AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಪಘಾತ ತಪ್ಪಿಸಲು ಮುಂದಾದರೂ ನಡೆಯಿತು ಭೀಕರ ಅಪಘಾತ! ವಿಡಿಯೋ ಇಲ್ಲಿದೆ ನೋಡಿ

ಸಂಭವಿಸಬಹುದಾದ ಕಾರು ಅಪಘಾತವನ್ನು ತಪ್ಪಿಸಲು ಪ್ರಯತ್ನಿಸುವಾಗ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು. ಈ ಭೀಕರ ಅಪಘಾತದ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral Video: ಅಪಘಾತ ತಪ್ಪಿಸಲು ಮುಂದಾದರೂ ನಡೆಯಿತು ಭೀಕರ ಅಪಘಾತ! ವಿಡಿಯೋ ಇಲ್ಲಿದೆ ನೋಡಿ
ಕಾರು ಅಪಘಾತ
TV9 Web
| Edited By: |

Updated on: Jul 01, 2022 | 11:21 PM

Share

ವಾಹನ ಚಾಲನೆಯಲ್ಲಿದ್ದಾಗ ಅಡ್ಡದಾರಿಯಲ್ಲಿ ಇದ್ದಕ್ಕಿದ್ದಂತೆ ವಾಹನ ಬಂದು ಎದುರಾದಾಗ ಚಾಲಕರು ಕೈಕಾಲುಬಡಿಯುತ್ತಾರೆ. ಈ ವೇಳೆ ಅಪಘಾತಗಳು ನಡೆಯುವುದು ಹೆಚ್ಚು. ಇತ್ತೀಚೆಗೆ ಯುಎಸ್‌ನಲ್ಲಿ ಎಸ್‌ಯುವಿ ಕಾರು ಡ್ರೈವರ್‌ ಕೂಡ ಅನುಭಿವಿಸಿದ್ದು ಕೂಡ ಇದೇ ಪರಿಸ್ಥಿತಿ. ಸಂಭವಿಸಬಹುದಾದ ಕಾರು ಅಪಘಾತ(Car Accident) ವನ್ನು ತಪ್ಪಿಸಲು ಪ್ರಯತ್ನಿಸುವಾಗ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾರೆ. ಈ ಭೀಕರ ಅಪಘಾತದ ದೃಶ್ಯಾವಳಿ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ (Video Viral) ಆಗುತ್ತಿದೆ.

ಇದನ್ನೂ ಓದಿ: Viral Video: ಹುಲಿ ಮರಿಗಳಿಗೆ ಹಾಲು ಕುಡಿಸಿದ ಒರಾಂಗುಟಾನ್! ನೆಟ್ಟಿಗರ ಮನಸೂರೆಗೊಳಿಸುವ ವಿಡಿಯೋ ವೈರಲ್

ಬೂದು ಟೊಯೋಟಾ ಹೈಲ್ಯಾಂಡರ್ ಕಾರೊಂದು ರಸ್ತೆ ಮೂಲಕ ವೇಗವಾಗಿ ಹೋಗುತ್ತಿದ್ದಾಗ ಟಿ-ಬೋನ್ ಬಳಿ ಇದ್ದಕ್ಕಿದ್ದಂತೆ ಬಂದ ಮತ್ತೊಂದು ಕಾರು ಹೈಲ್ಯಾಂಡರ್ ಕಾರನ್ನು ನೋಡಿ ಕೂಡಲೇ ನಿಲ್ಲಿಸಿದೆ. ಅಷ್ಟರಲ್ಲಾಗಲೇ ಹೈಲ್ಯಾಂಡರ್ ಕಾರು ನಿಯಂತ್ರಣ ಕಳೆದುಕೊಂಡು ಬೀದಿ ದೀಪದ ಕಂಬ ಹಾಗೂ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬಗಳು ಮುರಿದಿದ್ದು, ವಿದ್ಯುತ್ ತಂತಿಗಳು ತುಂಡಾಗಿ ಬೆಂಕಿಯ ಕಿಡಿ ಕಾಣಿಸಿಕೊಂಡಿದೆ. ಒಂದಷ್ಟು ಸೆಕೆಂಡುಗಳ ನಂತರ ಆ ಕಾರಿನ ಒಳಗಿಂದ ಚಾಲಕ ಡೋರ್ ತೆಗೆಯಲು ಕಷ್ಟಪಡುತ್ತಿರುವುದನ್ನು ನೋಡಿದ ಜನರು ಚಾಲಕನ ನೆರವಿಗೆ ದಾವಿಸಿದ್ದಾರೆ. ಅದರಂತೆ ಚಾಲಕ ಸುರಕ್ಷಿತವಾಗಿ ಕಾರಿನಿಂದ ಕೆಳಗಿಳಿದಿದ್ದಾನೆ.

View this post on Instagram

A post shared by ABC News (@abcnews)

ABC7 ನ್ಯೂಸ್ ಪ್ರಕಾರ, ಅಪಘಾತದಿಂದಾಗಿ ಘಟನಾ ಪ್ರದೇಶದಲ್ಲಿ ವಿದ್ಯುತ್ ಸ್ಥಗಿತಕ್ಕೆ ಕಾರಣವಾಯಿತು. ಘಟನೆಯ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ. ವಿಡಿಯೋವನ್ನು ಹಂಚಿಕೊಂಡ ವ್ಯಕ್ತಿ ಸುದ್ದಿ ವಾಹಿನಿಗೆ “ಚಾಲಕನು ಪ್ರಾಣಾಪಾಯದಿಂದ ಪಾರಾಗಿದ್ದಾನೆ” ಎಂದು ಹೇಳಿದರು.

ಇದನ್ನೂ ಓದಿ:Viral Photo: 20 ರೂಪಾಯಿ ಚಹಾಕ್ಕೆ 70 ರೂಪಾಯಿ ಬಿಲ್ ನೋಡಿ ಪ್ರಯಾಣಿಕ ಶಾಕ್! ರೈಲಿನಲ್ಲಿ ಈ ವ್ಯವಸ್ಥೆ ಇದೆ ಗೊತ್ತಾ?

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?