AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪೊಲೀಸ್ ಠಾಣೆಯಲ್ಲಿ ಜಾನಪದ ಗೀತೆ ಹಾಡಿದ ಬಾಲಕನ ವಿಡಿಯೋ ವೈರಲ್

ಕೇರಳದ ಪೊಲೀಸ್ ಠಾಣೆಯೊಂದರಲ್ಲಿ ಬಾಲಕನೊಬ್ಬ ಮಲಯಾಳಂ ಜಾನಪದ ಗೀತೆ ಹಾಡುವ ಮೂಲಕ ಇಂಟರ್ನೆಟ್​ನಲ್ಲಿ ಭಾರೀ ವೈರಲ್ ಆಗುತ್ತಿದ್ದಾನೆ. ಬಾಲಕನ ಹಾಡಿಗೆ ಮನಸೋತ ಪೊಲೀಸರು ಸಖತ್ ಎಂಜಾಯ್ ಮಾಡಿದ್ದಾರೆ.

Viral Video: ಪೊಲೀಸ್ ಠಾಣೆಯಲ್ಲಿ ಜಾನಪದ ಗೀತೆ ಹಾಡಿದ ಬಾಲಕನ ವಿಡಿಯೋ ವೈರಲ್
ಪೊಲೀಸ್ ಠಾಣೆಯಲ್ಲಿ ಜಾನಪದ ಗೀತೆ ಹಾಡಿದ ಬಾಲಕ
TV9 Web
| Updated By: Rakesh Nayak Manchi|

Updated on: Jul 29, 2022 | 3:15 PM

Share

ಬಾಲಕನೊಬ್ಬ ಜಾನಪದ ಗೀತೆಯನ್ನು ಹಾಡಿ ಭಾರೀ ಸುದ್ದಿಯಾಗಿದ್ದಾನೆ. ಅಷ್ಟಕ್ಕೂ ಆತ ಜಾನಪದ ಗೀತೆ ಹಾಡಿದ್ದು ಅಪರಾಧಗಳನ್ನು ನಿಗ್ರಹಿಸಲು ಮತ್ತು ಅಪರಾಧಿಗಳನ್ನು ದಂಡಿಸಲು ಇರುವ ಪೊಲೀಸ್ ಠಾಣೆಯಲ್ಲಿ. ಕೇರಳದ ಪಾಲಕ್ಕಾಡ್ ನಾಟುಕಲ್ ಪೊಲೀಸ್ ಠಾಣೆಯಲ್ಲಿ ಬಾಲಕನೊಬ್ಬ ಮಲಯಾಳಂ ಜಾನಪದ ಗೀತೆಯನ್ನು ಹಾಡಿ ಗಮನಸೆಳೆದಿದ್ದಾನೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗುತ್ತಿದೆ. ಜಾನಪದ ಗೀತೆಯನ್ನು ಬಾಲಕ ಬಹಳ ಉತ್ಸಾಹದಿಂದ ಹಾಡುವುದನ್ನು ವೈರಲ್ ವಿಡಿಯೋ (Viral Video) ತೋರಿಸುತ್ತದೆ.

ವಿಡಿಯೋದಲ್ಲಿ ಕಾಣುವಂತೆ, ಪೊಲೀಸ್ ಸಿಬ್ಬಂದಿಯೊಬ್ಬರು ಬಾಲಕನನ್ನು ಕುರ್ಚಿಯಲ್ಲಿ ಕೂರಿಸಿ ಜಾನಪದ ಗೀತೆ ಹಾಡಿಸುತ್ತಾರೆ. ಈ ವೇಳೆ ಬಾಲಕ ಬಹಳ ಉತ್ಸಾಹದಿಂದ ಮಲಯಾಳಂ ಜಾನಪದ ಹಾಡನ್ನು ಹಾಡಲು ಪ್ರಾರಂಭಿಸುತ್ತಾನೆ. ಇದೇ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ಮತ್ತೊಂದು ಕುರ್ಚಿಯನ್ನು ಬಾಲಕನ ಮುಂದೆ ತಂದಿಟ್ಟಾಗ ಆತ ಕುರ್ಚಿಯನ್ನು ಬಾರಿಸಿಕೊಂಡು ಹಾಡು ಹಾಡುತ್ತಾನೆ. ಬಾಲಕನ ಹಾಡಿಗೆ ಮನಸೋತ ಪೊಲೀಸರು ಖುಷಿ ಪಡುತ್ತಿರುವುದು ಕಂಡುಬಂದಿದೆ.

ಇದರ ವಿಡಿಯೋವನ್ನು ಕೇರಳ ಪೊಲೀಸರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಜಾಕಿರ್ ಭಾಯ್ ಪೊಲೀಸ್ ಠಾಣೆಗೆ ಪ್ರವೇಶಿಸಿ ಹಾಡನ್ನು ಹಾಡಬಹುದೇ? ಪಾಲಕ್ಕಾಡ್ ನಟ್ಟುಕಲ್ ಪೊಲೀಸ್ ಠಾಣೆಯಲ್ಲಿ ನೋಡಿದ್ದೇವೆ” ಎಂದು ಮಲಯಾಳಂನಲ್ಲಿ ಶೀರ್ಷಿಕೆಯನ್ನು ಬರೆಯಲಾಗಿದೆ.

ಆನ್‌ಲೈನ್‌ನಲ್ಲಿ ಹಂಚಿಕೊಂಡ ನಂತರ ವಿಡಿಯೋ ಸುಮಾರು 4 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಲೈಕ್​ಗಳನ್ನು ಪಡೆದುಕೊಂಡಿದೆ. ವಿಡಿಯೋ ನೋಡಿದ ನೆಟ್ಟಿಗರು ಕೂಡ ಬಾಲಕನ ಹಾಡನ್ನು ಕೇಳುತ್ತಾ ಸಖತ್ ಎಂಜಾಯ್ ಮಾಡಿದ್ದಾರೆ. ನೆಟ್ಟಿಗರೊಬ್ಬರು ಈ ಸನ್ನಿವೇಶವನ್ನು ಆಕ್ಷನ್ ಹೀರೋ ಬಿಜು ಚಿತ್ರದ ದೃಶ್ಯಕ್ಕೆ ಹೋಲಿಸಿದ್ದಾರೆ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ