AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಭಿ ಲಡ್ಕೋ ಕಾ ಭೀ ಫಾರ್ಮ್ ಆಗಾಯ.. ‘ಮಾರೋ ಮುಜೆ‘ ಖ್ಯಾತಿಯ ಯುವಕನಿಗೆ ಪಠಾಣ್ ಪ್ರತ್ಯುತ್ತರ

ಪಠಾಣ್ ಭಾಯ್, ಭಾರತ ಭಾನುವಾರ ಸೋಲುತ್ತಾ? ಎಂದು ಮಾರೋ ಮುಜೆ ಖ್ಯಾತಿಯ ಯುವಕ ಪ್ರಶ್ನಿಸಿದ್ದಾನೆ. "ವೋ ಏಕ್ ಬಾರ್ ಹೋಗಯಾ ಯಾರ್, ಬಾರ್ ಬಾರ್ ನೆಹಿ ಹೋಗಾ" ಎಂದು ಇರ್ಫಾನ್ ಪಠಾಣ್ ಪ್ರತ್ಯುತ್ತರಿಸಿದ್ದಾರೆ.

Viral Video: ಅಭಿ ಲಡ್ಕೋ ಕಾ ಭೀ ಫಾರ್ಮ್ ಆಗಾಯ.. ‘ಮಾರೋ ಮುಜೆ‘ ಖ್ಯಾತಿಯ ಯುವಕನಿಗೆ ಪಠಾಣ್ ಪ್ರತ್ಯುತ್ತರ
ಅಭಿ ಲಡ್ಕೋ ಕಾ ಭೀ ಫಾರ್ಮ್ ಆಗಾಯ.. ‘ಮಾರೋ ಮುಜೆ‘ ಯುವಕನಿಗೆ ಪಠಾಣ್ ಪ್ರತ್ಯುತ್ತರ
TV9 Web
| Edited By: Rakesh Nayak Manchi|

Updated on: Sep 04, 2022 | 10:55 AM

Share

ಏಷ್ಯಾಕಪ್‌-2022ರಲ್ಲಿ ಭಾರತ ಎರಡನೇ ಬಾರಿಗೆ ಸಾಂಪ್ರದಾಯಿಕ ಶತ್ರು ರಾಷ್ಟ್ರ ಪಾಕಿಸ್ತಾನವನ್ನು ಎದುರಿಸುತ್ತಿದ್ದು, ಈ ಬಾರಿ ಸೂಪರ್ 4 ಹಂತದಲ್ಲಿದೆ. ಈ ಪಂದ್ಯದ ಊಹಾಪೋಹದ ಮಾತುಗಳು ಹರಿದಾಡುತ್ತಿರುವ ನಡುವೆ ಸಾಮಾಜಿಕ ಜಾಲತಾಣದಲ್ಲಿ ‘ಮಾರೋ ಮುಜೆ ಮಾರೋ’ ಖ್ಯಾತಿಯ ಪಾಕಿಸ್ತಾನದ ಮೊಮಿನ್ ಸಾಕಿಬ್ ಎಂಬ ಯುವಕನ ವಿಡಿಯೋ ಕಾಣಿಸಿಕೊಂಡಿದೆ. ಕ್ರಿಕೆಟ್ ಮೈದಾನದಲ್ಲಿ ಆ ಯುವಕ ಕ್ರಿಕೆಟ್ ಟೀಂ ಇಂಡಿಯಾದ ಮಾಜಿ ಆಟಗಾರ ಇರ್ಫಾನ್ ಪಠಾಣ್ ಅವರನ್ನು ಭೇಟಿಯಾಗಿ ಮಾತನಾಡಿಸಿದ್ದಾನೆ. ಇದರ ವಿಡಿಯೋವನ್ನು ಆತ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾನೆ.

“ಭಾರತ ಕಂಡ ಅತ್ಯುತ್ತಮ ಸ್ವಿಂಗ್ ಬೌಲರ್ ಇರ್ಫಾನ್ ಪಠಾಣ್ ಅವರನ್ನು ಭೇಟಿಯಾಗಲು ಸಂತೋಷವಾಗಿದೆ. ಆದರೂ ಇರ್ಫಾನ್ ಭಾಯ್, ನೀವು ಒಪ್ಪಿ ಇಲ್ಲವೇ ಬಿಡಿ, ಏಷ್ಯಾ ಕಪ್ ನಮ್ಮದೇ” ಎಂದು ವಿಡಿಯೋ ಹಂಚಿಕೊಳ್ಳುವಾಗ ಶೀರ್ಷಿಕೆಯನ್ನು ಬರೆದುಕೊಂಡಿದ್ದಾನೆ.

ವೀಡಿಯೊದಲ್ಲಿ ಇರುವಂತೆ, ನೀವು 2006ರಲ್ಲಿ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಸಾಧನೆ ಮಾಡಿದ್ದೀರಿ. ಭಾಯ್ ನೀವು ಹೇಗಿದ್ದೀರಿ? ಎಂದು ಪ್ರಶ್ನಿಸಿದಾಗ ಚೆನ್ನಾಗಿರುವುದಾಗಿ ಪಠಾಣ್ ಹೇಳಿದ್ದಾರೆ. ಮುಂದುವರೆದು ಮಾತನಾಡಿದ ಮೊಮಿನ್, ಭಾನುವಾರದ ಇಂಡಿಯಾ-ಪಾಕಿಸ್ತಾನದ ಪಂದ್ಯವನ್ನು ಉಲ್ಲೇಖಿಸಿದ್ದಾನೆ.

ಭಾನುವಾರ ಪಾಕಿಸ್ತಾನ-ಭಾರತ ಪಂದ್ಯ ನಡೆಯಲಿದೆ, ನಿಮಗೆ ಏನು ಅನಿಸುತ್ತಿದೆ? ಎಂದು ಮೊಮಿನ್ ಕೇಳಿದಾಗ ಉತ್ತರಿಸಿದ ಪಠಾಣ್, ಗೆಲುವು ಪುನರಾವರ್ತನೆಯಾಗಲಿದೆ ಎಂದಿದ್ದಾರೆ. ಇದಕ್ಕೆ 2021ರಲ್ಲಿ ದುಬೈನಲ್ಲಿ ನಡೆದ ಟಿ-20 ವಿಶ್ವಕಪ್ ಆರಂಭಿಕ ಪಂದ್ಯದಲ್ಲಿ ಭಾರತ ಪಾಕ್ ವಿರುದ್ಧ ಸೋಲು ಅನುಭವಿಸಿದ್ದನ್ನು ಉಲ್ಲೇಖಿಸಿದ್ದಾನೆ, ಇದಕ್ಕೆ ಉತ್ತರಿಸುವ ಆರಂಭದಲ್ಲಿ ಇಬ್ಬರೂ ನಕ್ಕರು. ನಂತರ ಉತ್ತರಿಸಿದ ಪಠಾಣ್, ಅದು ಒಂದು ಬಾರಿ ಅಷ್ಟೆ, ಪದೇಪದೇ ಆಗುವುದಿಲ್ಲ, ಈಗ ಹುಡುಗರು ಫಾರ್ಮ್​ಗೆ ಬಂದಿದ್ದಾರೆ ಎಂದು ಹೇಳಿದ್ದಾರೆ.

ದುಬೈನಲ್ಲಿ ನಡೆದ ಏಷ್ಯಾಕಪ್‌ನ ಆರಂಭಿಕ ಪಂದ್ಯದಲ್ಲಿ ಭಾರತ ಐದು ವಿಕೆಟ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿತು. ಇಂದು ಮತ್ತೆ ಭಾರತ ಪಾಕಿಸ್ತಾನ ಕಣಕ್ಕಿಳಿಯಲಿದ್ದು, ಸಂಜೆ 7.30ಕ್ಕೆ ಆರಂಭಗೊಳ್ಳಲಿರುವ ಹೈ ಓಲ್ಟೇಜ್ ಪಂದ್ಯ ವೀಕ್ಷಣೆ ಮಾಡಲು ಅಭಿಮಾನಿಗಳು ಕಾಯುತ್ತಿದ್ದಾರೆ.

View this post on Instagram

A post shared by Momin Saqib (@mominsaqib)

ಮತ್ತಷ್ಟು ಟ್ರೆಂಡಿಂಗ್ ವಿಡಿಯೋಗಳನ್ನು ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ