AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಳೆಯಿಂದ ಹೈದರಾಬಾದ್ ಜಲಾವೃತ, ರಸ್ತೆಯಲ್ಲಿ ಕೊಚ್ಚಿ ಹೋದ ಬಿರಿಯಾನಿ ಪಾತ್ರೆ

ಹೈದರಾಬಾದ್​ನಲ್ಲಿ ಶುಕ್ರವಾರದಂದು ಸುರಿದ ಧಾರಾಕಾರ ಮಳೆಗೆ ಪ್ರವಾಹದಂತೆ ರಸ್ತೆಯಲ್ಲಿ ನೀರು ಕೊಚ್ಚಿ ಹೋಗಿದೆ. ವಿಶೇಷವೆಂದರೆ, ರಸ್ತೆಯಲ್ಲಿ ಹರಿದು ಹೋಗುತ್ತಿದ್ದ ನೀರಿನಲ್ಲಿ ಬಿರಿಯಾನಿ ಪಾತ್ರೆಯೇ ಕೊಚ್ಚಿಹೋಗಿದೆ.

Viral Video: ಮಳೆಯಿಂದ ಹೈದರಾಬಾದ್ ಜಲಾವೃತ, ರಸ್ತೆಯಲ್ಲಿ ಕೊಚ್ಚಿ ಹೋದ ಬಿರಿಯಾನಿ ಪಾತ್ರೆ
ಮಳೆ ನೀರಿನಲ್ಲಿ ಕೊಚ್ಚಿ ಹೋದ ಬಿರಿಯಾನಿ ಪಾತ್ರೆ
TV9 Web
| Updated By: Rakesh Nayak Manchi|

Updated on:Jul 31, 2022 | 1:58 PM

Share

ವೈರಲ್ ವಿಡಿಯೋ: ತೆಲಂಗಾಣದಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯ ರಾಜಧಾನಿ ಹೈದರಾಬಾದ್​ನಲ್ಲಿ ಶುಕ್ರವಾರದಂದು ಸುರಿದ ಧಾರಾಕಾರ ಮಳೆಗೆ ಪ್ರವಾಹದಂತೆ ರಸ್ತೆಯಲ್ಲಿ ನೀರು ಕೊಚ್ಚಿ ಹೋಗಿದೆ. ವಿಶೇಷವೆಂದರೆ, ರಸ್ತೆಯಲ್ಲಿ ಹರಿದು ಹೋಗುತ್ತಿದ್ದ ನೀರಿನಲ್ಲಿ ಬಿರಿಯಾನಿ ಪಾತ್ರೆಯೇ ಕೊಚ್ಚಿಹೋಗಿದೆ ಮಾರಾಯ್ರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ (Video Viral) ಆಗುತ್ತಿದೆ. ಹೈದರಾಬಾದ್​ನ ಓಲ್ಡ್ ಸಿಟಿಯಲ್ಲಿ ಈ ದೃಶ್ಯಾವಳಿಯನ್ನು ಸೆರೆಹಿಡಿಯಲಾಗಿದೆ.

ವೀಡಿಯೊವನ್ನು Ibn Crowley ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಯಾರೋ ಬಿರಿಯಾನಿ ಆರ್ಡರ್ ಸಿಗದೆ ಅತೃಪ್ತರಾಗಿದ್ದಾರೆ” ಎಂದು ಶೀರ್ಷಿಕೆ ಬರೆದು ಹೈದರಾಬಾದ್ ಮತ್ತು ಹೈದರಾಬಾದ್ ಮಳೆಯನ್ನು ಹ್ಯಾಷ್ಟ್ಯಾಗ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಪಡೆದು 7.26 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಸಂಗ್ರಹಿಸಿದೆ. ರೆಸ್ಟೋರೆಂಟ್‌ನಿಂದ ಬಿರಿಯಾನಿ ಪಾತ್ರೆಗಳು ಕೊಚ್ಚಿಕೊಂಡು ಹೋಗುತ್ತಿರುವ ವಿಡಿಯೋವನ್ನು ನೋಡಿದ ನೆಟ್ಟಿಗರು “ಇತ್ತೀಚಿನ ಮತ್ತು ವೇಗದ ಮನೆ ವಿತರಣೆ!” ಎಂದು ಲೇವಡಿ ಮಾಡಿದ್ದಾರೆ. ಇನ್ನೊಬ್ಬರು ಪ್ರತಿಕ್ರಿಯಿಸಿ, “ತೇಲುವ ಬಿರಿಯಾನಿ” ಎಂದು ಹೇಳಿಕೊಂಡಿದ್ದಾರೆ.

ಶುಕ್ರವಾರ ಸುರಿದ ಭಾರೀ ಮಳೆಗೆ ಹೈದರಾಬಾದ್​ನ ಹಲವೆಡೆ ಪ್ರವಾಹದಂತೆ ನೀರು ರಸ್ತೆಯಲ್ಲಿ ಹರಿದುಹೋಗಿದ್ದು, ಹಲವು  ಅಂಗಡಿಗಳಿಗೆ ನೀರು ನುಗ್ಗಿದೆ. ಅದರಂತೆ ನವಾಬ್ ಸಾಹೇಬ್ ಕುಂಟಾದಲ್ಲಿರುವ ಶಾಸ್ತ್ರಿಪುರಂ ಮುಖ್ಯ ರಸ್ತೆಯಲ್ಲಿರುವ ಅದಿಬಾ ಹೋಟೆಲ್‌ಗೆ ನೀರು ನುಗ್ಗಿದ್ದು, ಅಲ್ಲಿದ್ದ ಮಾತ್ರೆಗಳು ಕೊಚ್ಚಿಕೊಂಡು ಹೋಗಿವೆ.ಎಂದು ವೈರಲ್  ವಿಡಿಯೋ ಅಡಿಯಲ್ಲಿ ಟ್ವಿಟರ್ ಬಳಕೆದಾರರು ಕಾಮೆಂಟ್ ಮಾಡಿದ್ದಾರೆ.

ಈ ಬಾರಿಯ ಮಾನ್ಸೂನ್ ಮಳೆಯ ಅಬ್ಬರಕ್ಕೆ ವಿವಿಧ ರಾಜ್ಯಗಳಲ್ಲಿ ಪ್ರವಾಹಗಳು ತಲೆದೋರಿತ್ತು. ಸದ್ಯ ಮಳೆಯ ಅಬ್ಬರವಾಗಿದ್ದರೂ ಆ ಸಮಯದಲ್ಲಿ ರಸ್ತೆಗಳಿಗೆ ಮೀನು ಬಂದಿರುವ, ಮೀನಿನ ಮಳೆಯಾಗಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಮೀನಿನ ಮಳೆಯನ್ನು ನೋಡಿದ ಜನರು ಮತ್ತು ನೆಟ್ಟಿಗರು ಅಚ್ಚರಿಗೊಂಡಿದ್ದರು.

Published On - 1:58 pm, Sun, 31 July 22

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್