AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವೇಗವಾಗಿ ಬರುತ್ತಿದ್ದ ರೈಲಿನೆದುರು ಬಿದ್ದಿದ್ದ ವ್ಯಕ್ತಿಯ ಜೀವ ಉಳಿಸಿದ ರೈಲ್ವೆ ಸಿಬ್ಬಂದಿ; ಶಾಕಿಂಗ್ ವಿಡಿಯೋ ವೈರಲ್

ಸತೀಶ್​ ಕುಮಾರ್ ಅವರಂತಹ ಕೆಚ್ಚೆದೆಯ, ಪ್ರಾಮಾಣಿಕ ಸಿಬ್ಬಂದಿಯನ್ನು ಹೊಂದಿರುವುದಕ್ಕೆ ರೈಲ್ವೆ ಇಲಾಖೆ ಬಹಳ ಹೆಮ್ಮೆ ಪಡುತ್ತದೆ ಎಂದು ಟ್ವಿಟ್ಟರ್​​ನಲ್ಲಿ ಈ ವಿಡಿಯೋವನ್ನು ರೈಲ್ವೆ ಸಚಿವಾಲಯ ಹಂಚಿಕೊಂಡಿದೆ.

Viral Video: ವೇಗವಾಗಿ ಬರುತ್ತಿದ್ದ ರೈಲಿನೆದುರು ಬಿದ್ದಿದ್ದ ವ್ಯಕ್ತಿಯ ಜೀವ ಉಳಿಸಿದ ರೈಲ್ವೆ ಸಿಬ್ಬಂದಿ; ಶಾಕಿಂಗ್ ವಿಡಿಯೋ ವೈರಲ್
ವ್ಯಕ್ತಿಯನ್ನು ಕಾಪಾಡಿದ ರೈಲ್ವೆ ಸಿಬ್ಬಂದಿImage Credit source: NDTV
TV9 Web
| Edited By: |

Updated on:Jun 24, 2022 | 8:35 AM

Share

ನವದೆಹಲಿ: ವೇಗವಾಗಿ ಬರುತ್ತಿದ್ದ ರೈಲು (Train) ಇನ್ನೇನು ರೈಲ್ವೆ ಹಳಿಯ ಮೇಲಿದ್ದ ವ್ಯಕ್ತಿಯ ಮೇಲೆ ಹಾದುಹೋಗಬೇಕು ಎನ್ನುವಷ್ಟರಲ್ಲಿ ಓಡಿಬಂದ ರೈಲ್ವೆ ಸಿಬ್ಬಂದಿ ಆ ವ್ಯಕ್ತಿಯನ್ನು ಹಳಿಯಿಂದ ಮೇಲೆತ್ತಿ ಕಾಪಾಡಿದ್ದಾರೆ. ಪ್ಲಾಟ್​ಫಾರ್ಮ್​ ಮೇಲೆ ನಿಂತವರು ಆತಂಕದಿಂದ ನೋಡುತ್ತಿರುವಂತೆಯೇ ತನ್ನ ಪ್ರಾಣವನ್ನೂ ಲೆಕ್ಕಿಸದ ರೈಲ್ವೆ (Indian Railways) ಸಿಬ್ಬಂದಿ ರೈಲಿನ ಎದುರು ಹಾರಿ ಆ ವ್ಯಕ್ತಿಯನ್ನು ರಕ್ಷಿಸಿರುವ ವಿಡಿಯೋ (Video Viral) ಇದೀಗ ವೈರಲ್ ಆಗಿದೆ. ಈ ವಿಡಿಯೋವನ್ನು ರೈಲ್ವೆ ಸಚಿವಾಲಯ ಟ್ವಿಟ್ಟರ್​​ನಲ್ಲಿ ಶೇರ್ ಮಾಡಿಕೊಂಡಿದೆ.

ಸೇವೆ, ಸುರಕ್ಷತಗೆ ನಾವು ಆದ್ಯತೆ ನೀಡುತ್ತೇವೆ. ನಮ್ಮ ಇಲಾಖೆಯ ಧೈರ್ಯಶಾಲಿ ಸಿಬ್ಬಂದಿಯಿಂದಾಗಿ ಒಂದು ಅಮೂಲ್ಯವಾದ ಜೀವ ಉಳಿದಿದೆ. ಸತೀಶ್​ ಕುಮಾರ್ ಅವರಂತಹ ಕೆಚ್ಚೆದೆಯ, ಪ್ರಾಮಾಣಿಕ ಸಿಬ್ಬಂದಿಯನ್ನು ಹೊಂದಿರುವುದಕ್ಕೆ ರೈಲ್ವೆ ಇಲಾಖೆ ಬಹಳ ಹೆಮ್ಮೆ ಪಡುತ್ತದೆ ಎಂದು ಟ್ವಿಟ್ಟರ್​​ನಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ದೃಶ್ಯ ರೈಲ್ವೆ ಪ್ಲಾಟ್​ಫಾರ್ಮ್​ನ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಇದನ್ನೂ ಓದಿ: Viral Video: ಸ್ಕೂಟಿಯಲ್ಲಿ ಕೂರಲೂ ಜಾಗವಿಲ್ಲದಷ್ಟು ಸಾಮಾನು ತುಂಬಿಕೊಂಡು ಹೊರಟ ಯುವಕ; ವಿಡಿಯೋ ನೋಡಿದ ಪೊಲೀಸರು ಮಾಡಿದ್ದೇನು?

24 ಸೆಕೆಂಡ್‌ಗಳ ಈ ವಿಡಿಯೋ ಕ್ಲಿಪ್‌ನಲ್ಲಿ ರೈಲ್ವೆ ಉದ್ಯೋಗಿ ಪ್ಲಾಟ್‌ಫಾರ್ಮ್‌ನಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಟ್ರ್ಯಾಕ್‌ನಲ್ಲಿ ಮಲಗಿರುವ ವ್ಯಕ್ತಿಯನ್ನು ನೋಡುತ್ತಾನೆ. ಅಷ್ಟರಲ್ಲೇ ರೈಲು ಪ್ಲಾಟ್​ಫಾರ್ಮ್​ಗೆ ಬರುತ್ತಿರುವುದು ಕಾಣುತ್ತದೆ. ಒಂದುಕ್ಷಣವೂ ತಡಮಾಡದ ಆ ಸಿಬ್ಬಂದಿ ತನ್ನ ಕೈಲಿರುವುದನ್ನು ಪ್ಲಾಟ್​ಫಾರ್ಮ್​ಗೆ ಎಸೆದು, ತನ್ನ ಪ್ರಾಣವನ್ನೂ ಲೆಕ್ಕಿಸದೆ ರೈಲ್ವೆ ಹಳಿಯ ಮೇಲೆ ಜಿಗಿದು ಆ ವ್ಯಕ್ತಿಯನ್ನು ಎತ್ತಿಕೊಳ್ಳುತ್ತಾರೆ. ಸಮಯಕ್ಕೆ ಸರಿಯಾಗಿ ಟ್ರ್ಯಾಕ್‌ನ ಇನ್ನೊಂದು ಬದಿಗೆ ಆತನನ್ನು ಎಳೆದುಕೊಂಡು ಹೋಗುತ್ತಾರೆ. ಆತ ರೈಲ್ವೆ ಟ್ರ್ಯಾಕ್ ದಾಟಿದ ಕೂಡಲೆ ಗೂಡ್ಸ್ ರೈಲು ಅವರನ್ನು ದಾಟಿ ಹೋಗುತ್ತದೆ.

Published On - 8:34 am, Fri, 24 June 22

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್