Viral Video: ಹೈದರಾಬಾದ; ಜಲಾವೃತಗೊಂಡಿದ್ದ ಚರಂಡಿಯನ್ನು ಸ್ವಚ್ಛಗೊಳಿಸಿದ ಮಹಿಳಾ ಪೊಲೀಸ್

Police: ಸಾರ್ವಜನಿಕ ಸೇವಾಕ್ಷೇತ್ರಗಳಲ್ಲಿರುವವರು ತಮ್ಮ ಕರ್ತವ್ಯ ಮೀರಿ ಕಾರ್ಯ ನಿರ್ವಹಿಸಬೇಕಾಗುತ್ತದೆ. ಈ ಪೈಕಿ ಸಂದರ್ಭಗಳನ್ನು ಅರ್ಥ ಮಾಡಿಕೊಂಡು ಸ್ವಯಂಪ್ರೇರಣೆಯಿಂದ ತೊಡಗಿಕೊಳ್ಳುವವರು ಬೆರಳೆಣಿಕೆಯಷ್ಟು ಜನ ಮಾತ್ರ. ಇದೀಗ ಹೈದರಾಬಾದಿಯ ಮಹಿಳಾ ಎಸಿಪಿ ತಮ್ಮ ಸಹೋದ್ಯೋಗಿಯೊಂದಿಗೆ ಜಲಾವೃತಗೊಂಡಿದ್ದ ರಸ್ತೆಗುಂಡಿಯನ್ನು ಸ್ವಚ್ಛಗೊಳಿಸಿದ್ದಾರೆ.

Viral Video: ಹೈದರಾಬಾದ; ಜಲಾವೃತಗೊಂಡಿದ್ದ ಚರಂಡಿಯನ್ನು ಸ್ವಚ್ಛಗೊಳಿಸಿದ ಮಹಿಳಾ ಪೊಲೀಸ್
ಹೈದರಾಬಾದ್​ನ ಎಸಿಪಿ ಡಿ. ಡಿ. ಧನಲಕ್ಷ್ಮೀ ತಮ್ಮ ಸಹಾಯಕರೊಂದಿಗೆ ಜಲಾವೃತಗೊಂಡ ರಸ್ತೆಗುಂಡಿಯನ್ನು ಶುಚಿಗೊಳಿಸುತ್ತಿರುವುದು
Follow us
|

Updated on: Sep 06, 2023 | 6:47 PM

Hyderabad: ಟ್ರಾಫಿಕ್ ಪೊಲೀಸರೆಂದರೆ ಇಡೀದಿನ ರಸ್ತೆಯಲ್ಲಿ ನಿಂತು ಅತ್ತಿಂದಿತ್ತ ಇತ್ತಿಂದಿತ್ತ ಕೈಚಾಚಿ ಸಂಚಾರವನ್ನು ಸರಾಗಗೊಳಿಸುವವರು ಮಾತ್ರ ಎಂಬ ಕಲ್ಪನೆ ಸಾರ್ವಜನಿಕರಲ್ಲಿರುತ್ತದೆ. ಆದರೆ ಒಮ್ಮೆ ಸಾರ್ವಜನಿಕ ಸೇವೆಗಳಿಗೆ ತೆರೆದುಕೊಂಡ ಮೇಲೆ ಬಂದಿದ್ದೆಲ್ಲವನ್ನೂ ನಿಭಾಯಿಸುವ ಕರ್ತವ್ಯಪರತೆ ಆಯಾ ವ್ಯಕ್ತಿಗಳಿಗೆ ಇರಬೇಕಾಗುತ್ತದೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ, ರಸ್ತೆಯಲ್ಲಿರುವ ಗುಂಡಿ ಕಸದಿಂದಾಗಿ ಜಲಾವೃತಗೊಂಡಿದೆ. ಸಾರ್ವಜನಿಕರ ಸಂಚಾರಕ್ಕೆ ವ್ಯತ್ಯಯವಾಗಬಾರದೆಂದು ಪೊಲೀಸರು ಸ್ವಯಂಪ್ರೇರಣೆಯಿಂದ ಕಸವನ್ನು ಬರಿಗೈಯಿಂದ ಎತ್ತಿ ಶುಚಿಗೊಳಿಸಿದ್ದಾರೆ. ಈ ವಿಡಿಯೋ ಅನ್ನು ಹೈದರಾಬಾದಿನ ಪೊಲೀಸ್​ ಇಲಾಖೆಯು (Police Department) ತನ್ನ X ಖಾತೆಯಲ್ಲಿ ಪೋಸ್ಟ್ ಮಾಡಿದೆ.

ಇದನ್ನೂ ಓದಿ : Viral Video: ವೃದ್ಧನನ್ನು ಪ್ರಾಣಾಪಾಯದಿಂದ ಕಾಪಾಡಿದ 16ರ ಹುಡುಗ; ಸೋಶಿಯಲ್ ಮೀಡಿಯಾದಿಂದ ಕಲಿತ ತಂತ್ರ

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಸೆ. 5ರಂದು X ನಲ್ಲಿ ಹಂಚಿಕೊಂಡ ಈ ವಿಡಿಯೋ ಅನ್ನು ಈಗಾಗಲೇ 2.3 ಲಕ್ಷ ಜನರು ನೋಡಿದ್ದಾರೆ. 3,500 ಜನರು ಲೈಕ್ ಮಾಡಿರುವ ಈ ವಿಡಿಯೋಗೆ ಸಾವಿರಾರು ಜನರು ಮೆಚ್ಚಿ ಪ್ರತಿಕ್ರಿಯಿಸಿದ್ದಾರೆ. ತಮ್ಮ ಕರ್ತವ್ಯವನ್ನು ಮೀರಿ ಇವರುಗಳು ಕೆಲಸದಲ್ಲಿ ತೊಡಗಿಕೊಂಡಿರುವ ಬಗ್ಗೆ ಶ್ಲಾಘಿಸಿದ್ದಾರೆ. ಅಷ್ಟೇ ಅಲ್ಲ ಬರೀಗೈಯಲ್ಲಿ ಕಸವನ್ನು ಶುಚಿಗೊಳಿಸಿ ಸಾರ್ವಜನಿಕರಿಗೆ ಅನುವು ಮಾಡಿಕೊಟ್ಟದ್ದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಸ್ತೆಗುಂಡಿಯ ಶುಚಿಕಾರ್ಯದಲ್ಲಿ ಹೈದರಾಬಾದ್ ಪೊಲೀಸರು

ಎಸಿಪಿ  ಡಿ.ಡಿ. ಧನಲಕ್ಷ್ಮೀ ಸಹಾಯಕ ಸಿಬ್ಬಂದಿಯೊಂದಿಗೆ ಹೈದರಾಬಾದಿನ ಟೋಲಿಚೌಕಿಯ ಬಳಿ ಈ ರಸ್ತೆಗುಂಡಿಯನ್ನು ಶುಚಿಗೊಳಿಸಿದ್ದಾರೆ. ನಿಮ್ಮ ಈ ಕರ್ತವ್ಯಪರತೆಗೆ, ಕಾಳಜಿಗೆ ಧನ್ಯವಾದ ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ. ಕರ್ತವ್ಯದ ಹೊರತಾಗಿಯೂ ಸೇವೆಯನ್ನು ನಿಷ್ಠೆಯಿಂದ ಮಾಡುವ ಇಂಥ ಪೊಲೀಸರು ಇಲಾಖೆಯಲ್ಲಿ ಅನೇಕರಿದ್ದಾರೆ ಅವರನ್ನು ಗುರುತಿಸಿ ಅಭಿನಂದಿಸಬೇಕು ಎಂದಿದ್ದಾರೆ ಮತ್ತೊಬ್ಬರು.

ಇದನ್ನೂ ಓದಿ : Viral Video: ‘ಮೇಕೆಗೂ ಟಿಕೆಟ್ ಖರೀದಿಸಿದ್ದೇನೆ’; ನಮ್ಮ ದೇಶಕ್ಕೆ ಇಂಥ ಪ್ರಾಮಾಣಿಕ ನಾಯಕಿ ಬೇಕು ಎನ್ನುತ್ತಿರುವ ನೆಟ್ಟಿಗರು

ಸೇವಾಕ್ಷೇತ್ರಗಳಲ್ಲಿರುವ ಅನೇಕರು ಹೀಗೆ ಕರ್ತವ್ಯದ ಹೊರತಾಗಿಯೂ ಜನರಿಗೆ ಸಹಾಯ ಮಾಡುತ್ತಾರೆ. ಆದರೆ ಎಲ್ಲರೂ ಕಣ್ಣಿಗೆ ಬೀಳುವುದಿಲ್ಲವಷ್ಟೇ. ಈಗಿನದು ಕ್ಯಾಮೆರಾ ಯುಗ ಕೆಲವರಾದರೂ ಹೀಗೆ ಕಾಣಿಸಿಕೊಳ್ಳುತ್ತಾರೆ. ಇಂಥವರ ಬಗ್ಗೆ ಅಭಿಮಾನ ಮೂಡುತ್ತದೆ.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು