AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಲಗಿದ್ದ ಮಹಿಳೆ ಮೇಲೆ ಹೆಡೆಬಿಚ್ಚಿ ನಿಂತ ನಾಗರಹಾವು, ಕಾಪಾಡು ಶ್ರೀಶೈಲ ಮಲ್ಲಯ್ಯ ಅಂತಾ ಪ್ರಾರ್ಥಿಸಿದ ಮಹಿಳೆ

ಜಮೀನಿನಲ್ಲಿ ವಿಶ್ರಾಂತಿ ತೆಗೆದುಕೊಳ್ಳಲೆಂದು ಮಲಗಿದ್ದ ಮಹಿಳೆಯ ಮೇಲೆ ನಾಗರಹಾವೊಂದು ಹೆಡೆಬಿಚ್ಚಿ ನಿಂತಿಕೊಂಡಿದೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral Video: ಮಲಗಿದ್ದ ಮಹಿಳೆ ಮೇಲೆ ಹೆಡೆಬಿಚ್ಚಿ ನಿಂತ ನಾಗರಹಾವು, ಕಾಪಾಡು ಶ್ರೀಶೈಲ ಮಲ್ಲಯ್ಯ ಅಂತಾ ಪ್ರಾರ್ಥಿಸಿದ ಮಹಿಳೆ
ಮಲಗಿದ್ದ ಮಹಿಳೆ ಮೇಲೆ ಹೆಡೆ ಬಿಚ್ಚಿ ನಿಂತ ನಾಗರಹಾವು
TV9 Web
| Edited By: |

Updated on:Aug 27, 2022 | 12:13 PM

Share

ಕಲಬುರಗಿ: ವಿಶ್ರಾಂತಿ ಪಡೆಯಲೆಂದು ಜಮೀನಿನಲ್ಲಿ ಮಲಗಿದ್ದ ಮಹಿಳೆ ಮೇಲೆ ನಾಗರಹಾವೊಂದು ಹೆಡೆಬಿಚ್ಚಿ ನಿಂತ ಘಟನೆಯೊಂದು ಜಿಲ್ಲೆಯ ಅಫಜಲಪುರ ತಾಲೂಕಿನ ಮಲ್ಲಾಬಾದ್ ಗ್ರಾಮದಲ್ಲಿ ನಡೆದಿದೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಭಯಬೀತಿಗೊಂಡಿದ್ದಾರೆ. ಗ್ರಾಮದ ಭಾಗಮ್ಮ ಬಡದಾಳ್ ಎಂಬುವರು ತಮ್ಮ ಜಮೀನಿನಲ್ಲಿ ಮಲಗಿದ್ದಾಗ ಮೈಮೇಲೆ ಬಂದ ನಾಗರಹಾವು ಹೆಡೆಎತ್ತಿ ನಿಂತುಕೊಂಡಿದೆ. ಈ ವೇಳೆ ಪ್ರಾಣ ಭೀತಿ ಅನುಭವಿಸಿದ ಮಹಿಳೆ ಕೈ ಮುಗಿದು ದೇವರಲ್ಲಿ ಬೇಡಿಕೊಂಡಿದ್ದಾರೆ.

ವೈರಲ್ ವಿಡಿಯೋದಲ್ಲಿ ಇರುವಂತೆ, ಭಾಗಮ್ಮ ಅವರ ಜಮೀನಿನಲ್ಲಿ ವಿಶ್ರಾಂತಿ ಪಡೆಯಲೆಂದೇ ಒಂದು ಮಲಗುವ ಮಂಚ ಇದೆ. ಇದರಲ್ಲಿ ಮಲಗಿಕೊಂಡಿದ್ದ ಭಾಗಮನ್ನ ಮೇಲೆ ನಾಗರಹಾವೊಂದು ಹತ್ತಿ ಹೆಡೆಬಿಚ್ಚಿ ನಿಂತುಕೊಂಡಿದೆ. ಇದನ್ನು ತಿಳಿದ ಭಾಗಮ್ಮ ಯಾವುದೇ ಆತುರದ ನಿರ್ಧಾರಗಳನ್ನು ಕೈಗೊಳ್ಳದೆ ಪ್ರಾಭ ಭಯದಿಂದಲೇ “ಕಾಪಾಡು ಶ್ರೀಶೈಲ ಮಲ್ಲಯ್ಯ” ಎಂದು ಕೈಗಳನ್ನು ಮುಗಿದು ಪ್ರಾರ್ಥಿಸಿದ್ದಾರೆ. ಇದಾಗಿ ಕೆಲಹೊತ್ತಿನ ನಂತರ ಮಹಿಳೆಗೆ ಯಾವುದೇ ತೊಂದರೆಯನ್ನು ನೀಡದೆ ನಾಗರಹಾವು ಇಳಿದು ಹೋಗಿದೆ. ನಿನ್ನೆ ಮಧ್ಯಾಹ್ನ ನಡೆದಿರೋ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:13 pm, Sat, 27 August 22

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ