AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪರ ಮಹಿಳೆಯೊಂದಿಗೆ ಪತಿಯ ಸರಸ ಸಲ್ಲಾಪ ನೋಡಿದ ಪತ್ನಿ; ಮುಂದೆ ಪತಿ ಪಾಡು ಹೇಳಬೇಕೇ?

ಮದುವೆಯಾದರೂ ಪರ ಮಹಿಳೆಯೊಂದಿಗೆ ಹೊಟೇಲ್​ನಲ್ಲಿ ಸರಸ ಸಲ್ಲಾಪದಲ್ಲಿ ತೊಡಗಿದ್ದ ತನ್ನ ಪತಿಯನ್ನು ನೋಡಿದ ಮಹಿಳೆ ಕಾಲಿನಲ್ಲಿದ್ದ ಚಪ್ಪಲಿ ಕೈಗೆತ್ತಿಕೊಂಡು ಹಿಗ್ಗಾಮುಗ್ಗ ಥಳಿಸಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

Viral Video: ಪರ ಮಹಿಳೆಯೊಂದಿಗೆ ಪತಿಯ ಸರಸ ಸಲ್ಲಾಪ ನೋಡಿದ ಪತ್ನಿ; ಮುಂದೆ ಪತಿ ಪಾಡು ಹೇಳಬೇಕೇ?
ಪರ ಮಹಿಳೆಯೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿದ್ದಾಗ ಪತ್ನಿ ಕೈಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತಿImage Credit source: ANI
TV9 Web
| Updated By: Rakesh Nayak Manchi|

Updated on:Sep 25, 2022 | 2:52 PM

Share

ಮದುವೆಯಾದರೂ ಪರ ಮಹಿಳೆಯೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿದ್ದಾಗ ವ್ಯಕ್ತಿಯೊಬ್ಬ ತನ್ನ ಪತ್ನಿಯ ಕೈಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಬೆಡ್​ರೂಮ್​ನಲ್ಲಿ ಮಹಿಳೆಯೊಂದಿಗೆ ಇದ್ದ ತನ್ನ ಪತಿಯನ್ನು ನೋಡಿದ ಮಹಿಳೆ ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಹಿತಿ ಪ್ರಕಾರ, ಉತ್ತರ ಪ್ರದೇಶದ ಆಗ್ರಾದ ಹೋಟೆಲ್​ವೊಂದರ ಕೊಠಡಿಯಲ್ಲಿ ತನ್ನ ಪತಿ ಇನ್ನೊಬ್ಬ ಮಹಿಳೆಯೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿದ್ದಾಗ ಮಹಿಳೆ ಇಬ್ಬರನ್ನು ಹಿಡಿದು ಶೂ ಚಪ್ಪಲಿಗಳಿಂದ ಥಳಿಸಿದ್ದಾಳೆ. ವಾಸ್ತವವಾಗಿ, ದಿಯೋರಿ ರಸ್ತೆಯ ನಿವಾಸಿ ದಿನೇಶ್, ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಅವರ ಪತ್ನಿ ನೀಲಂ ಆರೋಪಿಸಿದ್ದಾರೆ. ಈ ಬಗ್ಗೆ ಇಬ್ಬರ ನಡುವೆ ಸಾಕಷ್ಟು ಜಗಳ ನಡೆದಿದ್ದು, ಕೋಪಗೊಂಡ ನೀಲಂ ಮನೆ ಬಿಟ್ಟು ತಾಯಿ ಮನೆಗೆ ಹೋಗಿದ್ದಾಳೆ ಎಂದು ವರದಿಯಾಗಿದೆ.

ಸೋಮವಾರ ತನ್ನ ಪತಿ ದೆಹಲಿ ಗೇಟ್‌ನಲ್ಲಿರುವ ಹೋಟೆಲ್‌ನಲ್ಲಿ ಮಹಿಳೆಯೊಂದಿಗೆ ಇರುವುದು ತಿಳಿದುಬಂದಿದೆ. ಅದರಂತೆ ತಕ್ಷಣ ತನ್ನ ಸಹೋದರನೊಂದಿಗೆ ಆ ಹೋಟೆಲ್‌ಗೆ ತೆರಳಿ ಬಾಗಿಲು ತಟ್ಟಿದ್ದಾಳೆ. ಈ ವೇಳೆ ತನ್ನ ಪತಿ ದಿನೇಶ್ ಬೇರೆ ಮಹಿಳೆಯ ಜೊತೆ ಇರುವುದನ್ನು ನೋಡಿದ್ದಾಳೆ. ಕೂಡಲೇ ತನ್ನ ಕಾಲಿನಲ್ಲಿದ್ದ ಚಪ್ಪಲಿಯನ್ನು ಕೈಗೆತ್ತಿಕೊಂಡು ಏಟಿನ ಸುರಿಮಳೆಯನ್ನೇ ಗೈದಿದ್ದಾಳೆ. ಪತಿಯೊಂದಿಗಿದ್ದ ಮಹಿಳೆಗೂ ಥಳಿಸಿದ್ದಲ್ಲದೆ ಆಕೆಯ ಕೂದಲನ್ನು ಎಳೆದಾಡಿದ್ದಾಳೆ. ಪತ್ನಿಯ ಆಕ್ರೋಶ ಅವತಾರವನ್ನ ನೋಡಿದ ದಿನೇಶ್ “ತಪ್ಪು ನಡೆದಿದೆ, ಮತ್ತೆ ಮರುಕಳಿಸುವುದಿಲ್ಲ, ಈ ಬಾರಿ ಕ್ಷಮಿಸಿ ಬಿಡು” ಅಂತ ಕ್ಷಮೆ ಕೇಳುತ್ತಾನೆ. ಆದರೂ ನೀಲಂ ನೆತ್ತಿ ಮೇಲಿದ್ದ ಕೋಪ ತಣ್ಣಗಾಗದೆ ತರಾಟೆಗೆ ತೆಗೆದುಕೊಳ್ಳುವುದನ್ನು ಮುಂದುವರಿಸುವುದನ್ನು ವಿಡಿಯೋದಲ್ಲಿ ಕಾಣಬಹುದು. ಇತ್ತ ಮಹಿಳೆ ಕೂಡ ದಿನೇಶ್ ಪತ್ನಿ ಬಳಿ ಅಳುತ್ತಾ ಕ್ಷಮೆ ಕೇಳಿದ್ದಾಳೆ.

Published On - 2:52 pm, Sun, 25 September 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?