ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ರೀಲ್​ ಮಾಡಿದ ಯುವತಿಗೆ ರೂ. 17,000 ದಂಡ

Social Media Influencer : ಸೋಶಿಯಲ್​ ಮೀಡಿಯಾ ಇನ್​ಫ್ಲ್ಯೂಯೆನ್ಸರ್ ವೈಶಾಲಿ ಚೌಧರಿಯ ಫಾಲೋವರ್​ಗಳಲ್ಲಿ ಈ ಪ್ರಕರಣದ ಕುರಿತು ಕುತೂಹಲ ಹೆಚ್ಚಿದೆ. ಇಂದು ಸಂಜೆ ಲೈವ್​ನಲ್ಲಿ ಪೂರ್ತಿ ವಿಷಯ ತಿಳಿಸುತ್ತೇನೆ ಎಂದಿದ್ದಾಳೆ.

ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ರೀಲ್​ ಮಾಡಿದ ಯುವತಿಗೆ ರೂ. 17,000 ದಂಡ
ಹೆದ್ದಾರಿಯ ಮಧ್ಯೆ ಕಾರ್ ಇಲ್ಲಿಸಿ ರೀಲ್​ಗಾಗಿ ವಿಡಿಯೋ ಮಾಡುತ್ತಿದ್ದ ವೈಶಾಲಿ ಚೌಧರಿ
Follow us
| Updated By: ರಶ್ಮಿ ಕಲ್ಲಕಟ್ಟ

Updated on:Jan 23, 2023 | 8:32 PM

Viral News : ರೀಲ್​ಗಾಗಿ ಕಂಟೆಂಟ್​ ಹುಡುಕಾಟದೊಂದಿಗೆ ಅದಕ್ಕೆ ಪೂರಕವಾದ ಜಾಗಗಳ ಹುಡುಕಾಟದಲ್ಲಿಯೂ ಸಾಮಾಜಿಕ ಜಾಲತಾಣಗಳ ಪ್ರಭಾವಿಗಳು ಸದಾ ತೊಡಗಿಕೊಂಡಿರುತ್ತಾರೆ. ಇಂಥ ಹುಡುಕಾಟದ ಮಧ್ಯೆಯೇ ಏನಾದರೂ ಒಂದು ಯಡವಟ್ಟುಗಳು ಸಂಭವಿಸುವುದುಂಟು. ಇದೀಗ ವೈರಲ್ ಆಗಿರುವ ಈ ವಿಡಿಯೋ ಗಮನಿಸಿ. ಈಕೆ ವೈಶಾಲಿ ಚೌಧರಿ ಎಂಬ ಸೋಶಿಯಲ್ ಮೀಡಿಯಾ ಇನ್​ಫ್ಲ್ಯೂಯೆನ್ಸರ್​. ತನ್ನ ಕಾರನ್ನು ಹೆದ್ದಾರಿಯ ಮಧ್ಯದಲ್ಲಿ ನಿಲ್ಲಿಸಿ ವಿಡಿಯೋ ಚಿತ್ರೀಕರಿದ್ದಾಳೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.  ಪರಿಣಾಮವಾಗಿ ರೂ. 17,000 ದಂಡವನ್ನೂ ಆಕೆ ತೆರಬೇಕಾಗಿ ಬಂದಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Vish ♥️ (@vaishali_chaudhary_khutail)

ಲಕ್ಷಾಂತರ ಜನರು ಇಂದು ರೀಲ್ಸ್​ಗಳ ಲೋಕದಲ್ಲಿ ಕಳೆದು ಹೋಗುತ್ತಿದ್ದಾರೆ. ಆದರೆ ಎಲ್ಲ ಸಂದರ್ಭದಲ್ಲಿಯೂ ಬರೀ ಲೈಕ್ಸ್​, ಶೇರ್​ಗಳಷ್ಟೇ ಸಿಗದೆ ನಿಯಮ ಮುರಿದಲ್ಲಿ ಕೆಲವೊಮ್ಮೆ ದಂಡವೂ ಸಿಗುತ್ತದೆ ಎನ್ನುವುದನ್ನು ಮಾತ್ರ ಮರೆಯಬಾರದು. ಇತ್ತೀಚೆಗೆ ಉತ್ತರ ಪ್ರದೇಶದ ಗಾಝಿಯಾಬಾದ್​ನ ಇನ್​ಸ್ಟಾಗ್ರಾಂನ ಪ್ರಭಾವಿ ವೈಶಾಲಿ ಚೌಧರಿ ರೀಲು ಮಾಡಿ ದಂಡ ತೆರಬೇಕಾದ ಅವಸ್ಥೆಗೆ ಸಿಲುಕಿಕೊಂಡಿದ್ದಾಳೆ. ರಸ್ತೆ ಸುರಕ್ಷತೆ ನಿಯಮಗಳ ಉಲ್ಲಂಘನೆಗಾಗಿ ಈಕೆಗೆ ಗಾಝಿಯಾಬಾದ್​ ಪೊಲೀಸರು ದಂಡ ವಿಧಿಸಿದ್ದಾರೆ.

ಇನ್​ಸ್ಟಾಗ್ರಾಂನಲ್ಲಿ 6.5 ಲಕ್ಷಕ್ಕಿಂತಲೂ ಹೆಚ್ಚು ಫಾಲೋವರ್ಸ್​ ಹೊಂದಿದ ವೈಶಾಲಿ ಚೌಧರಿ ಹೆದ್ದಾರಿಯ ಮಧ್ಯೆ ಕಾರು ನಿಲ್ಲಿಸಿಕೊಂಡು ವಿವಿಧ ಭಂಗಿಗಳಲ್ಲಿ ವಿಡಿಯೋ ಶೂಟ್ ಮಾಡಿ ಇನ್​ಸ್ಟಾಗ್ರಾಂಗೆ ಅಪ್​ಲೋಡ್ ಮಾಡಿದ್ದಾಳೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಕ್ರಮ ಕೈಗೊಂಡಿದ್ಧಾರೆ. ಈ ಘಟನೆ ಸಾಹಿಬಾಬಾದ್​ನಲ್ಲಿ ನಡೆದಿದೆ.

ಒಳ್ಳೆಯದು ಮಾಡಿದರೂ ಇಡೀ ಜಗತ್ತಿಗೆ ಗೊತ್ತಾಗುತ್ತದೆ. ಎಡವಟ್ಟು ಮಾಡಿದರೂ ಇಡೀ ಜಗತ್ತಿಗೆ ಗೊತ್ತಾಗುತ್ತದೆ. ಏಕೆಂದರೆ ಸಾಮಾಜಿಕ ಜಾಲತಾಣಕ್ಕೆ ಇರುವುದು ಒಂದೇ ಬಾಗಿಲು!

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:22 pm, Mon, 23 January 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ