AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹೈದರಾಬಾದ; ಜಲಾವೃತಗೊಂಡಿದ್ದ ಚರಂಡಿಯನ್ನು ಸ್ವಚ್ಛಗೊಳಿಸಿದ ಮಹಿಳಾ ಪೊಲೀಸ್

Police: ಸಾರ್ವಜನಿಕ ಸೇವಾಕ್ಷೇತ್ರಗಳಲ್ಲಿರುವವರು ತಮ್ಮ ಕರ್ತವ್ಯ ಮೀರಿ ಕಾರ್ಯ ನಿರ್ವಹಿಸಬೇಕಾಗುತ್ತದೆ. ಈ ಪೈಕಿ ಸಂದರ್ಭಗಳನ್ನು ಅರ್ಥ ಮಾಡಿಕೊಂಡು ಸ್ವಯಂಪ್ರೇರಣೆಯಿಂದ ತೊಡಗಿಕೊಳ್ಳುವವರು ಬೆರಳೆಣಿಕೆಯಷ್ಟು ಜನ ಮಾತ್ರ. ಇದೀಗ ಹೈದರಾಬಾದಿಯ ಮಹಿಳಾ ಎಸಿಪಿ ತಮ್ಮ ಸಹೋದ್ಯೋಗಿಯೊಂದಿಗೆ ಜಲಾವೃತಗೊಂಡಿದ್ದ ರಸ್ತೆಗುಂಡಿಯನ್ನು ಸ್ವಚ್ಛಗೊಳಿಸಿದ್ದಾರೆ.

Viral Video: ಹೈದರಾಬಾದ; ಜಲಾವೃತಗೊಂಡಿದ್ದ ಚರಂಡಿಯನ್ನು ಸ್ವಚ್ಛಗೊಳಿಸಿದ ಮಹಿಳಾ ಪೊಲೀಸ್
ಹೈದರಾಬಾದ್​ನ ಎಸಿಪಿ ಡಿ. ಡಿ. ಧನಲಕ್ಷ್ಮೀ ತಮ್ಮ ಸಹಾಯಕರೊಂದಿಗೆ ಜಲಾವೃತಗೊಂಡ ರಸ್ತೆಗುಂಡಿಯನ್ನು ಶುಚಿಗೊಳಿಸುತ್ತಿರುವುದು
ಶ್ರೀದೇವಿ ಕಳಸದ
|

Updated on: Sep 06, 2023 | 6:47 PM

Share

Hyderabad: ಟ್ರಾಫಿಕ್ ಪೊಲೀಸರೆಂದರೆ ಇಡೀದಿನ ರಸ್ತೆಯಲ್ಲಿ ನಿಂತು ಅತ್ತಿಂದಿತ್ತ ಇತ್ತಿಂದಿತ್ತ ಕೈಚಾಚಿ ಸಂಚಾರವನ್ನು ಸರಾಗಗೊಳಿಸುವವರು ಮಾತ್ರ ಎಂಬ ಕಲ್ಪನೆ ಸಾರ್ವಜನಿಕರಲ್ಲಿರುತ್ತದೆ. ಆದರೆ ಒಮ್ಮೆ ಸಾರ್ವಜನಿಕ ಸೇವೆಗಳಿಗೆ ತೆರೆದುಕೊಂಡ ಮೇಲೆ ಬಂದಿದ್ದೆಲ್ಲವನ್ನೂ ನಿಭಾಯಿಸುವ ಕರ್ತವ್ಯಪರತೆ ಆಯಾ ವ್ಯಕ್ತಿಗಳಿಗೆ ಇರಬೇಕಾಗುತ್ತದೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ, ರಸ್ತೆಯಲ್ಲಿರುವ ಗುಂಡಿ ಕಸದಿಂದಾಗಿ ಜಲಾವೃತಗೊಂಡಿದೆ. ಸಾರ್ವಜನಿಕರ ಸಂಚಾರಕ್ಕೆ ವ್ಯತ್ಯಯವಾಗಬಾರದೆಂದು ಪೊಲೀಸರು ಸ್ವಯಂಪ್ರೇರಣೆಯಿಂದ ಕಸವನ್ನು ಬರಿಗೈಯಿಂದ ಎತ್ತಿ ಶುಚಿಗೊಳಿಸಿದ್ದಾರೆ. ಈ ವಿಡಿಯೋ ಅನ್ನು ಹೈದರಾಬಾದಿನ ಪೊಲೀಸ್​ ಇಲಾಖೆಯು (Police Department) ತನ್ನ X ಖಾತೆಯಲ್ಲಿ ಪೋಸ್ಟ್ ಮಾಡಿದೆ.

ಇದನ್ನೂ ಓದಿ : Viral Video: ವೃದ್ಧನನ್ನು ಪ್ರಾಣಾಪಾಯದಿಂದ ಕಾಪಾಡಿದ 16ರ ಹುಡುಗ; ಸೋಶಿಯಲ್ ಮೀಡಿಯಾದಿಂದ ಕಲಿತ ತಂತ್ರ

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಸೆ. 5ರಂದು X ನಲ್ಲಿ ಹಂಚಿಕೊಂಡ ಈ ವಿಡಿಯೋ ಅನ್ನು ಈಗಾಗಲೇ 2.3 ಲಕ್ಷ ಜನರು ನೋಡಿದ್ದಾರೆ. 3,500 ಜನರು ಲೈಕ್ ಮಾಡಿರುವ ಈ ವಿಡಿಯೋಗೆ ಸಾವಿರಾರು ಜನರು ಮೆಚ್ಚಿ ಪ್ರತಿಕ್ರಿಯಿಸಿದ್ದಾರೆ. ತಮ್ಮ ಕರ್ತವ್ಯವನ್ನು ಮೀರಿ ಇವರುಗಳು ಕೆಲಸದಲ್ಲಿ ತೊಡಗಿಕೊಂಡಿರುವ ಬಗ್ಗೆ ಶ್ಲಾಘಿಸಿದ್ದಾರೆ. ಅಷ್ಟೇ ಅಲ್ಲ ಬರೀಗೈಯಲ್ಲಿ ಕಸವನ್ನು ಶುಚಿಗೊಳಿಸಿ ಸಾರ್ವಜನಿಕರಿಗೆ ಅನುವು ಮಾಡಿಕೊಟ್ಟದ್ದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಸ್ತೆಗುಂಡಿಯ ಶುಚಿಕಾರ್ಯದಲ್ಲಿ ಹೈದರಾಬಾದ್ ಪೊಲೀಸರು

ಎಸಿಪಿ  ಡಿ.ಡಿ. ಧನಲಕ್ಷ್ಮೀ ಸಹಾಯಕ ಸಿಬ್ಬಂದಿಯೊಂದಿಗೆ ಹೈದರಾಬಾದಿನ ಟೋಲಿಚೌಕಿಯ ಬಳಿ ಈ ರಸ್ತೆಗುಂಡಿಯನ್ನು ಶುಚಿಗೊಳಿಸಿದ್ದಾರೆ. ನಿಮ್ಮ ಈ ಕರ್ತವ್ಯಪರತೆಗೆ, ಕಾಳಜಿಗೆ ಧನ್ಯವಾದ ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ. ಕರ್ತವ್ಯದ ಹೊರತಾಗಿಯೂ ಸೇವೆಯನ್ನು ನಿಷ್ಠೆಯಿಂದ ಮಾಡುವ ಇಂಥ ಪೊಲೀಸರು ಇಲಾಖೆಯಲ್ಲಿ ಅನೇಕರಿದ್ದಾರೆ ಅವರನ್ನು ಗುರುತಿಸಿ ಅಭಿನಂದಿಸಬೇಕು ಎಂದಿದ್ದಾರೆ ಮತ್ತೊಬ್ಬರು.

ಇದನ್ನೂ ಓದಿ : Viral Video: ‘ಮೇಕೆಗೂ ಟಿಕೆಟ್ ಖರೀದಿಸಿದ್ದೇನೆ’; ನಮ್ಮ ದೇಶಕ್ಕೆ ಇಂಥ ಪ್ರಾಮಾಣಿಕ ನಾಯಕಿ ಬೇಕು ಎನ್ನುತ್ತಿರುವ ನೆಟ್ಟಿಗರು

ಸೇವಾಕ್ಷೇತ್ರಗಳಲ್ಲಿರುವ ಅನೇಕರು ಹೀಗೆ ಕರ್ತವ್ಯದ ಹೊರತಾಗಿಯೂ ಜನರಿಗೆ ಸಹಾಯ ಮಾಡುತ್ತಾರೆ. ಆದರೆ ಎಲ್ಲರೂ ಕಣ್ಣಿಗೆ ಬೀಳುವುದಿಲ್ಲವಷ್ಟೇ. ಈಗಿನದು ಕ್ಯಾಮೆರಾ ಯುಗ ಕೆಲವರಾದರೂ ಹೀಗೆ ಕಾಣಿಸಿಕೊಳ್ಳುತ್ತಾರೆ. ಇಂಥವರ ಬಗ್ಗೆ ಅಭಿಮಾನ ಮೂಡುತ್ತದೆ.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ