದೆ ಅತೃಪ್ತರಾಗಿದ್ದಾರೆ” ಎಂದು ಶೀರ್ಷಿಕೆ ಬರೆದು ಹೈದರಾಬಾದ್ ಮತ್ತು ಹೈದರಾಬಾದ್ ಮಳೆಯನ್ನು ಹ್ಯಾಷ್ಟ್ಯಾಗ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಪಡೆದು 7.26 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಸಂಗ್ರಹಿಸಿದೆ. ರೆಸ್ಟೋರೆಂಟ್‌ನಿಂದ ಬಿರಿಯಾನಿ ಪಾತ್ರೆಗಳು ಕೊಚ್ಚಿಕೊಂಡು ಹೋಗುತ್ತಿರುವ ವಿಡಿಯೋವನ್ನು ನೋಡಿದ ನೆಟ್ಟಿಗರು “ಇತ್ತೀಚಿನ ಮತ್ತು ವೇಗದ ಮನೆ ವಿತರಣೆ!” ಎಂದು ಲೇವಡಿ ಮಾಡಿದ್ದಾರೆ. ಇನ್ನೊಬ್ಬರು ಪ್ರತಿಕ್ರಿಯಿಸಿ, “ತೇಲುವ ಬಿರಿಯಾನಿ” ಎಂದು ಹೇಳಿಕೊಂಡಿದ್ದಾರೆ.

ಶುಕ್ರವಾರ ಸುರಿದ ಭಾರೀ ಮಳೆಗೆ ಹೈದರಾಬಾದ್​ನ ಹಲವೆಡೆ ಪ್ರವಾಹದಂತೆ ನೀರು ರಸ್ತೆಯಲ್ಲಿ ಹರಿದುಹೋಗಿದ್ದು, ಹಲವು  ಅಂಗಡಿಗಳಿಗೆ ನೀರು ನುಗ್ಗಿದೆ. ಅದರಂತೆ ನವಾಬ್ ಸಾಹೇಬ್ ಕುಂಟಾದಲ್ಲಿರುವ ಶಾಸ್ತ್ರಿಪುರಂ ಮುಖ್ಯ ರಸ್ತೆಯಲ್ಲಿರುವ ಅದಿಬಾ ಹೋಟೆಲ್‌ಗೆ ನೀರು ನುಗ್ಗಿದ್ದು, ಅಲ್ಲಿದ್ದ ಮಾತ್ರೆಗಳು ಕೊಚ್ಚಿಕೊಂಡು ಹೋಗಿವೆ.ಎಂದು ವೈರಲ್  ವಿಡಿಯೋ ಅಡಿಯಲ್ಲಿ ಟ್ವಿಟರ್ ಬಳಕೆದಾರರು ಕಾಮೆಂಟ್ ಮಾಡಿದ್ದಾರೆ.

ಈ ಬಾರಿಯ ಮಾನ್ಸೂನ್ ಮಳೆಯ ಅಬ್ಬರಕ್ಕೆ ವಿವಿಧ ರಾಜ್ಯಗಳಲ್ಲಿ ಪ್ರವಾಹಗಳು ತಲೆದೋರಿತ್ತು. ಸದ್ಯ ಮಳೆಯ ಅಬ್ಬರವಾಗಿದ್ದರೂ ಆ ಸಮಯದಲ್ಲಿ ರಸ್ತೆಗಳಿಗೆ ಮೀನು ಬಂದಿರುವ, ಮೀನಿನ ಮಳೆಯಾಗಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಮೀನಿನ ಮಳೆಯನ್ನು ನೋಡಿದ ಜನರು ಮತ್ತು ನೆಟ್ಟಿಗರು ಅಚ್ಚರಿಗೊಂಡಿದ್ದರು.

Published On - 1:58 pm, Sun, 31 July 22

Follow Us
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!