AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಿಸಿ ಎಣ್ಣೆಯೊಳಗೆ ಕೈ ಹಾಕಿ ಪಕೋಡ ಮಾಡಿದ ವ್ಯಾಪಾರಿ; ಶಾಕಿಂಗ್ ವಿಡಿಯೋ ಇಲ್ಲಿದೆ

ಮುಂಬೈನ ಫುಡ್ ಬ್ಲಾಗರ್ ಒಬ್ಬರು ಈ ವೀಡಿಯೊವನ್ನು ರೆಕಾರ್ಡ್ ಮಾಡಿ ಅದನ್ನು Instagramನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಸಣ್ಣ ವಿಡಿಯೋ ಕ್ಲಿಪ್ 1 ಮಿಲಿಯನ್ ಜನರಿಂದ ವೀಕ್ಷಿಸಲ್ಪಟ್ಟಿದೆ.

Viral Video: ಬಿಸಿ ಎಣ್ಣೆಯೊಳಗೆ ಕೈ ಹಾಕಿ ಪಕೋಡ ಮಾಡಿದ ವ್ಯಾಪಾರಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬಿಸಿ ಎಣ್ಣೆಗೆ ಕೈ ಹಾಕಿ ಪಕೋಡ ಮಾಡಿದ ವ್ಯಾಪಾರಿ
TV9 Web
| Edited By: |

Updated on: Dec 31, 2021 | 7:06 PM

Share

ಅಡುಗೆ ಮಾಡುವಾಗ ಬಿಸಿಯಾದ ಪಾತ್ರೆ ಅಥವಾ ಬಿಸಿ ಎಣ್ಣೆ ತಾಗಿದರೇ ಚರ್ಮವೆಲ್ಲ ಕೆಂಪಾಗಿ ಉರಿಯತೊಡಗುತ್ತದೆ. ಅಂಥದ್ದರಲ್ಲಿ ಇಲ್ಲೊಬ್ಬ ಬೀದಿ ಬದಿಯ ವ್ಯಾಪಾರಿ ಬಾಣಲೆಯಲ್ಲಿ ಕುದಿಯುತ್ತಿರುವ ಎಣ್ಣೆಗೆ ಕೈ ಹಾಕಿ ಪಕೋಡವನ್ನು ತೆಗೆದಿದ್ದಾನೆ. ಆತ ಪಕೋಡ ಮಾಡಲು ಸೌಟಿನ ಬದಲು ಕೈಯನ್ನೇ ಬಳಸುವ ವಿಡಿಯೋ ಭಾರೀ ವೈರಲ್ ಆಗಿದೆ. ಈರುಳ್ಳಿ ಪಕೋಡವನ್ನು ಕರಿಯುವಾಗ ಕಾದ ಎಣ್ಣೆಯಲ್ಲಿ ಕೈ ಅದ್ದಿರುವ ಬೀದಿ ತಿನಿಸು ವ್ಯಾಪಾರಿಯ ವಿಡಿಯೋ ನೋಡಿ ಸಾಮಾಜಿಕ ಜಾಲತಾಣ ಬಳಕೆದಾರರು ಶಾಕ್ ಆಗಿದ್ದಾರೆ.

ಮುಂಬೈನ ಫುಡ್ ಬ್ಲಾಗರ್ ಒಬ್ಬರು ಈ ವೀಡಿಯೊವನ್ನು ರೆಕಾರ್ಡ್ ಮಾಡಿ ಅದನ್ನು Instagramನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಸಣ್ಣ ವಿಡಿಯೋ ಕ್ಲಿಪ್ 1 ಮಿಲಿಯನ್ ಜನರಿಂದ ವೀಕ್ಷಿಸಲ್ಪಟ್ಟಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ. ಜೈಪುರದ ಕಿಸಾನ್ ಪಕೋಡ್ ವಾಲಾ ಎಂಬ ಹೆಸರಿನ ರಸ್ತೆಬದಿಯ ಸ್ಟಾಲ್‌ನಲ್ಲಿ ವ್ಯಾಪಾರಿಯೊಬ್ಬರು ಬಾಣಲೆಯಲ್ಲಿ ಪಕೋಡವನ್ನು ಕರಿಯುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು.

ಕಾದ ಎಣ್ಣೆಯಲ್ಲಿ ಪಕೋಡ ಹಾಕಿ ಅದರಲ್ಲಿ ಕೈ ಅದ್ದಿರುವ ವ್ಯಾಪಾರಿಯ ಕೈಗಳಿಗೆ ಯಾವುದೇ ತೊಂದರೆಯೂ ಆಗಿಲ್ಲ ಎನ್ನುವುದು ಅಚ್ಚರಿಯ ಸಂಗತಿ. ವಿಡಿಯೋದ ಕೊನೆಯಲ್ಲಿ ಆ ಫುಡ್ ಬ್ಲಾಗರ್ ಪಕೋಡಾಗಳನ್ನು ಸವಿಯುವುದನ್ನು ಕಾಣಬಹುದು.

ಇದನ್ನೂ ಓದಿ: Viral Video: ಕ್ರಿಸ್​ಮಸ್​ ಆಚರಿಸಿದ್ದೇಕೆಂದು ಗಲಾಟೆ ಮಾಡಿದ ಬಜರಂಗದಳದವರಿಗೆ ಬಿಸಿ ಮುಟ್ಟಿಸಿದ ಮಹಿಳೆ; ವಿಡಿಯೋ ವೈರಲ್

Viral Video: ಉದ್ದಿನ ದೋಸೆ, ನೀರ್ ದೋಸೆಯೆಲ್ಲ ಹಳೇದಾಯ್ತು; ಫ್ರೂಟ್ ದೋಸೆ ಮಾಡೋದು ಹೇಗಂತ ಗೊತ್ತಾ?

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ