AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಣ್ಣಿನ ರಾಡಿಯಲ್ಲಿ ಬಿದ್ದು-ಎದ್ದೇಳಲು ಹೆಣಗಾಡುತ್ತಿದ್ದ ಆನೆ ದೃಶ್ಯ ಸೆರೆ; ವೈರಲ್​ ಆಯ್ತು ವಿಡಿಯೋ

ಮಣ್ಣಿನ ರಾಡಿಯಲ್ಲಿ ಆನೆ ಸಿಲುಕಿಕೊಂಡು ಒದ್ದಾಡುತ್ತಿದ್ದ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಆನೆಯನ್ನು ರಕ್ಷಿಸಿದ ಸಿಬ್ಬಂದಿಗೆ ನೆಟ್ಟಿಗರು ಶ್ಲಾಘಿಸಿದ್ದಾರೆ.

Viral Video: ಮಣ್ಣಿನ ರಾಡಿಯಲ್ಲಿ ಬಿದ್ದು-ಎದ್ದೇಳಲು ಹೆಣಗಾಡುತ್ತಿದ್ದ ಆನೆ ದೃಶ್ಯ ಸೆರೆ; ವೈರಲ್​ ಆಯ್ತು ವಿಡಿಯೋ
ಮಣ್ಣಿನ ರಾಡಿಯಲ್ಲಿ ಬಿದ್ದು-ಎದ್ದೇಳಲು ಒದ್ದಾಡಿದ ಆನೆ
shruti hegde
|

Updated on: May 17, 2021 | 3:13 PM

Share

ಮಣ್ಣಿನ ರಾಡಿಯಲ್ಲಿ ಬಿದ್ದು- ಎದ್ದೇಳಲು ಸಾಧ್ಯವಾಗದೇ ಒದ್ದಾಡುತ್ತಿದ್ದ ಆನೆಯನ್ನು ಕರ್ನಾಟಕದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಧಿಕಾರಿಗಳು ರಕ್ಷಿಸಿದ್ದಾರೆ. ಬಂಡೀಪುರದ ಟೈಗರ್​ ರಿಸರ್ವ್​​ ಭಾನುವಾರ ವಿಡಿಯೋ ಕ್ಲಿಪ್​ಅನ್ನು ಟ್ವೀಟ್​ ಮಾಡುತ್ತಿದ್ದಂತೆಯೇ ಸೋಷಿಯಲ್​ ಮೀಡಿಯಾದಲ್ಲಿ ವೈರಲ್ ಆಗಿದೆ.

ವಿಡಿಯೋ ಕ್ಲಿಪ್​ನಲ್ಲಿ ನೋಡುವಂತೆ ಆನೆಯೊಂದು ಮಣ್ಣಿನ ಕೆಸರಿನಲ್ಲಿ ಸಿಲುಕಿಕೊಂಡು ಎದ್ದೇಳಲು ಕಸರತ್ತು ಮಾಡುತ್ತಿತ್ತು. ಮಣ್ಣಿನ ರಾಡಿಯಲ್ಲಿ ಇದ್ದಿದ್ದರಿಂದ ಕಾಲು ಜಾರುತ್ತಿತ್ತು. ಆದರೂ ಪ್ರಯತ್ನ ಬಿಡದೇ ತನ್ನ ಕಾಲುಗಳನ್ನು ನೆಲಕ್ಕೆ ಊರಲು ಒಂದೇ ಸಮನೆ ಪ್ರಯತ್ನಿಸುತ್ತಿತ್ತು. ಕೊನೆಗೂ ಮೇಲೇರಲು ಸಾಧ್ಯವಾಗಲೇ ಇಲ್ಲ . ಇದನ್ನು ಗಮನಿಸಿದ ಅರಣ್ಣ ಸಿಬ್ಬಂದಿ ಜೆಸಿಬಿಯಿಂದ ಆನೆಯನ್ನು ಮುಂದಕ್ಕೆ ದೂಡಿದರು. ಮಣ್ಣಿನ ರಾಡಿ ಬಿಟ್ಟು ಸಮವಾದ ನೆಲಕ್ಕೆ ಆನೆ ಸೇರಿತು. ಆ ಬಳಿಕ ಆನೆ ನಿಧಾನವಾಗಿ ಕಾಲುಗಳನ್ನು ನೆಲಕ್ಕೆ ಊರಿ ಮೇಲೆದ್ದು ನಿಂತಿತು.

ಭಾರತೀಯ ಅರಣ್ಯ ಸೇವೆಯ ರಮೇಶ್​ ಪಾಂಡೆ ಅವರು ಈ ವಿಡಿಯೋವನ್ನು ಟ್ವೀಟ್​ ಮಾಡಿ, ‘ಮಣ್ಣಿನ ರಾಡಿಯಲ್ಲಿ ಅಥವಾ ಜಾರುವ ನೆಲದಲ್ಲಿ ತೂಕದ ಪ್ರಾಣಿ ಬಿದ್ದರೆ ಅವುಗಳಿಗೆ ಮೇಲೆರಲು ಸಾಧ್ಯವಾಗುವುದಿಲ್ಲ. ಆನೆಯು ತುಂಬಾ ದಣಿದಿತ್ತು. ಜಾರುವ ಮಣ್ಣಿನಿಂದ ಹೊರಬರಲು ಸಹಾಯ ಮಾಡಿದ ಬಂಡೀಪುರ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಆಗುತ್ತಿದ್ದಂತೆಯೇ, ಆನೆಯನ್ನು ರಕ್ಷಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದರು. ಓರ್ವರು ಕಾಮೆಂಟ್​​ ಮಾಡುವ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, ‘ಆನೆ ತುಂಬಾ ಹಸಿವಿನಿಂದ ಬಳಲುತ್ತಿತ್ತು’ ಎಂದು ಬರೆದುಕೊಂಡಿದ್ದಾರೆ. ಇನ್ನೋರ್ವರು ‘ತುಂಬಾ ಒಳ್ಳೆಯ ಕೆಲಸ’ ಎಂಬುದಾಗಿ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದೈತ್ಯಾಕಾರದ ಆನೆ ಕ್ರಿಕೆಟ್​ ಆಡುವುದನ್ನು ನೋಡಿದರೆ ನೀವೂ ಆಶ್ಚರ್ಯಪಡ್ತೀರಾ; ಇಲ್ಲಿದೆ ವಿಡಿಯೋ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು