AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಭಯವಿಲ್ಲದೆ ಬೈಕ್ ಓಡಿಸುತ್ತಿರುವ ಹನ್ನೆರಡರ ಪೋರ, ಇದು ಸರಿಯಲ್ಲ ಎಂದ ನೆಟ್ಟಿಗರು

ಈಗಿನ ಮಕ್ಕಳು ತುಂಬಾನೇ ಬುದ್ದಿವಂತರು, ಎಲ್ಲವನ್ನು ಬೇಗನೇ ಕಲಿತುಕೊಂಡು ಬಿಡುತ್ತಾರೆ. ಆದರೆ ಇದೀಗ 10-12 ವರ್ಷದ ಬಾಲಕನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಬಾಲಕನು ಬೈಕ್ ಓಡಿಸುತ್ತಿರುವುದನ್ನು ಕಾಣಬಹುದು. ಈ ಬಾಲಕನಿಗೆ ಕಾಲು ನೆಲಕ್ಕೆ ಎಟುಕದೇ ಇದ್ದರೂ, ಬೈಕ್ ಓಡಿಸುತ್ತಿರುವ ರೀತಿಗೆ ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದಾರೆ.

Viral Video : ಭಯವಿಲ್ಲದೆ ಬೈಕ್ ಓಡಿಸುತ್ತಿರುವ ಹನ್ನೆರಡರ ಪೋರ, ಇದು ಸರಿಯಲ್ಲ ಎಂದ ನೆಟ್ಟಿಗರು
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 25, 2024 | 3:14 PM

ಸೋಶಿಯಲ್ ಮೀಡಿಯಾಗಳಲ್ಲಿ ಒಂದಲ್ಲ ಒಂದು ವಿಡಿಯೋಗಳು ವೈರಲ್ ಆಗುವುದು ಮಾಮೂಲಿ. ಈ ಪುಟಾಣಿ ಮಕ್ಕಳ ಸಾಹಸಮಯ ವಿಡಿಯೋಗಳು ನೆಟ್ಟಿಗರ ಗಮನ ಸೆಳೆಯುತ್ತಿರುತ್ತದೆ. ಮಕ್ಕಳ ಕೆಲ ವಿಡಿಯೋಗಳು ನಗು ತರಿಸಿದರೆ, ಇನ್ನು ಕೆಲವು ವಿಡಿಯೋಗಳನ್ನು ನೋಡಿದಾಗ ಎದೆ ಝಲ್ ಎನ್ನುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಹತ್ತು ಹನ್ನೆರಡ ಪೋರನೊಬ್ಬನು ಬೈಕ್ ಓಡಿಸುತ್ತಿರುವುದನ್ನು ಕಾಣಬಹುದು. ಈ ಪೋರನಿಗೆ ಹತ್ತು ಹನ್ನೆರಡು ವರ್ಷ ವಯಸ್ಸು ಆಗಿರುವಂತೆ ಕಾಣುತ್ತದೆ.

ಈ ವಿಡಿಯೋವನ್ನು ನೋಡಿದಾಗ ಈ ಪುಟ್ಟ ಬಾಲಕನ ಎರಡೂ ಕಾಲುಗಳು ನೆಲಕ್ಕೆ ನಿಲುಕುವುದಿಲ್ಲ ಎನ್ನುವುದು ಸ್ಪಷ್ಟವಾಗಿ ತಿಳಿಯುತ್ತಿದೆ. ಆದರೆ ಈ ಬಾಲಕ ಮಾತ್ರ ಬೈಕ್ ಅನ್ನು ಸ್ಟಾರ್ಟ್ ಮಾಡಲು ಪ್ರಯತ್ನಿಸುತ್ತಿದ್ದನು. ಇತ್ತ ಬೈಕ್ ಸ್ಟಾರ್ಟ್ ಮಾಡಿ ತನ್ನ ಹಿಂದೆ ಚಿಕ್ಕ ಮಗುವನ್ನು ಕೂರಿಸಿಕೊಂಡು ಬೈಕ್ ಓಡಿಸಿಕೊಂಡು ಹೋಗಿದ್ದಾನೆ. ಈ ವಿಡಿಯೋವನ್ನು ಹರಿಯಾಣದ ಕೇಡರ್‌ನ ಐಪಿಎಸ್ ಅಧಿಕಾರಿ ಪಂಕಜ್ ನೈನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ‘ಇದಕ್ಕಿಂತ ಹೆಚ್ಚು ಅಪಾಯಕಾರಿ ಏನು! ಪೋಷಕರೇ, ದಯವಿಟ್ಟು ನಿಮ್ಮ ಪ್ರೀತಿಪಾತ್ರರನ್ನು ನೋಡಿಕೊಳ್ಳಿ. ಈ ಜೀವನ ಅಮೂಲ್ಯವಾದುದು’. ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕಳ್ಳರನ್ನು ಹಿಡಿಯುವ ಪೊಲೀಸರೇ ಕಳ್ಳತನ ಮಾಡಿದ್ರೆ ಹೇಗೆ? ಬಲ್ಬ್ ಕದ್ದ ಕಾನ್‌ಸ್ಟೆಬಲ್

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಕೇವಲ 25 ಸೆಕೆಂಡ್ ಗಳ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಇದುವರೆಗೆ ಹನ್ನೆರಡು ಸಾವಿರಕ್ಕೂ ಅಧಿಕ ವೀಕ್ಷಣೆ ಕಂಡಿದೆ. ನೆಟ್ಟಿಗರು ವಿಡಿಯೋ ನೋಡಿ ಆತಂಕ ವ್ಯಕ್ತಪಡಿಸಿದ್ದು, ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ. ಬಳಕೆದಾರರೊಬ್ಬರು,’ ಕೆಲವು ಪೋಷಕರು ತಮ್ಮ ಮಕ್ಕಳು ಇಂತಹ ಕೆಲಸಗಳನ್ನು ಮಾಡುತ್ತಾರೆ ಎಂದು ಹೆಮ್ಮೆಪಡುತ್ತಾರೆ’ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ‘ಇದು ತುಂಬಾ ಅಪಾಯಕಾರಿ’ ಎಂದಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ನನ್ನನ್ನು ತಮಿಳರು ಕೆಣಕಬಹುದು: ವಸಿಷ್ಠ ಸಿಂಹ
ನನ್ನನ್ನು ತಮಿಳರು ಕೆಣಕಬಹುದು: ವಸಿಷ್ಠ ಸಿಂಹ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಪಾಕ್​ಗೆ ಬಿಎಸ್‌ಎಫ್ ನೀಡಿದ ಹೊಡೆತದಿಂದ ಹೊರಬರಲು ವರ್ಷವೇ ಬೇಕು; ಅಮಿತ್ ಶಾ
ಪಾಕ್​ಗೆ ಬಿಎಸ್‌ಎಫ್ ನೀಡಿದ ಹೊಡೆತದಿಂದ ಹೊರಬರಲು ವರ್ಷವೇ ಬೇಕು; ಅಮಿತ್ ಶಾ
ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್