AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಲಗಿದ್ದ ಮಹಿಳೆ ಮೇಲೆ ಹೆಡೆಬಿಚ್ಚಿ ನಿಂತ ನಾಗರಹಾವು, ಕಾಪಾಡು ಶ್ರೀಶೈಲ ಮಲ್ಲಯ್ಯ ಅಂತಾ ಪ್ರಾರ್ಥಿಸಿದ ಮಹಿಳೆ

ಜಮೀನಿನಲ್ಲಿ ವಿಶ್ರಾಂತಿ ತೆಗೆದುಕೊಳ್ಳಲೆಂದು ಮಲಗಿದ್ದ ಮಹಿಳೆಯ ಮೇಲೆ ನಾಗರಹಾವೊಂದು ಹೆಡೆಬಿಚ್ಚಿ ನಿಂತಿಕೊಂಡಿದೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral Video: ಮಲಗಿದ್ದ ಮಹಿಳೆ ಮೇಲೆ ಹೆಡೆಬಿಚ್ಚಿ ನಿಂತ ನಾಗರಹಾವು, ಕಾಪಾಡು ಶ್ರೀಶೈಲ ಮಲ್ಲಯ್ಯ ಅಂತಾ ಪ್ರಾರ್ಥಿಸಿದ ಮಹಿಳೆ
ಮಲಗಿದ್ದ ಮಹಿಳೆ ಮೇಲೆ ಹೆಡೆ ಬಿಚ್ಚಿ ನಿಂತ ನಾಗರಹಾವು
TV9 Web
| Updated By: Rakesh Nayak Manchi|

Updated on:Aug 27, 2022 | 12:13 PM

Share

ಕಲಬುರಗಿ: ವಿಶ್ರಾಂತಿ ಪಡೆಯಲೆಂದು ಜಮೀನಿನಲ್ಲಿ ಮಲಗಿದ್ದ ಮಹಿಳೆ ಮೇಲೆ ನಾಗರಹಾವೊಂದು ಹೆಡೆಬಿಚ್ಚಿ ನಿಂತ ಘಟನೆಯೊಂದು ಜಿಲ್ಲೆಯ ಅಫಜಲಪುರ ತಾಲೂಕಿನ ಮಲ್ಲಾಬಾದ್ ಗ್ರಾಮದಲ್ಲಿ ನಡೆದಿದೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಭಯಬೀತಿಗೊಂಡಿದ್ದಾರೆ. ಗ್ರಾಮದ ಭಾಗಮ್ಮ ಬಡದಾಳ್ ಎಂಬುವರು ತಮ್ಮ ಜಮೀನಿನಲ್ಲಿ ಮಲಗಿದ್ದಾಗ ಮೈಮೇಲೆ ಬಂದ ನಾಗರಹಾವು ಹೆಡೆಎತ್ತಿ ನಿಂತುಕೊಂಡಿದೆ. ಈ ವೇಳೆ ಪ್ರಾಣ ಭೀತಿ ಅನುಭವಿಸಿದ ಮಹಿಳೆ ಕೈ ಮುಗಿದು ದೇವರಲ್ಲಿ ಬೇಡಿಕೊಂಡಿದ್ದಾರೆ.

ವೈರಲ್ ವಿಡಿಯೋದಲ್ಲಿ ಇರುವಂತೆ, ಭಾಗಮ್ಮ ಅವರ ಜಮೀನಿನಲ್ಲಿ ವಿಶ್ರಾಂತಿ ಪಡೆಯಲೆಂದೇ ಒಂದು ಮಲಗುವ ಮಂಚ ಇದೆ. ಇದರಲ್ಲಿ ಮಲಗಿಕೊಂಡಿದ್ದ ಭಾಗಮನ್ನ ಮೇಲೆ ನಾಗರಹಾವೊಂದು ಹತ್ತಿ ಹೆಡೆಬಿಚ್ಚಿ ನಿಂತುಕೊಂಡಿದೆ. ಇದನ್ನು ತಿಳಿದ ಭಾಗಮ್ಮ ಯಾವುದೇ ಆತುರದ ನಿರ್ಧಾರಗಳನ್ನು ಕೈಗೊಳ್ಳದೆ ಪ್ರಾಭ ಭಯದಿಂದಲೇ “ಕಾಪಾಡು ಶ್ರೀಶೈಲ ಮಲ್ಲಯ್ಯ” ಎಂದು ಕೈಗಳನ್ನು ಮುಗಿದು ಪ್ರಾರ್ಥಿಸಿದ್ದಾರೆ. ಇದಾಗಿ ಕೆಲಹೊತ್ತಿನ ನಂತರ ಮಹಿಳೆಗೆ ಯಾವುದೇ ತೊಂದರೆಯನ್ನು ನೀಡದೆ ನಾಗರಹಾವು ಇಳಿದು ಹೋಗಿದೆ. ನಿನ್ನೆ ಮಧ್ಯಾಹ್ನ ನಡೆದಿರೋ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:13 pm, Sat, 27 August 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್