AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವೇಗವಾಗಿ ಬರುತ್ತಿದ್ದ ರೈಲಿನೆದುರು ಬಿದ್ದಿದ್ದ ವ್ಯಕ್ತಿಯ ಜೀವ ಉಳಿಸಿದ ರೈಲ್ವೆ ಸಿಬ್ಬಂದಿ; ಶಾಕಿಂಗ್ ವಿಡಿಯೋ ವೈರಲ್

ಸತೀಶ್​ ಕುಮಾರ್ ಅವರಂತಹ ಕೆಚ್ಚೆದೆಯ, ಪ್ರಾಮಾಣಿಕ ಸಿಬ್ಬಂದಿಯನ್ನು ಹೊಂದಿರುವುದಕ್ಕೆ ರೈಲ್ವೆ ಇಲಾಖೆ ಬಹಳ ಹೆಮ್ಮೆ ಪಡುತ್ತದೆ ಎಂದು ಟ್ವಿಟ್ಟರ್​​ನಲ್ಲಿ ಈ ವಿಡಿಯೋವನ್ನು ರೈಲ್ವೆ ಸಚಿವಾಲಯ ಹಂಚಿಕೊಂಡಿದೆ.

Viral Video: ವೇಗವಾಗಿ ಬರುತ್ತಿದ್ದ ರೈಲಿನೆದುರು ಬಿದ್ದಿದ್ದ ವ್ಯಕ್ತಿಯ ಜೀವ ಉಳಿಸಿದ ರೈಲ್ವೆ ಸಿಬ್ಬಂದಿ; ಶಾಕಿಂಗ್ ವಿಡಿಯೋ ವೈರಲ್
ವ್ಯಕ್ತಿಯನ್ನು ಕಾಪಾಡಿದ ರೈಲ್ವೆ ಸಿಬ್ಬಂದಿImage Credit source: NDTV
TV9 Web
| Edited By: |

Updated on:Jun 24, 2022 | 8:35 AM

Share

ನವದೆಹಲಿ: ವೇಗವಾಗಿ ಬರುತ್ತಿದ್ದ ರೈಲು (Train) ಇನ್ನೇನು ರೈಲ್ವೆ ಹಳಿಯ ಮೇಲಿದ್ದ ವ್ಯಕ್ತಿಯ ಮೇಲೆ ಹಾದುಹೋಗಬೇಕು ಎನ್ನುವಷ್ಟರಲ್ಲಿ ಓಡಿಬಂದ ರೈಲ್ವೆ ಸಿಬ್ಬಂದಿ ಆ ವ್ಯಕ್ತಿಯನ್ನು ಹಳಿಯಿಂದ ಮೇಲೆತ್ತಿ ಕಾಪಾಡಿದ್ದಾರೆ. ಪ್ಲಾಟ್​ಫಾರ್ಮ್​ ಮೇಲೆ ನಿಂತವರು ಆತಂಕದಿಂದ ನೋಡುತ್ತಿರುವಂತೆಯೇ ತನ್ನ ಪ್ರಾಣವನ್ನೂ ಲೆಕ್ಕಿಸದ ರೈಲ್ವೆ (Indian Railways) ಸಿಬ್ಬಂದಿ ರೈಲಿನ ಎದುರು ಹಾರಿ ಆ ವ್ಯಕ್ತಿಯನ್ನು ರಕ್ಷಿಸಿರುವ ವಿಡಿಯೋ (Video Viral) ಇದೀಗ ವೈರಲ್ ಆಗಿದೆ. ಈ ವಿಡಿಯೋವನ್ನು ರೈಲ್ವೆ ಸಚಿವಾಲಯ ಟ್ವಿಟ್ಟರ್​​ನಲ್ಲಿ ಶೇರ್ ಮಾಡಿಕೊಂಡಿದೆ.

ಸೇವೆ, ಸುರಕ್ಷತಗೆ ನಾವು ಆದ್ಯತೆ ನೀಡುತ್ತೇವೆ. ನಮ್ಮ ಇಲಾಖೆಯ ಧೈರ್ಯಶಾಲಿ ಸಿಬ್ಬಂದಿಯಿಂದಾಗಿ ಒಂದು ಅಮೂಲ್ಯವಾದ ಜೀವ ಉಳಿದಿದೆ. ಸತೀಶ್​ ಕುಮಾರ್ ಅವರಂತಹ ಕೆಚ್ಚೆದೆಯ, ಪ್ರಾಮಾಣಿಕ ಸಿಬ್ಬಂದಿಯನ್ನು ಹೊಂದಿರುವುದಕ್ಕೆ ರೈಲ್ವೆ ಇಲಾಖೆ ಬಹಳ ಹೆಮ್ಮೆ ಪಡುತ್ತದೆ ಎಂದು ಟ್ವಿಟ್ಟರ್​​ನಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ದೃಶ್ಯ ರೈಲ್ವೆ ಪ್ಲಾಟ್​ಫಾರ್ಮ್​ನ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಇದನ್ನೂ ಓದಿ: Viral Video: ಸ್ಕೂಟಿಯಲ್ಲಿ ಕೂರಲೂ ಜಾಗವಿಲ್ಲದಷ್ಟು ಸಾಮಾನು ತುಂಬಿಕೊಂಡು ಹೊರಟ ಯುವಕ; ವಿಡಿಯೋ ನೋಡಿದ ಪೊಲೀಸರು ಮಾಡಿದ್ದೇನು?

24 ಸೆಕೆಂಡ್‌ಗಳ ಈ ವಿಡಿಯೋ ಕ್ಲಿಪ್‌ನಲ್ಲಿ ರೈಲ್ವೆ ಉದ್ಯೋಗಿ ಪ್ಲಾಟ್‌ಫಾರ್ಮ್‌ನಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಟ್ರ್ಯಾಕ್‌ನಲ್ಲಿ ಮಲಗಿರುವ ವ್ಯಕ್ತಿಯನ್ನು ನೋಡುತ್ತಾನೆ. ಅಷ್ಟರಲ್ಲೇ ರೈಲು ಪ್ಲಾಟ್​ಫಾರ್ಮ್​ಗೆ ಬರುತ್ತಿರುವುದು ಕಾಣುತ್ತದೆ. ಒಂದುಕ್ಷಣವೂ ತಡಮಾಡದ ಆ ಸಿಬ್ಬಂದಿ ತನ್ನ ಕೈಲಿರುವುದನ್ನು ಪ್ಲಾಟ್​ಫಾರ್ಮ್​ಗೆ ಎಸೆದು, ತನ್ನ ಪ್ರಾಣವನ್ನೂ ಲೆಕ್ಕಿಸದೆ ರೈಲ್ವೆ ಹಳಿಯ ಮೇಲೆ ಜಿಗಿದು ಆ ವ್ಯಕ್ತಿಯನ್ನು ಎತ್ತಿಕೊಳ್ಳುತ್ತಾರೆ. ಸಮಯಕ್ಕೆ ಸರಿಯಾಗಿ ಟ್ರ್ಯಾಕ್‌ನ ಇನ್ನೊಂದು ಬದಿಗೆ ಆತನನ್ನು ಎಳೆದುಕೊಂಡು ಹೋಗುತ್ತಾರೆ. ಆತ ರೈಲ್ವೆ ಟ್ರ್ಯಾಕ್ ದಾಟಿದ ಕೂಡಲೆ ಗೂಡ್ಸ್ ರೈಲು ಅವರನ್ನು ದಾಟಿ ಹೋಗುತ್ತದೆ.

Published On - 8:34 am, Fri, 24 June 22

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ