Viral Video: ವೇಗವಾಗಿ ಬರುತ್ತಿದ್ದ ರೈಲಿನೆದುರು ಬಿದ್ದಿದ್ದ ವ್ಯಕ್ತಿಯ ಜೀವ ಉಳಿಸಿದ ರೈಲ್ವೆ ಸಿಬ್ಬಂದಿ; ಶಾಕಿಂಗ್ ವಿಡಿಯೋ ವೈರಲ್

ಸತೀಶ್​ ಕುಮಾರ್ ಅವರಂತಹ ಕೆಚ್ಚೆದೆಯ, ಪ್ರಾಮಾಣಿಕ ಸಿಬ್ಬಂದಿಯನ್ನು ಹೊಂದಿರುವುದಕ್ಕೆ ರೈಲ್ವೆ ಇಲಾಖೆ ಬಹಳ ಹೆಮ್ಮೆ ಪಡುತ್ತದೆ ಎಂದು ಟ್ವಿಟ್ಟರ್​​ನಲ್ಲಿ ಈ ವಿಡಿಯೋವನ್ನು ರೈಲ್ವೆ ಸಚಿವಾಲಯ ಹಂಚಿಕೊಂಡಿದೆ.

Viral Video: ವೇಗವಾಗಿ ಬರುತ್ತಿದ್ದ ರೈಲಿನೆದುರು ಬಿದ್ದಿದ್ದ ವ್ಯಕ್ತಿಯ ಜೀವ ಉಳಿಸಿದ ರೈಲ್ವೆ ಸಿಬ್ಬಂದಿ; ಶಾಕಿಂಗ್ ವಿಡಿಯೋ ವೈರಲ್
ವ್ಯಕ್ತಿಯನ್ನು ಕಾಪಾಡಿದ ರೈಲ್ವೆ ಸಿಬ್ಬಂದಿImage Credit source: NDTV
Follow us
| Updated By: ಸುಷ್ಮಾ ಚಕ್ರೆ

Updated on:Jun 24, 2022 | 8:35 AM

ನವದೆಹಲಿ: ವೇಗವಾಗಿ ಬರುತ್ತಿದ್ದ ರೈಲು (Train) ಇನ್ನೇನು ರೈಲ್ವೆ ಹಳಿಯ ಮೇಲಿದ್ದ ವ್ಯಕ್ತಿಯ ಮೇಲೆ ಹಾದುಹೋಗಬೇಕು ಎನ್ನುವಷ್ಟರಲ್ಲಿ ಓಡಿಬಂದ ರೈಲ್ವೆ ಸಿಬ್ಬಂದಿ ಆ ವ್ಯಕ್ತಿಯನ್ನು ಹಳಿಯಿಂದ ಮೇಲೆತ್ತಿ ಕಾಪಾಡಿದ್ದಾರೆ. ಪ್ಲಾಟ್​ಫಾರ್ಮ್​ ಮೇಲೆ ನಿಂತವರು ಆತಂಕದಿಂದ ನೋಡುತ್ತಿರುವಂತೆಯೇ ತನ್ನ ಪ್ರಾಣವನ್ನೂ ಲೆಕ್ಕಿಸದ ರೈಲ್ವೆ (Indian Railways) ಸಿಬ್ಬಂದಿ ರೈಲಿನ ಎದುರು ಹಾರಿ ಆ ವ್ಯಕ್ತಿಯನ್ನು ರಕ್ಷಿಸಿರುವ ವಿಡಿಯೋ (Video Viral) ಇದೀಗ ವೈರಲ್ ಆಗಿದೆ. ಈ ವಿಡಿಯೋವನ್ನು ರೈಲ್ವೆ ಸಚಿವಾಲಯ ಟ್ವಿಟ್ಟರ್​​ನಲ್ಲಿ ಶೇರ್ ಮಾಡಿಕೊಂಡಿದೆ.

ಸೇವೆ, ಸುರಕ್ಷತಗೆ ನಾವು ಆದ್ಯತೆ ನೀಡುತ್ತೇವೆ. ನಮ್ಮ ಇಲಾಖೆಯ ಧೈರ್ಯಶಾಲಿ ಸಿಬ್ಬಂದಿಯಿಂದಾಗಿ ಒಂದು ಅಮೂಲ್ಯವಾದ ಜೀವ ಉಳಿದಿದೆ. ಸತೀಶ್​ ಕುಮಾರ್ ಅವರಂತಹ ಕೆಚ್ಚೆದೆಯ, ಪ್ರಾಮಾಣಿಕ ಸಿಬ್ಬಂದಿಯನ್ನು ಹೊಂದಿರುವುದಕ್ಕೆ ರೈಲ್ವೆ ಇಲಾಖೆ ಬಹಳ ಹೆಮ್ಮೆ ಪಡುತ್ತದೆ ಎಂದು ಟ್ವಿಟ್ಟರ್​​ನಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ದೃಶ್ಯ ರೈಲ್ವೆ ಪ್ಲಾಟ್​ಫಾರ್ಮ್​ನ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಇದನ್ನೂ ಓದಿ: Viral Video: ಸ್ಕೂಟಿಯಲ್ಲಿ ಕೂರಲೂ ಜಾಗವಿಲ್ಲದಷ್ಟು ಸಾಮಾನು ತುಂಬಿಕೊಂಡು ಹೊರಟ ಯುವಕ; ವಿಡಿಯೋ ನೋಡಿದ ಪೊಲೀಸರು ಮಾಡಿದ್ದೇನು?

24 ಸೆಕೆಂಡ್‌ಗಳ ಈ ವಿಡಿಯೋ ಕ್ಲಿಪ್‌ನಲ್ಲಿ ರೈಲ್ವೆ ಉದ್ಯೋಗಿ ಪ್ಲಾಟ್‌ಫಾರ್ಮ್‌ನಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಟ್ರ್ಯಾಕ್‌ನಲ್ಲಿ ಮಲಗಿರುವ ವ್ಯಕ್ತಿಯನ್ನು ನೋಡುತ್ತಾನೆ. ಅಷ್ಟರಲ್ಲೇ ರೈಲು ಪ್ಲಾಟ್​ಫಾರ್ಮ್​ಗೆ ಬರುತ್ತಿರುವುದು ಕಾಣುತ್ತದೆ. ಒಂದುಕ್ಷಣವೂ ತಡಮಾಡದ ಆ ಸಿಬ್ಬಂದಿ ತನ್ನ ಕೈಲಿರುವುದನ್ನು ಪ್ಲಾಟ್​ಫಾರ್ಮ್​ಗೆ ಎಸೆದು, ತನ್ನ ಪ್ರಾಣವನ್ನೂ ಲೆಕ್ಕಿಸದೆ ರೈಲ್ವೆ ಹಳಿಯ ಮೇಲೆ ಜಿಗಿದು ಆ ವ್ಯಕ್ತಿಯನ್ನು ಎತ್ತಿಕೊಳ್ಳುತ್ತಾರೆ. ಸಮಯಕ್ಕೆ ಸರಿಯಾಗಿ ಟ್ರ್ಯಾಕ್‌ನ ಇನ್ನೊಂದು ಬದಿಗೆ ಆತನನ್ನು ಎಳೆದುಕೊಂಡು ಹೋಗುತ್ತಾರೆ. ಆತ ರೈಲ್ವೆ ಟ್ರ್ಯಾಕ್ ದಾಟಿದ ಕೂಡಲೆ ಗೂಡ್ಸ್ ರೈಲು ಅವರನ್ನು ದಾಟಿ ಹೋಗುತ್ತದೆ.

Published On - 8:34 am, Fri, 24 June 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ