AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ರೀಲ್​ ಮಾಡಿದ ಯುವತಿಗೆ ರೂ. 17,000 ದಂಡ

Social Media Influencer : ಸೋಶಿಯಲ್​ ಮೀಡಿಯಾ ಇನ್​ಫ್ಲ್ಯೂಯೆನ್ಸರ್ ವೈಶಾಲಿ ಚೌಧರಿಯ ಫಾಲೋವರ್​ಗಳಲ್ಲಿ ಈ ಪ್ರಕರಣದ ಕುರಿತು ಕುತೂಹಲ ಹೆಚ್ಚಿದೆ. ಇಂದು ಸಂಜೆ ಲೈವ್​ನಲ್ಲಿ ಪೂರ್ತಿ ವಿಷಯ ತಿಳಿಸುತ್ತೇನೆ ಎಂದಿದ್ದಾಳೆ.

ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ರೀಲ್​ ಮಾಡಿದ ಯುವತಿಗೆ ರೂ. 17,000 ದಂಡ
ಹೆದ್ದಾರಿಯ ಮಧ್ಯೆ ಕಾರ್ ಇಲ್ಲಿಸಿ ರೀಲ್​ಗಾಗಿ ವಿಡಿಯೋ ಮಾಡುತ್ತಿದ್ದ ವೈಶಾಲಿ ಚೌಧರಿ
TV9 Web
| Edited By: |

Updated on:Jan 23, 2023 | 8:32 PM

Share

Viral News : ರೀಲ್​ಗಾಗಿ ಕಂಟೆಂಟ್​ ಹುಡುಕಾಟದೊಂದಿಗೆ ಅದಕ್ಕೆ ಪೂರಕವಾದ ಜಾಗಗಳ ಹುಡುಕಾಟದಲ್ಲಿಯೂ ಸಾಮಾಜಿಕ ಜಾಲತಾಣಗಳ ಪ್ರಭಾವಿಗಳು ಸದಾ ತೊಡಗಿಕೊಂಡಿರುತ್ತಾರೆ. ಇಂಥ ಹುಡುಕಾಟದ ಮಧ್ಯೆಯೇ ಏನಾದರೂ ಒಂದು ಯಡವಟ್ಟುಗಳು ಸಂಭವಿಸುವುದುಂಟು. ಇದೀಗ ವೈರಲ್ ಆಗಿರುವ ಈ ವಿಡಿಯೋ ಗಮನಿಸಿ. ಈಕೆ ವೈಶಾಲಿ ಚೌಧರಿ ಎಂಬ ಸೋಶಿಯಲ್ ಮೀಡಿಯಾ ಇನ್​ಫ್ಲ್ಯೂಯೆನ್ಸರ್​. ತನ್ನ ಕಾರನ್ನು ಹೆದ್ದಾರಿಯ ಮಧ್ಯದಲ್ಲಿ ನಿಲ್ಲಿಸಿ ವಿಡಿಯೋ ಚಿತ್ರೀಕರಿದ್ದಾಳೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.  ಪರಿಣಾಮವಾಗಿ ರೂ. 17,000 ದಂಡವನ್ನೂ ಆಕೆ ತೆರಬೇಕಾಗಿ ಬಂದಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Vish ♥️ (@vaishali_chaudhary_khutail)

ಲಕ್ಷಾಂತರ ಜನರು ಇಂದು ರೀಲ್ಸ್​ಗಳ ಲೋಕದಲ್ಲಿ ಕಳೆದು ಹೋಗುತ್ತಿದ್ದಾರೆ. ಆದರೆ ಎಲ್ಲ ಸಂದರ್ಭದಲ್ಲಿಯೂ ಬರೀ ಲೈಕ್ಸ್​, ಶೇರ್​ಗಳಷ್ಟೇ ಸಿಗದೆ ನಿಯಮ ಮುರಿದಲ್ಲಿ ಕೆಲವೊಮ್ಮೆ ದಂಡವೂ ಸಿಗುತ್ತದೆ ಎನ್ನುವುದನ್ನು ಮಾತ್ರ ಮರೆಯಬಾರದು. ಇತ್ತೀಚೆಗೆ ಉತ್ತರ ಪ್ರದೇಶದ ಗಾಝಿಯಾಬಾದ್​ನ ಇನ್​ಸ್ಟಾಗ್ರಾಂನ ಪ್ರಭಾವಿ ವೈಶಾಲಿ ಚೌಧರಿ ರೀಲು ಮಾಡಿ ದಂಡ ತೆರಬೇಕಾದ ಅವಸ್ಥೆಗೆ ಸಿಲುಕಿಕೊಂಡಿದ್ದಾಳೆ. ರಸ್ತೆ ಸುರಕ್ಷತೆ ನಿಯಮಗಳ ಉಲ್ಲಂಘನೆಗಾಗಿ ಈಕೆಗೆ ಗಾಝಿಯಾಬಾದ್​ ಪೊಲೀಸರು ದಂಡ ವಿಧಿಸಿದ್ದಾರೆ.

ಇನ್​ಸ್ಟಾಗ್ರಾಂನಲ್ಲಿ 6.5 ಲಕ್ಷಕ್ಕಿಂತಲೂ ಹೆಚ್ಚು ಫಾಲೋವರ್ಸ್​ ಹೊಂದಿದ ವೈಶಾಲಿ ಚೌಧರಿ ಹೆದ್ದಾರಿಯ ಮಧ್ಯೆ ಕಾರು ನಿಲ್ಲಿಸಿಕೊಂಡು ವಿವಿಧ ಭಂಗಿಗಳಲ್ಲಿ ವಿಡಿಯೋ ಶೂಟ್ ಮಾಡಿ ಇನ್​ಸ್ಟಾಗ್ರಾಂಗೆ ಅಪ್​ಲೋಡ್ ಮಾಡಿದ್ದಾಳೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಕ್ರಮ ಕೈಗೊಂಡಿದ್ಧಾರೆ. ಈ ಘಟನೆ ಸಾಹಿಬಾಬಾದ್​ನಲ್ಲಿ ನಡೆದಿದೆ.

ಒಳ್ಳೆಯದು ಮಾಡಿದರೂ ಇಡೀ ಜಗತ್ತಿಗೆ ಗೊತ್ತಾಗುತ್ತದೆ. ಎಡವಟ್ಟು ಮಾಡಿದರೂ ಇಡೀ ಜಗತ್ತಿಗೆ ಗೊತ್ತಾಗುತ್ತದೆ. ಏಕೆಂದರೆ ಸಾಮಾಜಿಕ ಜಾಲತಾಣಕ್ಕೆ ಇರುವುದು ಒಂದೇ ಬಾಗಿಲು!

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:22 pm, Mon, 23 January 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್