AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hurricane : ‘ಮೈಕ್ರೋಫೋನಿಗೆ ಕಾಂಡೋಮ್​ ಹಾಕಿ ವರದಿ ಮಾಡುತ್ತಿದ್ದೇನೆ, ನಿಮ್ಮ ಊಹೆ ಸರಿ ಇದೆ’

Florida : ಇಯಾನ್​ ಚಂಡಮಾರುತದಿಂದ ತತ್ತರಿಸಿರುವ ಫ್ಲೊರಿಡಾದ ಸ್ಥಳಗಳಲ್ಲಿ ವರದಿಗಾರಿಕೆಗೆ ತೆರಳಿರುವ NBC2 ಸುದ್ದಿವಾಹಿನಿಯ ಪತ್ರಕರ್ತೆ ಕೈಲಾ ಗೇಲರ್​ಳ ಟ್ವೀಟ್​ಗೆ​ ನೆಟ್ಟಿಗರು ತೀವ್ರ ಕುತೂಹಲ ವ್ಯಕ್ತಪಡಿಸಿದ್ದಾರೆ.

Hurricane : ‘ಮೈಕ್ರೋಫೋನಿಗೆ ಕಾಂಡೋಮ್​ ಹಾಕಿ ವರದಿ ಮಾಡುತ್ತಿದ್ದೇನೆ, ನಿಮ್ಮ ಊಹೆ ಸರಿ ಇದೆ’
ಮೈಕ್​ ಅನ್ನು ಮಳೆಯಿಂದ ರಕ್ಷಿಸಲು ಅದಕ್ಕೆ ಕಾಂಡೋಮ್ ಹಾಕಿರುವ ಪತ್ರಕರ್ತೆ
TV9 Web
| Edited By: |

Updated on:Oct 03, 2022 | 6:02 PM

Share

Viral : ಚಂಡಮಾರುತದಿಂದಾಗಿ ಫ್ಲೊರಿಡಾದ ನಿವಾಸಿಗಳ ಜನಜೀವನವು ಛಿದ್ರಗೊಂಡು ನಾಲ್ಕು ದಿನಗಳಾದರೂ ಇನ್ನೂ ಸಹಜ ಸ್ಥಿತಿಗೆ ಮರಳುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ನೂರಾರು ಜನರು ಮರಣವನ್ನಪ್ಪಿದ್ದಾರೆ. ಲಕ್ಷಾಂತರ ಜನರು ವಿದ್ಯುತ್​ ಮತ್ತು ಮೂಲಸೌಲಭ್ಯಗಳಿಲ್ಲದೆ ವ್ಯಾಪಾರೋದ್ಯಮವನ್ನು ಸ್ಥಗಿತಗೊಳಿಸಿ ಅತಂತ್ರರಾಗಿದ್ದಾರೆ. ಪರಿಸ್ಥಿತಿ ಇಷ್ಟು ಗಂಭೀರವಿರುವಾಗ ಪತ್ರಕರ್ತರಿಗಂತೂ ಎಡೆಬಿಡದ ಕೆಲಸ. ಪ್ರಕೃತಿವಿಕೋಪ ಉಂಟಾದ ಸ್ಥಳಗಳಲ್ಲಿ ವರದಿಗಾರಿಕೆ ಮಾಡುವುದೆಂದರೆ ಅದು ದೊಡ್ಡ ಸಾಹಸವೇ. ಕ್ಷಣಕ್ಷಣಕ್ಕೂ ಮೈಯೆಲ್ಲ ಕಣ್ಣಾಗಿರಬೇಕು. ಎದುರಾಗುವ ಅಡೆತಡೆಗಳನ್ನು ನಿರ್ಭಿಡೆಯಿಂದ, ಪ್ರಜ್ಞೆಯಿಂದ, ಚಾಣಾಕ್ಷತನದಿಂದ ನಿರ್ವಹಿಸಿ ಕರ್ತವ್ಯಕ್ಕೆ ತೊಡಕುಂಟಾಗದಂತೆ ನಿಭಾಯಿಸಬೇಕು.

ಇದೀಗ NBC2 ಸುದ್ದಿವಾಹಿನಿಯ ಪತ್ರಕರ್ತೆ ಕೈಲಾ ಗೇಲರ್ ಚಂಡಮಾರುತ ಅಪ್ಪಳಿಸಿದ ಸ್ಥಳಗಳಲ್ಲಿ ವರದಿಗಾರಿಕೆಗೆ ತೆರಳಿದ್ದಾರೆ. ಮಳೆಗಾಳಿಯಿಂದ ತಮ್ಮ ಮೈಕ್ರೋಫೋನ್​ ರಕ್ಷಿಸಿಕೊಳ್ಳಲು ಕಂಡುಕೊಂಡ ಉಪಾಯದಿಂದ ಇದೀಗ ಅವರು ಸುದ್ದಿಯಲ್ಲಿದ್ದಾರೆ. ಮೈಕ್ರೋಫೋನ್​ಗೆ ಕಾಂಡೋಮ್ ಹಾಕಿ ವರದಿಗಾರಿಕೆ ಮಾಡುತ್ತಿರುವ ಅವರ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

‘ನನ್ನ ಮೈಕ್ರೋಫೋನ್​ಗೆ ಹಾಕಿರುವುದು ಏನು ಎಂದು ಬಹಳಷ್ಟು ಜನ ಕುತೂಹಲದಿಂದ ಕೇಳುತ್ತಿದ್ದೀರಿ. ನೀವೇನು ಮನಸಿನಲ್ಲಿ ಯೋಚಿಸುತ್ತಿದ್ದೀರೋ ಅದು ಅದೇ ಆಗಿದೆ. ಹೌದು ಇದು ಕಾಂಡೋಮ್​. ಇಲ್ಲಿ ಎಡೆಬಿಡದೆ ಗಾಳಿ ಮಳೆ ಸುರಿಯುತ್ತಿದೆ. ಹಾಗಾಗಿ ಈ ಉಪಾಯವನ್ನು ಕಂಡುಕೊಂಡು ಕೆಲಸ ಮಾಡುತ್ತಿದ್ದೇನೆ’ ಎಂದಿದ್ದಾಳೆ.

ಈ ಟ್ವೀಟ್  66,000ಕ್ಕೂ ಹೆಚ್ಚು ಜನರನ್ನು ತಲುಪಿದೆ.

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 5:48 pm, Mon, 3 October 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು