AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಣ್ಣಿನ ರಾಡಿಯಲ್ಲಿ ಬಿದ್ದು-ಎದ್ದೇಳಲು ಹೆಣಗಾಡುತ್ತಿದ್ದ ಆನೆ ದೃಶ್ಯ ಸೆರೆ; ವೈರಲ್​ ಆಯ್ತು ವಿಡಿಯೋ

ಮಣ್ಣಿನ ರಾಡಿಯಲ್ಲಿ ಆನೆ ಸಿಲುಕಿಕೊಂಡು ಒದ್ದಾಡುತ್ತಿದ್ದ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಆನೆಯನ್ನು ರಕ್ಷಿಸಿದ ಸಿಬ್ಬಂದಿಗೆ ನೆಟ್ಟಿಗರು ಶ್ಲಾಘಿಸಿದ್ದಾರೆ.

Viral Video: ಮಣ್ಣಿನ ರಾಡಿಯಲ್ಲಿ ಬಿದ್ದು-ಎದ್ದೇಳಲು ಹೆಣಗಾಡುತ್ತಿದ್ದ ಆನೆ ದೃಶ್ಯ ಸೆರೆ; ವೈರಲ್​ ಆಯ್ತು ವಿಡಿಯೋ
ಮಣ್ಣಿನ ರಾಡಿಯಲ್ಲಿ ಬಿದ್ದು-ಎದ್ದೇಳಲು ಒದ್ದಾಡಿದ ಆನೆ
shruti hegde
|

Updated on: May 17, 2021 | 3:13 PM

Share

ಮಣ್ಣಿನ ರಾಡಿಯಲ್ಲಿ ಬಿದ್ದು- ಎದ್ದೇಳಲು ಸಾಧ್ಯವಾಗದೇ ಒದ್ದಾಡುತ್ತಿದ್ದ ಆನೆಯನ್ನು ಕರ್ನಾಟಕದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಧಿಕಾರಿಗಳು ರಕ್ಷಿಸಿದ್ದಾರೆ. ಬಂಡೀಪುರದ ಟೈಗರ್​ ರಿಸರ್ವ್​​ ಭಾನುವಾರ ವಿಡಿಯೋ ಕ್ಲಿಪ್​ಅನ್ನು ಟ್ವೀಟ್​ ಮಾಡುತ್ತಿದ್ದಂತೆಯೇ ಸೋಷಿಯಲ್​ ಮೀಡಿಯಾದಲ್ಲಿ ವೈರಲ್ ಆಗಿದೆ.

ವಿಡಿಯೋ ಕ್ಲಿಪ್​ನಲ್ಲಿ ನೋಡುವಂತೆ ಆನೆಯೊಂದು ಮಣ್ಣಿನ ಕೆಸರಿನಲ್ಲಿ ಸಿಲುಕಿಕೊಂಡು ಎದ್ದೇಳಲು ಕಸರತ್ತು ಮಾಡುತ್ತಿತ್ತು. ಮಣ್ಣಿನ ರಾಡಿಯಲ್ಲಿ ಇದ್ದಿದ್ದರಿಂದ ಕಾಲು ಜಾರುತ್ತಿತ್ತು. ಆದರೂ ಪ್ರಯತ್ನ ಬಿಡದೇ ತನ್ನ ಕಾಲುಗಳನ್ನು ನೆಲಕ್ಕೆ ಊರಲು ಒಂದೇ ಸಮನೆ ಪ್ರಯತ್ನಿಸುತ್ತಿತ್ತು. ಕೊನೆಗೂ ಮೇಲೇರಲು ಸಾಧ್ಯವಾಗಲೇ ಇಲ್ಲ . ಇದನ್ನು ಗಮನಿಸಿದ ಅರಣ್ಣ ಸಿಬ್ಬಂದಿ ಜೆಸಿಬಿಯಿಂದ ಆನೆಯನ್ನು ಮುಂದಕ್ಕೆ ದೂಡಿದರು. ಮಣ್ಣಿನ ರಾಡಿ ಬಿಟ್ಟು ಸಮವಾದ ನೆಲಕ್ಕೆ ಆನೆ ಸೇರಿತು. ಆ ಬಳಿಕ ಆನೆ ನಿಧಾನವಾಗಿ ಕಾಲುಗಳನ್ನು ನೆಲಕ್ಕೆ ಊರಿ ಮೇಲೆದ್ದು ನಿಂತಿತು.

ಭಾರತೀಯ ಅರಣ್ಯ ಸೇವೆಯ ರಮೇಶ್​ ಪಾಂಡೆ ಅವರು ಈ ವಿಡಿಯೋವನ್ನು ಟ್ವೀಟ್​ ಮಾಡಿ, ‘ಮಣ್ಣಿನ ರಾಡಿಯಲ್ಲಿ ಅಥವಾ ಜಾರುವ ನೆಲದಲ್ಲಿ ತೂಕದ ಪ್ರಾಣಿ ಬಿದ್ದರೆ ಅವುಗಳಿಗೆ ಮೇಲೆರಲು ಸಾಧ್ಯವಾಗುವುದಿಲ್ಲ. ಆನೆಯು ತುಂಬಾ ದಣಿದಿತ್ತು. ಜಾರುವ ಮಣ್ಣಿನಿಂದ ಹೊರಬರಲು ಸಹಾಯ ಮಾಡಿದ ಬಂಡೀಪುರ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಆಗುತ್ತಿದ್ದಂತೆಯೇ, ಆನೆಯನ್ನು ರಕ್ಷಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದರು. ಓರ್ವರು ಕಾಮೆಂಟ್​​ ಮಾಡುವ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, ‘ಆನೆ ತುಂಬಾ ಹಸಿವಿನಿಂದ ಬಳಲುತ್ತಿತ್ತು’ ಎಂದು ಬರೆದುಕೊಂಡಿದ್ದಾರೆ. ಇನ್ನೋರ್ವರು ‘ತುಂಬಾ ಒಳ್ಳೆಯ ಕೆಲಸ’ ಎಂಬುದಾಗಿ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದೈತ್ಯಾಕಾರದ ಆನೆ ಕ್ರಿಕೆಟ್​ ಆಡುವುದನ್ನು ನೋಡಿದರೆ ನೀವೂ ಆಶ್ಚರ್ಯಪಡ್ತೀರಾ; ಇಲ್ಲಿದೆ ವಿಡಿಯೋ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ