AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಕ್ಕಳಿಗೆ ಬಿಸ್ಕತ್ತು ಕೊಡುವ ಮುನ್ನ ಎಚ್ಚರ, ಬೌರ್ಬನ್ ಬಿಸ್ಕತ್ತಿನಲ್ಲಿ ಕಬ್ಬಿಣದ ತಂತಿ ಪತ್ತೆ

ಮಕ್ಕಳು ಇಷ್ಟ ಪಟ್ಟು ತಿನ್ನುವ ಬಿಸ್ಕತ್ತುನಲ್ಲಿ ಕಬ್ಬಿಣದ ತಂತಿ ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ "ಬಿಸ್ಕತ್ತುಗಳು ಮತ್ತು ಚಾಕೊಲೇಟ್‌ಗಳಂತಹ ಉತ್ಪನ್ನಗಳನ್ನು ಮಕ್ಕಳು ಇಷ್ಟಪಟ್ಟು ಸೇವಿಸುತ್ತಾರೆ ಮತ್ತು ಈ ಉತ್ಪನ್ನಗಳಲ್ಲಿ ಆಹಾರ ಸುರಕ್ಷತೆಯ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು" ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:Oct 11, 2024 | 1:17 PM

Share

ತೆಲಂಗಾಣ: ಬ್ರಿಟಾನಿಯಾ ಬೌರ್ಬನ್ ಬಿಸ್ಕತ್‌ನೊಳಗೆ ತೆಳುವಾದ ಕಬ್ಬಿಣದ ತಂತಿಯೊಂದು ಕಂಡು ಬಂದಿರುವ ಆಘಾತಕಾರಿ ಘಟನೆ ತೆಲಂಗಾಣದ ಕಾಮರೆಡ್ಡಿಯ ಹಳ್ಳಿಯೊಂದರಲ್ಲಿ ನಡೆದಿದೆ. ಈ ಘಟನೆಯನ್ನು ವ್ಯಕ್ತಿಯೊಬ್ಬರು ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬಿಸ್ಕೆಟ್‌ನಲ್ಲಿ ತೆಳುವಾದ ತಂತಿಯೊಂದಿರುವುದು ವಿಡಿಯೋದಲ್ಲಿ ಕಾಣಬಹುದು.

ಕಾಮರೆಡ್ಡಿ ಜಿಲ್ಲೆಯ ದೇವುನಿಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವೈರಲ್ ಆಗಿರುವ ವಿಡಿಯೋದಲ್ಲಿರುವ ವ್ಯಕ್ತಿಯನ್ನು ಹನುಮಾನ್ ರೆಡ್ಡಿ ಎಂದು ಗುರುತಿಸಲಾಗಿದೆ. ತಾನು ಸ್ಥಳೀಯ ಅಂಗಡಿಯೊಂದರಿಂದ ಮಕ್ಕಳಿಗಾಗಿ ಬೌರ್ಬನ್ ಬಿಸ್ಕತ್ತು ಖರೀದಿಸಿ ತಂದಿದೆ. ಆದರೆ ಮಕ್ಕಳು ತಿನ್ನುವಾಗ ಬಿಸ್ಕತ್ತಿನಲ್ಲಿ ತೆಳುವಾದ ಕಬ್ಬಿಣದ ತಂತಿಯೊಂದು ಇರುವುದು ಕಂಡುಬಂದಿದೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮನೆಕೆಲಸದವರಿಗೆ ದುಬಾರಿ ಬೆಲೆಯ ಐಫೋನ್‌ ಗಿಫ್ಟ್‌ ಕೊಟ್ಟ ದಂಪತಿ; ವಿಡಿಯೋ ವೈರಲ್‌

ಆಘಾತಕ್ಕೊಳಗಾದ ವ್ಯಕ್ತಿ, ತಕ್ಷಣವೇ ಅದನ್ನು ವೀಡಿಯೊ ತೆಗೆದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಶೇರ್ ಆಗುತ್ತಿದೆ. ಬಿಸ್ಕತ್ತುಗಳು ಮತ್ತು ಚಾಕೊಲೇಟ್‌ಗಳಂತಹ ಉತ್ಪನ್ನಗಳನ್ನು ಮಕ್ಕಳು ದೊಡ್ಡ ಪ್ರಮಾಣದಲ್ಲಿ ಸೇವಿಸುತ್ತಾರೆ ಮತ್ತು ಈ ಉತ್ಪನ್ನಗಳಲ್ಲಿ ಆಹಾರ ಸುರಕ್ಷತೆಯನ್ನು ಕಾಳಜಿ ವಹಿಸಬೇಕು ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:16 pm, Fri, 11 October 24

Follow Us
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಬೈ ಎಲೆಕ್ಷನ್ ಅಖಾಡದಲ್ಲಿಂದು ಸಿಎಂ ಮತಬೇಟೆ!
ಬೈ ಎಲೆಕ್ಷನ್ ಅಖಾಡದಲ್ಲಿಂದು ಸಿಎಂ ಮತಬೇಟೆ!