AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವೃದ್ಧ ಪೋಷಕರನ್ನು ಪಲ್ಲಕ್ಕಿಯಲ್ಲಿ ಕೂರಿಸಿ ಕನ್ವರ್ ಯಾತ್ರೆ ಕೈಗೊಂಡ ಆಧುನಿಕ ಶ್ರವಣ ಕುಮಾರ, ವೈರಲ್ ವಿಡಿಯೋ ಇಲ್ಲಿದೆ

ತನ್ನ ವಯಸ್ಸಾದ ತಂದೆ ತಾಯಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿಕೊಂಡು ಹೆಗಲ ಮೇಲೆಹೊತ್ತುಕೊಂಡು ಕನ್ವರ್ ಯಾತ್ರೆಗೆ ಹೋಗುತ್ತಿರುವ ಶಿವಭಕ್ತನ ವಿಡಿಯೋ ವೈರಲ್ ಆಗುತ್ತಿದೆ. ವಿಡಿಯೋ ನೋಡಿದ ನೆಟ್ಟಿಗರು, ಇಂತಹ ಮಗ ಎಲ್ಲಾ ಪೋಷಕರಿಗೂ ಸಿಗಲಿ ಎಂದು ಹಾರೈಸುತ್ತಿದ್ದಾರೆ.

Viral Video: ವೃದ್ಧ ಪೋಷಕರನ್ನು ಪಲ್ಲಕ್ಕಿಯಲ್ಲಿ ಕೂರಿಸಿ ಕನ್ವರ್ ಯಾತ್ರೆ ಕೈಗೊಂಡ ಆಧುನಿಕ ಶ್ರವಣ ಕುಮಾರ, ವೈರಲ್ ವಿಡಿಯೋ ಇಲ್ಲಿದೆ
ಪೋಷಕರನ್ನು ಪಲ್ಲಕ್ಕಿಯಲ್ಲಿ ಕೂರಿಸಿಕೊಂಡು ಕನ್ವರ್ ಯಾತ್ರೆ ಕೈಗೊಂಡ ಆಧುನಿಕ ಶ್ರವಣ ಕುಮಾರ
TV9 Web
| Updated By: Rakesh Nayak Manchi|

Updated on:Jul 22, 2022 | 1:00 PM

Share

ವಯಸ್ಸಾದಾಗ ಆತ್ಮವನ್ನು ಶುದ್ಧೀಕರಿಸಲು ತೀರ್ಥಯಾತ್ರೆಯ ನಾಲ್ಕು ಅತ್ಯಂತ ಪವಿತ್ರ ಸ್ಥಳಗಳಿಗೆ ಕರೆದೊಯ್ಯಬೇಕೆಂದು ಬಯಸಿದ್ದ ತಂದೆ ತಾಯಿಯನ್ನು ಬುಟ್ಟಿಯಲ್ಲಿ ಕೂರಿಸಿಕೊಂಡು ಹೆಗಲ ಮೇಲೆ ಹೊತ್ತು ಸಾಗಿದ ಶ್ರವಣ ಕುಮಾರನ ಕಥೆ ಕೇಳಿದ್ದೇವೆ. ಇದೀಗ ವಯಸ್ಸಾದರೆ ಸಾಕು ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸುವ, ಪೋಷಕರನ್ನು ಹೀಯಾಳಿಸುವ, ಮನೆಯಿಂದ ಹೊರಹಾಕುವ ಈ ಆಧುನಿಕ ಕಾಲದಲ್ಲಿ ಇಂತಹ ಶ್ರವಣ ಕುಮಾರ ಇದ್ದಾನೆ ಎಂದರೆ ನಂಬುತ್ತೀರಾ? ನಂಬಲೇ ಬೇಕು. ತನ್ನ ವಯಸ್ಸಾದ ತಂದೆ ತಾಯಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿಕೊಂಡು ಹೆಗಲ ಮೇಲೆಹೊತ್ತುಕೊಂಡು ಕನ್ವರ್ ಯಾತ್ರೆಗೆ ಹೋಗುತ್ತಿರುವ ಶಿವಭಕ್ತನ ವಿಡಿಯೋ ವೈರಲ್ (Video Viral) ಆಗುತ್ತಿದೆ.

ಕೊರೋನಾ ಹಿನ್ನೆಲೆ ಎರಡು ವರ್ಷಗಳಿಂದ ಉತ್ತರಾಖಂಡದಲ್ಲಿ ಸ್ಥಗಿತಗೊಂಡಿದ್ದ ವಾರ್ಷಿಕ ಕನ್ವರ್ ಯಾತ್ರೆ ಜು.14ರಂದು ಆರಂಭಗೊಂಡಿದೆ. ಈ ಯಾತ್ರೆಯು ಜು.26ರ ವರೆಗೆ ಇರಲಿದೆ. ಈ ಯಾತ್ರೆಗೆ ಶಿವಭಕ್ತನಾಗಿರುವ ವ್ಯಕ್ತಿಯೊಬ್ಬರು ತನ್ನ ವೃದ್ಧ ತಂದೆ ತಾಯಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿಕೊಂಡು ಹೆಗಲ ಮೇಲೆ ಹೊತ್ತು ಸಾಗುತ್ತಿರುವುದನ್ನು ವೈರಲ್ ವಿಡಿಯೋ ತೋರಿಸುತ್ತದೆ.

ಆಧುನಿಕ ಶ್ರವಣ ಕುಮಾರನ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡ ಐಪಿಎಸ್ ಅಧಿಕಾರಿ ಅಶೋಕ್ ಕುಮಾರ್, “ಇತ್ತೀಚಿನ ದಿನಗಳಲ್ಲಿ ವಯಸ್ಸಾದ ಪೋಷಕರನ್ನು ಅವಹೇಳನ ಮಾಡಲಾಗುತ್ತದೆ, ಅವರನ್ನು ಮನೆಯಿಂದ ಹೊರಹಾಕಲಾಗುತ್ತದೆ ಅಥವಾ ಅವರೊಂದಿಗೆ ವಾಸಿಸಲು ಅನುಮತಿಸುವುದಿಲ್ಲ… ಆದರೆ ಇಂದು ಇದಕ್ಕೆ ವಿರುದ್ಧವಾದ ನೋಟ ಕಂಡುಬಂದಿದೆ. ಲಕ್ಷಗಟ್ಟಲೆ ಶಿವಭಕ್ತರಲ್ಲಿ ಒಬ್ಬ ಶ್ರವಣ ಕುಮಾರನೂ ಇದ್ದಾನೆ, ಅವನು ತನ್ನ ವಯಸ್ಸಾದ ಹೆತ್ತವರೊಂದಿಗೆ ಪಲ್ಲಕ್ಕಿಯಲ್ಲಿ ಕನ್ವರ್ ಯಾತ್ರೆಗೆ ಬಂದಿದ್ದಾನೆ. ನನ್ನ ಗೌರವಗಳು! ” ಎಂದು ಶೀರ್ಷಿಕೆ ಬರೆದಿದ್ದಾರೆ.

ವಿಡಿಯೋವನ್ನು ಜು.19ರಂದು ಹಂಚಿಕೊಳ್ಳಲಾಗಿದ್ದು, ಈವರೆಗೆ 12 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಸಂಗ್ರಹಿಸಿದ್ದು, ಸಾವಿರಕ್ಕೂ ಹೆಚ್ಚು ಲೈಕ್​ಗಳು ಬಂದಿವೆ ಮತ್ತು ನೂರಾರು ರೀಟ್ವೀಟ್​ಗಳು ಆಗಿವೆ. ವಿಡಿಯೋ ನೋಡಿದ ನೆಟ್ಟಿಗರು ಮನತುಂಬಿ ಶಿವಭಕ್ತನನ್ನು ಕೊಂಡಾಡಲು ಪ್ರಾರಂಭಿಸಿದ್ದಾರೆ.

ವ್ಯಕ್ತಿಯೊಬ್ಬರು ಕಾಮೆಂಟ್ ಮಾಡಿ, “ಅಯ್ಯೋ, ಇಂದಿನ ಕಾಲದಲ್ಲಿ ಅಂತಹ ಮಗನನ್ನು ಪಡೆದ ಅಂತಹ ಸಂತೋಷ, ಶ್ರೀಮಂತ, ಅದೃಷ್ಟವಂತ ತಂದೆತಾಯಿಗಳು ಇದ್ದಾರೆ ಎಂದು ನೋಡುವುದು ತುಂಬಾ ಸಂತೋಷವಾಗಿದೆ. ಏಕೆಂದರೆ ಹೆಚ್ಚಿನ ದುರಾದೃಷ್ಟ ತಂದೆತಾಯಿಗಳು ಸಮಾಜದಲ್ಲಿ ಕಾಣುತ್ತಾರೆ, ಅವರು ಕೇವಲ ಅಯೋಗ್ಯ ಪುತ್ರರನ್ನು ಹೊಂದಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಮತ್ತೊಬ್ಬ ಬಳಕೆದಾರರು ಕಾಮೆಂಟ್ ಮಾಡಿ ಅವರ ಹೆತ್ತವರು ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ನಡೆಸುವಂತೆ ಪ್ರಾರ್ಥಿಸಿದರು. “ಶಿವನು ಅವನ ಎಲ್ಲಾ ಪ್ರಾರ್ಥನೆಗಳನ್ನು ಸ್ವೀಕರಿಸಲಿ ಮತ್ತು ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ನಡೆಸಲಿ” ಎಂದು ಹಾರೈಸಿದರು. ಇದರ ಹೊರತಾಗಿ ಕೆಲವರು, ಎಲ್ಲಾ ತಂದೆ ತಾಯಗಳು ಇಂತಹ ಯೋಗ್ಯ ಮಗನನ್ನು ಪಡೆಯಲಿ, ಶ್ರವಣ ಕುಮಾರ ಅವರಿಗೆ ದೊಡ್ಡ ಗೌರವಗಳು ಎಂಬಿತ್ಯಾದಿ ಕಾಮೆಂಟ್​ಗಳನ್ನು ಮಾಡಿದ್ದಾರೆ.

Published On - 12:59 pm, Fri, 22 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ