AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಾಸ್ಕ್ ಧರಿಸದಿದ್ದಕ್ಕಾಗಿ ಸೈನಿಕನನ್ನು ಥಳಿಸಿದ ಪೊಲೀಸರು; ಮೂವರು ಅಮಾನತು

ಸೈನಿಕ ತನ್ನ ಬೈಕಿನಲ್ಲಿ ರಸ್ತೆಯಲ್ಲಿ ಸಾಗುತ್ತಿದ್ದಾಗ ಪೊಲೀಸರು ಆತನನ್ನು ತಡೆದಿದ್ದಾರೆ. ಓರ್ವ ಪೊಲೀಸ್ ಬೈಕಿನ ಕೀಲಿಯನ್ನು ಕಸಿದುಕೊಂಡಿದ್ದಾರೆ. ಇದರಿಂದ ಕೋಪಗೊಂಡ ಸೈನಿಕ ಯಾದವ್ ಅವರು ಸರಿಯಾಗಿ ವರ್ತಿಸುವಂತೆ ಪೊಲೀಸರಿಗೆ ಎಚ್ಚರಿಸಿದ್ದಾರೆ.

Viral Video: ಮಾಸ್ಕ್ ಧರಿಸದಿದ್ದಕ್ಕಾಗಿ ಸೈನಿಕನನ್ನು ಥಳಿಸಿದ ಪೊಲೀಸರು; ಮೂವರು ಅಮಾನತು
ಮಾಸ್ಕ್ ಧರಿಸದಿದ್ದಕ್ಕಾಗಿ ಸೈನಿಕನನ್ನು ಥಳಿಸಿದ ಪೊಲೀಸರು
Follow us
TV9 Web
| Updated By: shruti hegde

Updated on:Sep 03, 2021 | 10:16 AM

ಮಾಸ್ಕ್​ ಧರಿಸದ ಕಾರಣಕ್ಕಾಗಿ ಪೊಲೀಸರ ಗುಂಪು, ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸೈನಿಕನಿಗೆ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಘಟನೆ ಜಾರ್ಖಂಡ್​ನ ಚತ್ರ ಎಂಬ ಜಿಲ್ಲೆಯಲ್ಲಿ ನಡೆದಿತ್ತು. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಸೈನಿಕ ಪವನ್ ಕುಮಾರ್ ಯಾದವ್ ಎಂದು ಗುರುತಿಸಲಾಗಿದೆ. ಚತ್ರಾದ ಮಾರುಕಟ್ಟೆಯಲ್ಲಿ ಪೊಲೀಸರು ಕರ್ತವ್ಯದಲ್ಲಿದ್ದರು. ಆಸಮಯದಲ್ಲಿ ಮಾಸ್ಕ ಧರಿಸದ ಯಾದವ್​ ಅವರನ್ನು ನೋಡಿದ್ದಾರೆ. ಆತನ ಮೇಲೆ ಕ್ರಮ ಕೈಗೊಂಡು ಥಳಿಸಿದ್ದಾರೆ. ಅದೊಂದೇ ಅಲ್ಲದೇ ಲಾಠಿ ಪ್ರಹಾರ ಮಾಡಿ ಕಾಲಿನಿಂದ ಒದ್ದಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಆ ಸಂದರ್ಭದಲ್ಲಿ ಪೊಲೀಸರು ಸಹ ಮಾಸ್ಕ್ ಧರಿಸಿರಲಿಲ್ಲ ಎಂಬುದು ವಿಡಿಯೋದಲ್ಲಿ ಕಂಡು ಬಂದಿದೆ.

ಸೈನಿಕ ತನ್ನ ಬೈಕಿನಲ್ಲಿ ರಸ್ತೆಯಲ್ಲಿ ಸಾಗುತ್ತಿದ್ದಾಗ ಪೊಲೀಸರು ಆತನನ್ನು ತಡೆದಿದ್ದಾರೆ. ಓರ್ವ ಪೊಲೀಸ್ ಬೈಕಿನ ಕೀಲಿಯನ್ನು ಕಸಿದುಕೊಂಡಿದ್ದಾರೆ. ಇದರಿಂದ ಕೋಪಗೊಂಡ ಸೈನಿಕ ಯಾದವ್ ಅವರು, ಸರಿಯಾಗಿ ವರ್ತಿಸುವಂತೆ ಪೊಲೀಸರಿಗೆ ಎಚ್ಚರಿಸಿದ್ದಾರೆ. ಇಬ್ಬರ ನಡುವೆ ವಾಗ್ವಾದ ನಡೆದಿದೆ. ಕೊನೆಗೆ ಪೊಲೀಸರು ಸೈನಿಕನನ್ನು ಥಳಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಒತ್ತಾಯಿಸಿದ್ದಾರೆ. ಸ್ಥಳೀಯ ಪೊಲೀಸ್ ಕ್ರಮದ ವಿರುದ್ಧ ಪ್ರತಿಭಟನೆ ಆರಂಭಗೊಂಡಿದೆ. ಘಟನೆ ಮಯೂರ್​ಹಂಡ್​ ಪೊಲೀಸ್ ಠಾಣೆಯಯಲ್ಲಿ ಪ್ರಕರಣ ದಾಖಲಾಗಿದೆ.

ನಾನು ಓರ್ವ ಹವಾಲ್ದಾರ ಮತ್ತು ಇಬ್ಬರು ಕಾನ್​ಸ್ಟೇಬಲ್​ರನ್ನು ಅಮಾನತುಗೊಳಿಸಿದ್ದೇನೆ. ಸೈನಿಕ ತನ್ನ ಬೈಕನಲ್ಲಿ ಮೂವರನ್ನು ಕುಳಿಸಿಕೊಂಡು ಸವಾರಿ ಮಾಡುತ್ತಿದ್ದನು. ಜತೆಗೆ ಆತ ಮಾಸ್ಕ್ ಕೂಡಾ ಧರಿಸಿರಲಿಲ್ಲ ಎಂಬುದು ನನ್ನ ಗಮನಕ್ಕೆ ಬಂದಿದೆ. ಪೊಲೀಸರು ಆತನನ್ನು ತಡೆದಾಗ ಅಸಭ್ಯವಾಗಿ ವರ್ತಿಸಿದ್ದಾರೆ ಹಾಗಾಗಿ ಪೊಲೀಸರು ಅವರ ಮೇಲೆ ಕೈ ಎತ್ತಿದ್ದಾರೆ ಎಂದು ಚತ್ರಾ ಎಸ್​ಪಿ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್​ ವರದಿ ಮಾಡಿದೆ.

ಇದನ್ನೂ ಓದಿ:

ಯಾದಗಿರಿ: ಪತ್ನಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಕಾನ್ಸ್​ಟೇಬಲ್​ಗೆ ಥಳಿತ

ಮಾಟ-ಮಂತ್ರ ಎಂದು ಜನರಿಗೆ ಮೋಸ ಮಾಡುತ್ತಿದ್ದ ಡೋಂಗಿ ಬಾಬಾನಿಗೆ ಸ್ಥಳೀಯರಿಂದ ಹಿಗ್ಗಾಮುಗ್ಗಾ ಥಳಿತ

(Viral Video jawan brutally thrashed by police for not wearing mask in jharkhand chatra)

Published On - 10:16 am, Fri, 3 September 21

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ